ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣ: ಕೆ.ರಘುಪತಿ ಭಟ್

ಕಾರ್ಕಳ: ಇಲ್ಲಿನ ಪರ್ಕಳ-ಮಣಿಪಾಲ ರಾ.ಹೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಮಣಿಪಾಲದಿಂದ ಉಡುಪಿ ಸಂಪರ್ಕಿಸುವ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಕೆಳಪರ್ಕಳ ರಸ್ತೆಯನ್ನು ಸರಿಪಡಿಸಲು ಶಾಸಕ ರಘುಪತಿ ಭಟ್ ಸಭೆ ನಡೆಸಿದ್ದು ಅದರಂತೆ ಈಗ ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು ವಾಹನ ಸಂಚಾರಿಗಳು ನಿಟ್ಟುಸಿರು ಬಿಡುವಂತಾಗಿದೆ. ಪರ್ಕಳ – ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವುದರಿಂದ ಮಣಿಪಾಲ – ಉಡುಪಿ ಸಂಪರ್ಕಿಸುವ ವಾಹನಗಳ ಸುಗಮ ಸಂಚಾರಕ್ಕೆ ಪ್ರಸ್ತುತ ಇರುವ ಕೆಳಪರ್ಕಳದ ರಸ್ತೆಯನ್ನು ಸರಿಪಡಿಸಲು ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿ ರಸ್ತೆ […]

ಮೂಗಿನ ಕೋವಿಡ್ ಲಸಿಕೆ: ಖಾಸಗಿ ಆಸ್ಪತ್ರೆಗಳಲ್ಲಿ 800 ರೂ, ಸರ್ಕಾರಿ ಆಸ್ಪತ್ರೆಗಳಲ್ಲಿ 325 ರೂಗೆ ಲಭ್ಯ

ನವದೆಹಲಿ: ಭಾರತ್ ಬಯೋಟೆಕ್ ನ ಮೂಗಿನ ಕೋವಿಡ್ ಲಸಿಕೆ ಇಂಕೋವಾಕ್ ಬೆಲೆಗಳನ್ನು ಕೇಂದ್ರ ಸರಕಾರವು ಮಂಗಳವಾರ ನಿಗದಿಪಡಿಸಿದೆ. ಮೂಗಿನ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ಉಪಯೋಗಿಸಬಹುದಾಗಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ 800 ರೂ. ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ 325 ರೂಗಳಿಗೆ ಲಭ್ಯವಿರಲಿದೆ ಎಂದು ಸುದ್ದಿ ಸಂಸ್ಥೆ ಎ.ಎನ್.ಐ ವರದಿ ಮಾಡಿದೆ. ಜನವರಿ ನಾಲ್ಕನೇ ವಾರದಿಂದ ದೇಶಾದ್ಯಂತ ಇಂಕೋವಾಕ್ ಲಭ್ಯವಿರಲಿದೆ. 18 ವರ್ಷ ಮೇಲ್ಪಟ್ಟವರು, ಈಗಾಗಲೇ ಕೋವ್ಯಾಕ್ಸೀನ್ ಮತ್ತು ಕೋವಿಶೀಲ್ಡ್ ತೆಗೆದುಕೊಂಡಿರುವವರು ಬೂಸ್ಟರ್ ಡೋಸ್ ನ ಬಹು ಆಯ್ಕೆಯಾಗಿ ಇಂಕೋವಾಕ್ […]

ಸಫಾಯಿ ಕರ್ಮಚಾರಿಗಳಿಗೆ ಸರಕು ಸಾಗಾಣಿಕೆ ವಾಹನಕ್ಕಾಗಿ ಸಾಲ ಸೌಲಭ್ಯ

ಉಡುಪಿ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಫಾಯಿ ಕರ್ಮಚಾರಿ/ ಮ್ಯಾನುವಲ್ ಸ್ಕಾವೆಂಜರ್ಸ್   ಹಾಗೂ ಅವರ ಅವಲಂಬಿತರ ಆರ್ಥಿಕ ಅಭಿವೃದ್ಧಿಗಾಗಿ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ (ದ್ವಿ-ಚಕ್ರ / ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನ) ಸಾಲ ಸೌಲಭ್ಯ ಪಡೆಯಲು ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ […]

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸೇನೆಯಿಂದ ಭೂಕಬಳಿಕೆ: ಸ್ಥಳೀಯರಿಂದ ಸೇನೆ ವಿರುದ್ದ ಪ್ರತಿಭಟನೆ

ಇಸ್ಲಾಮಾಬಾದ್: ಇಲ್ಲಿನ ಪಾಕ್ ಆಕ್ರಮಿತ ಕಾಶ್ಮೀರದ ಭಾಗವಾಗಿರುವ ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್‌ನ ಸಂಪನ್ಮೂಲ-ಸಮೃದ್ಧ ಪ್ರದೇಶಗಳನ್ನು ಪಾಕ್ ಸರ್ಕಾರ ಮತ್ತು ಸೇನೆಯು ಅತಿಕ್ರಮಿಸುತ್ತಿರುವ ವಿರುದ್ದ ಇಲ್ಲಿನ ಸ್ಥಳೀಯ ನಾಗರಿಕರು ಪ್ರತಿಭಟಿಸುತ್ತಿದ್ದಾರೆ. ಸರ್ಕಾರದ ಶೋಷಕ ನೀತಿಗಳ ವಿರುದ್ಧ ಪಿಒಕೆ ಭಾಗವಾಗಿರುವ ಈ ಪ್ರದೇಶದಲ್ಲಿ ವ್ಯಾಪಕ ಕೋಪ ಮತ್ತು ಅಸಮಾಧಾನವಿದೆ. ಮಾಧ್ಯಮ ವರದಿಗಳ ಪ್ರಕಾರ, ಗಿಲ್ಗಿಟ್ ಬಾಲ್ಟಿಸ್ತಾನದ ಸ್ಥಳೀಯರು ಪಾಕಿಸ್ತಾನದ ಸೇನೆಯ ವಿರುದ್ಧ ಪ್ರತಿಭಟಿಸುತ್ತಿದ್ದಾರೆ ಮತ್ತು ಫ್ರಾಂಟಿಯರ್ ಕಾರ್ಪ್ಸ್ ಅಥವಾ ಪಾಕಿಸ್ತಾನ್ ರೇಂಜರ್‌ಗಳು, ಅರೆಸೈನಿಕ ಪಡೆಗಳು ತಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು  ಅನುಮತಿಸುವುದಿಲ್ಲ […]

ಬಿಜೆಪಿ ಟಿಕೆಟ್ ದಕ್ಕಿಸಿಕೊಳ್ಳಲು ಪ್ರಮೋದ್ ಮಧ್ವರಾಜ್ ತಮ್ಮ ಆತ್ಮಸಾಕ್ಷಿಗೆ ದ್ರೋಹ ಬಗೆದಿದ್ದಾರೆ: ರಮೇಶ್ ಕಾಂಚನ್

ಉಡುಪಿ: ಬಿಜೆಪಿ ಟಿಕೆಟ್ ದಕ್ಕಿಸಿಕೊಳ್ಳಲು ತಮ್ಮ ಆತ್ಮಸಾಕ್ಷಿಗೆ ದ್ರೋಹ ಬಗೆದು ಅವಕಾಶವಾದದ ರಾಜಕಾರಣವನ್ನು ಪ್ರಮೋದ್ ಮಧ್ವರಾಜ್ ಅವರು ಮಾಡುತ್ತಿದ್ದಾರೆ. ನಮೋ ಎಂದರೆ ಮೋಸ ಎಂದಿದ್ದ ಅವರು ಕಳೆದ ಬಾರಿ ಖಾಸಗಿ ಪತ್ರಿಕೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯಕ್ಕೆ ನಂಬರ್ ವನ್ ಶಾಸಕನಾಗಿ ಮೂಡಿ ಬಂದಿದ್ದರೂ ಬಿಜೆಪಿಯ ಕಾರ್ಯಕರ್ತರು ನನ್ನನ್ನು ಸೋಲಿಸಿದ್ದಕ್ಕೆ ನನಗೆ ಕಿಂಚಿತ್ತೂ ಬೇಸರವಿಲ್ಲ, ಮೋದಿಯವರ ಕೈ ಬಲಪಡಿಸಲು ನನ್ನನ್ನು ಸೋಲಿಸಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ. ಈ ಮಾತುಗಳು ಅವರ ಅವಕಾಶವಾದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಉಡುಪಿ […]