ಮಹಿಳಾ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತದ ರೋಮಾಂಚಕ ಕದನ: ಸೂಪರ್ ಓವರ್ ನ ಅದ್ಭುತ ಪ್ರದರ್ಶನದಿಂದ ಪಂದ್ಯ ಭಾರತದ ತೆಕ್ಕೆಗೆ

ಮುಂಬೈ: ಇಲ್ಲಿನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತು ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ನಡುವೆ ಟಿ20 ಪಂದ್ಯ ನಡೆದಿದ್ದು, ಇದು ಅತ್ಯುತ್ತಮ ಟಿ20 ಪಂದ್ಯ ಎಂದು ಬಣ್ಣಿಸಲಾಗುತ್ತಿದೆ. ಐದು ಪಂದ್ಯಗಳ ಸರಣಿಯ ಎರಡನೇ ಮಹಿಳಾ ಟಿ20 ಪಂದ್ಯದಲ್ಲಿ 30,000 ಕ್ಕೂ ಹೆಚ್ಚು ಪ್ರೇಕ್ಷಕರ ಸಮ್ಮುಖದಲ್ಲಿ ಆಡಿದ ಈ ಆಟವು ಟೈನಲ್ಲಿ ಕೊನೆಗೊಂಡಿತ್ತು. ಇದಾದ ಬಳಿಕ ಸೂಪರ್ ಓವರ್ ಎಸೆಯಲಾಯಿತು. ಟೀಮ್ ಇಂಡಿಯಾದ ಮಹಿಳಾ ಘಟಕವು ಮೊದಲ ಬಾರಿಗೆ ಸೂಪರ್ ಓವರ್ ಆಡುತ್ತಿತ್ತು […]

ಕಿಶೋರ ಯಕ್ಷಗಾನ ಸಂಭ್ರಮ -2022 ಸಮಾರೋಪ ಸಮಾರಂಭ; ಸಾಧಕ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ,ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಸಹಯೋಗದೊಂದಿಗೆ ಕಿಶೋರ ಯಕ್ಷಗಾನ ಸಂಭ್ರಮ -2022ರ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣವನ್ನು ನೀಡಿದ ಗುರುಗಳನ್ನು ಸನ್ಮಾನಿಸಿದರು. ಕರ್ನಾಟಕದ ಗಂಡು ಕಲೆಯಾದ ಯಕ್ಷಗಾನವು ಹಿಂದಿನ ಅಶಿಕ್ಷಿತ ಜನತೆಗೆ ದೇವರ ಪರಿಚಯ ಮತ್ತು ಪುರಾಣಗಳ ಸಾರವನ್ನು ತಿಳಿಸಿದೆ. ಈಗಿನ ಪ್ರಜೆಗಳಿಗೆ ಅಧ್ಯಾತ್ಮದ ಬಗ್ಗೆ ತಿಳಿಯಲು ಇದು ಉತ್ತಮವಾದ […]

ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣ: ಸೂಕ್ತ ಕಾನೂನು ರಚಿಸುವಂತೆ ಗೃಹಸಚಿವರಿಗೆ ಹಿಂಜಾವೇ ಮನವಿ

ಬೆಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್​ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಕಾನೂನು ರೂಪಿಸುವ ಕುರಿತು ಹಿಂದುಪರ ಸಂಘಟನೆಗಳ ನಿಯೋಗವು ದೂರು ಸಲ್ಲಿಸಿ, ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ಸ್ಪಂದಿಸಿದ ಸಚಿವರು ಪೊಲೀಸ್ ದಳ ರಚಿಸುವ ಕುರಿತಾಗಿ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ. ಜಯಮಹಲ್ ನ ಗೃಹ ಸಚಿವರ ಅಧಿಕೃತ ನಿವಾಸದಲ್ಲಿ ಹಿಂದೂ ಜಾಗರಣ ವೇದಿಕೆಯ ಸದಸ್ಯರು […]

ಸರಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಯನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಪೂರೈಸುವಂತೆ ವೆರೋನಿಕಾ ಕರ್ನೆಲಿಯೋ ಒತ್ತಾಯ

ಉಡುಪಿ: ಸದಾ ಬೇಟಿ ಬಚಾವೊ ಬೇಟಿ ಪಡಾವೊ ಎನ್ನುವ ಬಿಜೆಪಿ ಸರಕಾರಕ್ಕೆ ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಶುಚಿ ಯೋಜನೆಯಡಿ ನೀಡಲಾಗುವ ಸ್ಯಾನಿಟರಿ ನ್ಯಾಪ್ಕಿನ್ ಪೊರೈಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ವಿಚಾರ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ವತಿಯಿಂದ ಶುಚಿ ಯೋಜನೆಯಡಿ ನ್ಯಾಪ್ಕಿನ್ ಖರೀದಿಸಿ ವಿತರಿಸುವ ಜವಾಬ್ದಾರಿ ಹೊತ್ತಿದ್ದು, ಕಳೆದ ಒಂದೂವರೆ ವರ್ಷದಿಂದ ಪೂರೈಸದಿರುವುದು ಸರಕಾರದ ನಿರ್ಲಕ್ಷ್ಯತನಕ್ಕೆ ಹಿಡಿದ ಕೈಗನ್ನಡಿಯಾಗಿದೆ. ದೇಶದ ಪ್ರಧಾನಿಯವರು ಮಾತೆತ್ತಿದ್ದರೆ […]

ಕೊರಗಜ್ಜ ದೈವದ ಕುರಿತ ‘ಕರಿ ಹೈದ ಕರಿ ಅಜ್ಜ’ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ ಹಿಂದಿ ನಟ ಕಬೀರ್ ಬೇಡಿ

ಬೆಂಗಳೂರು: ಹಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಗುರುತಿಸಿಕೊಂಡಿರುವ ನಟ ಕಬೀರ್ ಬೇಡಿ ಈಗ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ್ದಾರೆ. ಸುಧೀರ್ ಅತ್ತಾವರ ನಿರ್ದೇಶನದ ‘ಕರಿ ಹೈದ.. ಕರಿ ಅಜ್ಜ..’ ಚಿತ್ರದಲ್ಲಿ ಕಬೀರ್ ಬೇಡಿ ಬಣ್ಣ ಹಚ್ಚಲಿದ್ದಾರೆ. ಸುಧೀರ್ ಅತ್ತಾವರ ನಿರ್ದೇಶನದ ‘ಕರಿ ಹೈದ.. ಕರಿ ಅಜ್ಜ..’ ಚಿತ್ರದಲ್ಲಿ ನಟಿಸಲು ಖುಷಿಯಾಗುತ್ತಿದೆ. ‘ಕೊರಗಜ್ಜ’ ದೈವದ ಕುರಿತ ಈ ಚಿತ್ರದಲ್ಲಿ ರಾಜನ ಪಾತ್ರದಲ್ಲಿ ನಟಿಸಿದ್ದೇನೆ. ಶ್ರುತಿ, ಭವ್ಯ, ಭರತ್ ಸೂರ್ಯ ಮುಂತಾದ ಕಲಾವಿದರ ಜೊತೆ ನಟಿಸಿದ್ದು ಖುಷಿ ಕೊಟ್ಟಿದೆ ಎಂದು ಕಬೀರ್ […]