ಎಕ್ಸ್ ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಗೆ ಭಾಜನವಾಯ್ತು ನಾಗೇಶ್ ಆಚಾರ್ಯ ಕೋಟ ನಿರ್ಮಿಸಿದ ವಿರಾಟ್ ಕೊಹ್ಲಿಯ ವಿಶಿಷ್ಟ ಕಲಾಕೃತಿ

ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಿತ್ರಪಾಡಿ ಗ್ರಾಮದ ಕಾರ್ತಟ್ಟು ಸುಬ್ರಾಯ ಆಚಾರ್ ಹಾಗೂ ಸುಶೀಲ ದಂಪತಿಯ ಹಿರಿಯ ಪುತ್ರ ನಾಗೇಶ್ ಆಚಾರ್ಯ ಕೋಟ ಇತ್ತೀಚೆಗೆ ತೆಂಗಿನ ಗರಿಯಲ್ಲಿ ರಚಿಸಿದ ಭಾರತೀಯ ಕ್ರಿಕೆಟ್‌ ತಾರೆ ವಿರಾಟ್ ಕೊಹ್ಲಿಯ ಕಲಾಕೃತಿಯು ಎಕ್ಸ್ ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಹಿರಿಮೆಗೆ ಪಾತ್ರವಾಗಿದೆ. ನಾಗೇಶ್ ಆಚಾರ್ಯ ಸ್ವಂತ ಮರದ ಕೆತ್ತನೆಯ ಶಿಲ್ಪಕಲಾ ವೃತ್ತಿಯನ್ನು ನಿರ್ವಹಿಸುತ್ತಿದ್ದಾರೆ. ತನ್ನ ವೃತ್ತಿ ಬದುಕಿನ ಬಿಡುವಿನ ವೇಳೆಯಲ್ಲಿ ಎಳೆಯ ವಯಸ್ಸಿನಲ್ಲಿ ಆಸಕ್ತಿ ಹೊಂದಿದ್ದ ಚಿತ್ರಕಲೆಯನ್ನೇ ನೆಚ್ಚಿನ ಹವ್ಯಾಸವಾಗಿ ಮುಂದುವರಿಸಿಕೊಂಡು ತನ್ನೊಳಗಿನ […]

ಉಡುಪಿ: 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಮುಂಜಾಗ್ರತಾ ಡೋಸ್ ಪಡೆಯುವುದು ಅಗತ್ಯ

ಉಡುಪಿ: ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ ಹಾಗೂ ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್ – 19 4ನೇ ಅಲೆ ಪ್ರಕರಣಗಳು ಹೆಚ್ಚುತ್ತಿದ್ದು, ಇದರಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಮುಂಜಾಗ್ರತಾ ಡೋಸ್ ಪಡೆಯುವುದು ಅಗತ್ಯವಾಗಿದೆ. ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟವರಲ್ಲಿ 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ದಾಟಿದವರು ಸಮೀಪದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯ ಬಗ್ಗೆ ಖಚಿತಪಡಿಸಿಕೊಂಡು ದಿನಾಂಕ ಮತ್ತು ಸಮಯವನ್ನು […]

ಡಿ.30 ರಂದು ಉಡುಪಿಯ ನೂತನ ಅನೆಕ್ಸ್ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಸಮಾರಂಭ

ಜಿಲ್ಲಾ ನ್ಯಾಯಾಂಗ, ಉಡುಪಿ ಲೋಕೋಪಯೋಗಿ ಇಲಾಖೆ, ಉಡುಪಿ ಮತ್ತು ವಕೀಲರ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ನೂತನ ಅನೆಕ್ಸ್ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಸಮಾರಂಭವು ಡಿ.30 ಶುಕ್ರವಾರ ದಂದು ಬೆಳಿಗ್ಗೆ 10:30 ಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ. ಸರ್ವೋಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ  ಎಸ್. ಅಬ್ದುಲ್ ನಜೀರ್ ಇವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ  ಪ್ರಸನ್ನ ಬಿ. ವರಾಲೆ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವಾನ್ವಿತ ನ್ಯಾಯಮೂರ್ತಿ  ಬಿ. ವೀರಪ್ಪ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ […]

ಹೊಸ ವರ್ಷದ ಆಚರಣೆಗಳು 1 ಗಂಟೆಯ ಮೊದಲು ಮುಕ್ತಾಯ; ಮಾಸ್ಕ್ ಕಡ್ಡಾಯ: ಡಾ.ಕೆ ಸುಧಾಕರ್

ಬೆಂಗಳೂರು: ಜಗತ್ತಿನಾದ್ಯಂತ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಭಾರತದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ರಾಜ್ಯ ಸರ್ಕಾರವು ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಿದೆ. ಚಿತ್ರಮಂದಿರಗಳು, ಶಾಲಾ-ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಪಬ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳಲ್ಲಿ ಹೊಸ ವರ್ಷವನ್ನು ಆಚರಿಸಲು ಮಾಸ್ಕ್‌ಗಳನ್ನು ಕಡ್ಡಾಯಗೊಳಿಸಲಾಗಿದೆ. ಹೊಸ ವರ್ಷದ ಆಚರಣೆಗಳು 1 ಗಂಟೆಯ ಮೊದಲು ಮುಕ್ತಾಯಗೊಳ್ಳುತ್ತವೆ. ಭಯಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ವಹಿಸಿ ಎಂದು ಕರ್ನಾಟಕ ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದ್ದಾರೆ. Masks have been made mandatory […]

ಕುದುರೆ ಸವಾರನಿಗೆ ಬಸ್ ಡಿಕ್ಕಿ: ಕುದುರೆ ಸಾವು; ಸವಾರನಿಗೆ ಗಾಯ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸೊಂದು ಕುದುರೆ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಕುದುರೆಯು ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ಭಾನುವಾರ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರರಾಗಿದ್ದಾರೆ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಸರ್ಕಾರಿ ಬಸ್ಸೊಂದು ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಪ್ಪಿನಂಗಡಿ ಸಮೀಪ ಪಿಲಿಗೂಡಿನ […]