ಬ್ರಹ್ಮಾವರ: ಯುವತಿ ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಹಾವಂಜೆ ಗ್ರಾಮದ ಗೋಳಿಕಟ್ಟೆ ನಿವಾಸಿ ಆಶಾ (18) ಎಂಬ ಯುವತಿಯು 2022 ಡಿಸೆಂಬರ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜ.19 ರಂದು ಪರಶುರಾಮ ದೌಡ್

ಕಾರ್ಕಳ: ಜ.19 ರಂದು ಪರಶುರಾಮ ದೌಡ್ ಆಯೋಜಿಸಲಾಗಿದ್ದು, ಮಧ್ಯಾಹ್ನ 2.30 ಕಾರ್ಕಳ ಮುಖ್ಯ ಬಸ್ ನಿಲ್ದಾಣದಿಂದ ಹೊರಟು ಸಂಜೆ 6 ಗಂಟೆಗೆ ಪರಶುರಾಮ ಥೀಮ್ ಪಾರ್ಕ್ ಗೆ ತಲುಪಲಿದೆ. ಜ.27 ರಂದು ಪರಶುರಾಮ ಪ್ರತಿಮೆ ಲೋಕಾರ್ಪಣೆಗೊಳ್ಳಲಿದ್ದು, ಅಂದು ಶಂಖನಾದ ಮೊಳಗಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಆಸಕ್ತರು ತಮ್ಮ ಹೆಸರನ್ನು ಜ.21 ರೊಳಗೆ 8050175917 ಈ ಸಂಖ್ಯೆಗೆ ವಾಟ್ಸಾಪ್ ಮಾಡಿ ತಿಳಿಸಬೇಕು. ಹೆಚ್ಚಿನ ಮಾಹಿತಿಗಾಗಿ: 9845333471, 9945666417, 8749009794, 9845117643, 9844173421 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಚಿಪ್ಸಿ ಐಟಿ ಸಂಸ್ಥೆಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆ ಖಾಲಿ

ಉಡುಪಿ: ಕಲ್ಸಂಕದ ಭಕ್ತ ಟವರ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿಪ್ಸಿ ಸಂಸ್ಥೆಯಲ್ಲಿ ಪ್ರಾಜೆಕ್ಟ್ ಮ್ಯಾನೆಜರ್ ಹುದ್ದೆ ಖಾಲಿ ಇದೆ. ಅನುಭವ: 2+ ವರ್ಷದ ಅನುಭವ ಹೊಂದಿರಬೇಕು. ಜವಾಬ್ದಾರಿಗಳು: # ರಿಪೋರ್ಟ್ ಮಾಡುವುದು # ಸಂಪನ್ಮೂಲಗಳನ್ನು ಸರಿಯಾಗಿ ನಿರ್ವಹಿಸುವುದು # ಪ್ರಾಜೆಕ್ಟ್ ಗಳನ್ನು ಕ್ಲಪ್ತ ಸಮಯಕ್ಕೆ ತಲುಪಿಸುವುದು # ಮೈಲುಗಲ್ಲು ಮತ್ತು ತಂಡವನ್ನು ನಿರ್ವಹಿಸುವುದು # ಬಜೆಟ್ ಅಭಿವೃದ್ದಿಪಡಿಸುವುದು # ಅಪಾಯದ ನಿರ್ವಹಣೆ # ಪ್ರಗತಿಯ ಮೇಲ್ವಿಚಾರಣೆ # ಐಟಿ ಉಪಕ್ರಮವನ್ನು ಪೂರ್ಣಗೊಳಿಸಲು ಕೆಲಸ ಮಾಡಬೇಕು ಆಸಕ್ತರು jobs@chipsy.in ಗೆ […]

ಸುರತ್ಕಲ್: ಉದ್ಯೋಗಕ್ಕೆ ತೆರಳಿದ್ದ ಯುವತಿ ನಾಪತ್ತೆ

ಸುರತ್ಕಲ್: ಇಲ್ಲಿನ ಮಣಪ್ಪುರಂ ಫೈನಾನ್ಸ್‌ನಲ್ಲಿ ಉದ್ಯೋಗದಲ್ಲಿದ್ದ ಯುವತಿ ನಾಪತ್ತೆಯಾಗಿದ್ದಾರೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ನಾಪತ್ತೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7 ಗಂಟೆಗೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ. ಈಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಸ್ಥೆಯ ಸಿಬ್ಬಂದಿಗಳಲ್ಲಿ ವಿಚಾರಿಸಿದಾಗಲೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಯುವತಿಯ ನಾಪತ್ತೆಯಾಗಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 5.6 ಅಡಿ ಎತ್ತರ, ಬಿಳಿ ಮೈಬಣ್ಣ, ದಪ್ಪಮುಖ ಹಾಗೂ ಸಾಧಾರಣ ಮೈಕಟ್ಟಿನ ಈಕೆ ತುಳು […]

ಸುಣ್ಣಾರಿ: ಎಕ್ಸಲೆಂಟ್ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಕಾರ್ಯಾಗಾರ

ಕುಂದಾಪುರ: ಜೆ.ಸಿ.ಐ ಸಹಭಾಗಿತ್ವದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಕಾರ್ಯಾಗಾರವು ಸುಣ್ಣಾರಿಯ ಎಕ್ಸಲೆಂಟ್ ಪ್ರೌಢಶಾಲೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಜಗದೀಶ್ ಜೋಗಿ ಇವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ವಿದ್ಯಾರ್ಥಿಗಳ ಪರೀಕ್ಷಾ ಆತಂಕವನ್ನು ದೂರಮಾಡುತ್ತಾ ಸಮಯವು ಅತ್ಯಂತ ಮಹತ್ವಪೂರ್ಣವಾಗಿದ್ದು, ಕಳೆದು ಹೋದ ಸಮಯ ಮರಳಿಬಾರದು, ಎನ್ನುವ ಕಟುಸತ್ಯವನ್ನು ಅರಿತು ಶಿಸ್ತುಬದ್ಧವಾದ ಅಧ್ಯಯನ ನಡೆಸಬೇಕೆಂದರು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಅಧ್ಯಯನ ವೇಳಾಪಟ್ಟಿ ಹಾಕಿಕೊಂಡು ನಿರಂತರ ಓದುವುದು ಮತ್ತು ಓದಿದ ವಿಚಾರ ಹೆಚ್ಚು ಮನನ ಮಾಡಿಕೊಳ್ಳುವುದರಿಂದ ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವೆಂದು […]