ಬ್ರಹ್ಮಾವರ: ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಅಣಬೆ ಬೇಸಾಯ ತರಬೇತಿ

ಬ್ರಹ್ಮಾವರ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಕೆನರಾ ಬ್ಯಾಂಕ್ ನ ಸಹಯೋಗದೊಂದಿಗೆ ನಡೆಯುತ್ತಿರುವ ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಊಟ, ವಸತಿ, ಸಮವಸ್ತ್ರ , ತರಬೇತಿ ಕಿಟ್ ನೊಂದಿಗೆ ಸಂಪೂರ್ಣ ಉಚಿತ ಅಣಬೆ ಬೇಸಾಯ ತರಬೇತಿ ಯುವಕ-ಯುವತಿಯರಿಗೆ ಪುರುಷ ಮತ್ತು ಮಹಿಳೆಯರಿಗೆ ಡಿ. 26 ರಿಂದ ಜನವರಿ 04 ವರೆಗೆ 10 ದಿನಗಳ ಕಾಲ ನಡೆಯಲಿದೆ. ಹೆಚ್ಚು ಬೇಡಿಕೆ ಇರುವ ಹಾಗೂ ಜೌಷಧೀಯ ಗುಣ ಹೊಂದಿರುವ ಅಣಬೆ ಕೃಷಿಗೆ […]

ಜಿಲ್ಲೆಯಲ್ಲಿ ಶಾಲಾ ಮಕ್ಕಳ ದೌರ್ಜನ್ಯ ಪ್ರಕರಣ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ: ವೀಣಾ ಬಿ.ಎನ್.

ಉಡುಪಿ: ಇತ್ತೀಚೆಗೆ ರಾಜ್ಯದ ಕೆಲವು ಜಿಲ್ಲೆಗಳ ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಕುರಿತಂತೆ ವರದಿಯಾಗುತ್ತಿದ್ದು, ಮಕ್ಕಳು ಅತ್ಯಂತ ಮೃದು ಮತ್ತು ಸೂಕ್ಷ್ಮ ಮನಸ್ಸಿನವರಾಗಿದ್ದು, ಶಿಕ್ಷಕರು ಮಕ್ಕಳ ಸ್ವಭಾವವನ್ನು ಅರಿತು, ಸ್ಥಿತಪ್ರಜ್ಞರಾಗಿ ಮಕ್ಕಳೊಂದಿಗೆ ವರ್ತಿಸಬೇಕಾಗಿರುತ್ತದೆ. ಈ ಬಗ್ಗೆ ಶಿಕ್ಷಕ ತರಬೇತಿ ಅವಧಿಯಲ್ಲಿ ತರಬೇತಿ ನೀಡಿದ್ದರೂ ಸಹ ಇಂತಹ ಘಟನೆಗಳು ನಡೆಯುತ್ತಿರುವುದಕ್ಕೆ ಅತ್ಯಂತ ಬೇಸರ ವ್ಯಕ್ತಪಡಿಸಿದ ಅಪರ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಇಂತಹ ಯಾವುದೇ ಪ್ರಕರಣಗಳು ನಡೆಯದಂತೆ ಮುನ್ನೆಚ್ಚರಿಕೆಯಾಗಿ, ಶಿಕ್ಷಕರು ಮಕ್ಕಳೊಂದಿಗೆ ಸೂಕ್ಷ್ಮವಾಗಿ ಮತ್ತು ಸಂಯಮದಿಂದ ವರ್ತಿಸುವ ಕುರಿತಂತೆ […]

ವಿಟ್ಲ: ಅಜ್ಞಾತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

ವಿಟ್ಲ: ಇಲ್ಲಿನ ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆ ಜರಿಮೂಲೆ ಎಂಬಲ್ಲಿ ಕೊಳೆತ ಸ್ಥಿತಿಯಲ್ಲಿ ಅಜ್ಞಾತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ವರದಿಯಾಗಿದೆ. ಇಲ್ಲಿನ ನಿವಾಸಿಗಳು ಗುಡ್ಡಕ್ಕೆ ಸೊಪ್ಪು ಮತ್ತು ಸೌದೆ ತರಲೆಂದು ಹೋಗಿದ್ದ ಸಮಯದಲ್ಲಿ ಒಂದು ಮೊಬೈಲ್ ಒಂದು ಪತ್ತೆಯಾಗಿದೆ. ಇದನ್ನು ಕಂಡು ಸುತ್ತ ಮುತ್ತ ತಡಕಾಡಿದಾಗ ಮೃತದೇಹವೊಂದು ಪತ್ತೆಯಾಗಿದ್ದು ನಿವಾಸಿಗಳು ಭಯಗೊಂಡಿದ್ದಾರೆ. ಅಲ್ಲೇ ಪಕ್ಕದಲ್ಲಿರುವ ಮರದಲ್ಲಿ ಹಗ್ಗವೊಂದು ನೇತಾಡುತ್ತಿದ್ದು ಕೊಳೆತ ಮೃತದೇಹವು ನೆಲದಲ್ಲಿ ಬಿದ್ದಿತ್ತು. ದೇಹದ ಕುರುಹಾಗಿ ಅಸ್ಥಿಪಂಜರ ಮಾತ್ರ ಕಾಣಿಸುತ್ತಿದ್ದುದರಿಂದ ವ್ಯಕ್ತಿಯು ಸತ್ತು ಹಲವು […]

ಕುಂದಾಪುರ: ಡಿ. 22 ರಂದು ವಿದ್ಯುತ್ ವ್ಯತ್ಯಯ

ಕುಂದಾಪುರ: 110/11 ಕೆ.ವಿ ಹೊಸಂಗಡಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 22 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಸಿದ್ಧಾಪುರ, ಹಳ್ಳಿಹೊಳೆ, ಹೊಸಂಗಡಿ, ಜನ್ಸಾಲೆ ಮಾರ್ಗಗಳಲ್ಲಿ, ಉಳ್ಳೂರು-74, ಯಡಮೊಗೆ, ಕಮಲಶಿಲೆ, ಮತ್ತು ಆಜ್ರಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ಜಾಗತಿಕವಾಗಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ: ರೂಪಾಂತರಗಳ ಮೇಲೆ ನಿಗಾ ಇಡಲು ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್, ಚೀನಾ ಮತ್ತು ಅಮೇರಿಕಾದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಹೊಸ ಏರಿಕೆಯ ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಂತಾರಾಷ್ಟ್ರೀಯ ಸನ್ನಿವೇಶವನ್ನು ಪರಿಗಣಿಸಿ ಸಚಿವರು ಬುಧವಾರದಂದು ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎನ್ನಲಾಗಿದೆ. ಮಂಗಳವಾರದಂದು, ಆರೋಗ್ಯ ಸಚಿವಾಲಯವು ಹೊಸ ರೂಪಾಂತರಗಳ ಬಗ್ಗೆ ನಿಗಾ ಇಡಲು ಸಕಾರಾತ್ಮಕ ಮಾದರಿಗಳ ಸಂಪೂರ್ಣ ಜೀನೋಮ್ ಅನುಕ್ರಮವನ್ನು ಪತ್ತೆ ಹಚ್ಚಲು ಎಲ್ಲಾ ರಾಜ್ಯಗಳಿಗೆ […]