11 ವರ್ಷದ ಬಾಲೆಯ ಬಾಳಿಗೆ ಮುಳುವಾಯ್ತು ಯೂಟ್ಯೂಬ್

ಉಡುಪಿ: ಇಲ್ಲಿನ ಬ್ರಹ್ಮಗಿರಿಯಲ್ಲಿ 11 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಜ.14 ರಂದು ನಡೆದಿದೆ. ಮೃತ ಬಾಲಕಿಯನ್ನು ಪ್ರವೀಣ್ ಶೆಟ್ಟಿ ಎಂಬವರ ಪುತ್ರಿ ಮಂಗಳಾದೇವಿ (11) ಎಂದು ಗುರುತಿಸಲಾಗಿದೆ. ಬಾಲಕಿಯು ಕುಂಜಾರುಗಿರಿಯ ಖಾಸಗಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿದ್ದಳು. ಪೊಲೀಸರ ಪ್ರಕಾರ, ಶನಿವಾರದಂದು ಸಂಕ್ರಾತಿ ಪ್ರಯುಕ್ತ ಶಾಲೆಗೆ ರಜೆ ಸಾರಲಾಗಿದ್ದರಿಂದ ಬಾಲಕಿ ಮನೆಯಲ್ಲಿಯೇ ಇದ್ದಳು. ಆಕೆಯ ಪೋಷಕರು ಕೆಲಸಕ್ಕೆ ಹೋಗುವುದರಿಂದ ಆಕೆ ಮನೆಯಲ್ಲಿ ಒಬ್ಬಳೇ ಇದ್ದಳು. ಪೋಷಕರು ಸಂಜೆ ಮನೆಗೆ ಹಿಂದಿರುಗಿ […]

ಶ್ರೀಕೃಷ್ಣ ಮಠದಲ್ಲಿ ಹಗಲು ರಥೋತ್ಸವ ಸಂಪನ್ನ

ಉಡುಪಿ: ಶ್ರೀಕೃಷ್ಣಮಠದಲ್ಲಿ ವಾರ್ಷಿಕ ಸಪ್ತೋತ್ಸವದ ಕೊನೆಯ ದಿನದ ಚೂರ್ಣೋತ್ಸವ(ಹಗಲು ರಥೋತ್ಸವ)ವು ಅವಭ್ರತದೊಂದಿಗೆ ವೈಭವದಿಂದ ನಡೆಯಿತು. ಅಷ್ಟಮಠದ ಎಲ್ಲಾ ಯತಿಗಳು ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಂಡಿದ್ದರು.

ಯೋಗಕ್ಕೆ ವಿಶ್ವಮಾನ್ಯತೆ: ರಘುಪತಿ ಭಟ್

ಉಡುಪಿ: ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಿರುವ ಭಾರತದ ಯೋಗ ಪದ್ದತಿಗೆ ವಿಶ್ವ ಮಾನ್ಯತೆ ದೊರೆತಿದ್ದು, ಪ್ರತಿದಿನ ಯೋಗಾಸನ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಶಾಸಕ ರಘುಪತಿ ಭಟ್ ಹೇಳಿದರು. . ಅವರು ಮಣಿಪಾಲದ ಎಂಡ್ ಪಾಯಿಂಟ್ ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಯೋಗಥಾನ್ […]

ಹಿರಿಯಡ್ಕ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಹಿರಿಯಡ್ಕ ವಲಯ ಮತ್ತು ಸಾಮೂಹಿಕ ಸತ್ಯನಾರಾಯಣ ಸಮಿತಿ ಹಿರಿಯಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯಡ್ಕ ದೇವಾಡಿಗ ಸಭಾಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ಮಹಾಲಿಂಗೇಶ್ವರ ದೇವಸ್ಥಾನ ಕೊಂಡಾಡಿಯ ಪ್ರಧಾನ ಪುತೋಹಿತ ಹರೀಶ್ ಭಟ್ ಇವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಸಮಿತಿಯ ಅಧ್ಯಕ್ಷ ರಾಘವೇಂದ್ರ ನಾಯ್ಕ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಯೋಜನೆಯ ಜಿಲ್ಲಾ ಹಿರಿಯ ನಿರ್ದೇಶಕ ಶಿವರಾಯ ಪ್ರಭು ದೀಪ ಬೆಳಗಿಸಿ ಕಾರ್ಯಕ್ರಮದ […]

ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ನವೀಕೃತ ಗರ್ಭಗೃಹ ಸಮರ್ಪಣೆ

ಉಡುಪಿ: ಶ್ರೀಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ನವೀಕೃತ ಗರ್ಭಗೃಹ ಸಮರ್ಪಣೆ ಕಾರ್ಯಕ್ರಮ ಭಾನುವಾರ ಅತ್ಯಂತ‌ ವೈಭವದಿಂದ ದೇಗುಲದ ಆವರಣದಲ್ಲಿ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ‌ ಆಶೀರ್ವಚನ ನೀಡಿದ ಮೂಡುಬಿದರೆ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಮನುಷ್ಯನ ಎಲ್ಲ ಕಾರ್ಯಗಳು ಚೆನ್ನಾಗಿ ನಡೆಯಬೇಕಾದರೆ ದೇವರ ಅನುಗ್ರಹ ಅಗತ್ಯವಾಗಿ ಬೇಕು. ದೇವರ ಪ್ರಾರ್ಥನೆ ಇಲ್ಲದೆ ಯಾವುದೇ ಕೆಲಸವೂ ಪೂರ್ಣ ವಾಗಲ್ಲ. ಭಗವಾನ್ ನಿತ್ಯಾನಂದರು ಸಾಮಾನ್ಯರ ಮನೆಯಲ್ಲಿ ಹುಟ್ಟಿ ಅಸಾಮಾನ್ಯ ವ್ಯಕ್ತಿತ್ವ ಹೊಂದಿದ್ದ ಓರ್ವ ಶ್ರೇಷ್ಠ ಸಂತ. […]