ಅಯೋಧ್ಯೆ ತೀರ್ಪಿನಲ್ಲಿ ನ್ಯಾಯಮೂರ್ತಿ ಅಬ್ದುಲ್ ನಜೀರ್ ದೇಶ ಮೊದಲು ಎನ್ನುವ ಭಾವನೆ ಪ್ರದರ್ಶಿದ್ದಾರೆ: ಹಿರಿಯ ವಕೀಲ ವಿಕಾಸ್ ಸಿಂಗ್

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರ ವಿದಾಯ ಸಂದರ್ಭದಲ್ಲಿ ಮಾತನಾಡಿದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್ಸಿಬಿಎ) ನ ಹಿರಿಯ ವಕೀಲ ವಿಕಾಸ್ ಸಿಂಗ್, ವಿವಾದಾತ್ಮಕ ಅಯೋಧ್ಯೆ ಭೂವಿವಾದವನ್ನು ನಿರ್ಧರಿಸಿದ ಸಂವಿಧಾನ ಪೀಠದ ಏಕೈಕ ಮುಸ್ಲಿಂ ನ್ಯಾಯಾಧೀಶರಾಗಿ ಸುಪ್ರೀಂ ಕೋರ್ಟ್ನ ಸರ್ವಾನುಮತದ ತೀರ್ಪನ್ನು ನೀಡಲು ಅವರು ಒಪ್ಪಿಕೊಂಡಾಗ, ಅವರು ದೇಶಕ್ಕೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದರಲ್ಲದೆ, ತಮ್ಮ ಜಾತ್ಯತೀತತೆಯ ಮನೋಭಾವವನ್ನು ವ್ಯಕ್ತಪಡಿಸಿದರು ಮತ್ತು ನ್ಯಾಯಾಂಗ ಸಂಸ್ಥೆಯಲ್ಲಿ ‘ನೈಜ ಭಾರತೀಯ’ ರಾಗಿ ಸೇವೆ ಸಲ್ಲಿಸಿದರು […]
ಭಗವಂತನ ಸಾಕ್ಷಾತ್ಕರಿಸುವ ಸಂಸ್ಕೃತವು ಸರ್ವ ಭಾಷೆಗಳ ತಾಯಿ: ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ

ಉಡುಪಿ: ಮಧ್ವಾಚಾರ್ಯರ ಗುರುಗಳಾದ ಅಚ್ಯುತಪ್ರಜ್ಞಾಚಾರ್ಯರು ಉಡುಪಿಯಲ್ಲಿ ಹಿಂದಿನಿಂದಲೂ ತತ್ತ್ವವಾದದ ಶಾಲೆಯನ್ನು ಆರಂಭಿಸಿದ್ದರು. ಅದನ್ನೇ ಮಧ್ವಸಿದ್ಧಾಂತಪ್ರಬೋಧಿನೀ ಸಂಸ್ಕೃತ ಪಾಠಶಾಲೆಯು ಬೋಧಿಸುತ್ತಿದೆ. ಪರಮಾತ್ಮನು ತ್ರೈಕಾಲಿಕವಾಗಿಯೂ ಸತ್ಯನಾದವನು. ಅವನನ್ನು ತಿಳಿಸುವ ಭಾಷೆಯಾದ ಸಂಸ್ಕೃತ ಭಾಷೆಯೂ ಕೂಡ ಎಂದಿಗೂ ಬದಲಾವಣೆಯಾಗದೇ ಎಲ್ಲಾ ಭಾಷೆಗಳ ತಾಯಿಯೆಂದೆನಿಸಿ ಸತ್ಯವಾಗಿದೆ. ಭಗವಂತನಿಗೂ ಸಂಸ್ಕೃತಕ್ಕೂ ಬಿಂಬ – ಪ್ರತಿಬಿಂಬ ಭಾವವು ಇದೆ ಎಂಬುವುದನ್ನು ಋಗ್ವೇದವು ಪ್ರತಿಪಾದಿಸುತ್ತಿದೆ. ಪ್ರತಿಯೊಂದು ಭಾಷೆಯಿಂದಲೂ ಭಗವಂತನನ್ನು ಸ್ತುತಿಸಬಹುದು ಅದು ಭಗವಂತನನ್ನು ತಲುಪುವುದು ಆದರೆ ಸಂಸ್ಕೃತದಲ್ಲಿ ಮಾಡಿದ ಪ್ರಾರ್ಥನೆಯು ಎಲ್ಲಾ ವಿಧವಾದ ಪ್ರಾರ್ಥನೆಗಳನ್ನೊಳಗೊಂಡಿದೆ ಎಂದು ಶ್ರೀ […]