ಮಣಿಪಾಲ: ಶಕಲಕ ಬೂಂ ಬೂಂ ತುಳು ಚಿತ್ರದ ಟ್ರೈಲರ್ ಬಿಡುಗಡೆ

ಮಣಿಪಾಲ: ಯುಎನ್ ಸಿನಿಮಾಸ್ ಬ್ಯಾನರ್ ನಡಿ ನಿರ್ಮಾಣಗೊಂಡಿರುವ ಜ. 20 ರಂದು ಬಿಡುಗಡೆಯಾಗಲಿರುವ ‘ಶಕಲಕ ಬೂಂ ಬೂಂ’ ಚಿತ್ರದ ಟ್ರೈಲರ್ ಬಿಡುಗಡೆ ಮತ್ತು ಪ್ರೀಮಿಯರ್ ಶೋ ಮಣಿಪಾಲದ ಭಾರತ್ ಸಿನೆಮಾಸ್ ನಲ್ಲಿ ಬುಧವಾರ ನಡೆಯಿತು. ಟ್ರೈಲರ್ ಬಿಡುಗಡೆಗೊಳಿಸಿದ ಚಿತ್ರನಟಿ ವಿದುಷಿ ಮಾನಸಿ ಸುಧೀರ್ ಮಾತನಾಡಿ, ಜ್ಯೋತಿ ಬೆಳಗುವಂತೆ ಈ ಚಿತ್ರವೂ ಬೆಳಗಲಿ, ಚಿತ್ರ ತಂಡದ ಶ್ರಮಕ್ಕೆ ತಕ್ಕ ಫಲ ಲಭಿಸಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ನರಸಿಂಗೆ ಶ್ರೀ ನರಸಿಂಹ ದೇಗುಲದ ಅರ್ಚಕ ಶ್ರೀನಿವಾಸ ಭಟ್ ಉದ್ಘಾಟಿಸಿ […]

ಕಾರ್ಕಳ: ಜ.20 ರಂದು ವಿದ್ಯುತ್ ವ್ಯತ್ಯಯ

ಕಾರ್ಕಳ: ಜನವರಿ 20 ರಂದು 110 ಕೆ.ವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಪರಶುರಾಮ ಥೀಮ್ ಪಾರ್ಕಿನ ಕಾಮಗಾರಿ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೈಲೂರು ಎಕ್ಸ್ಪ್ರೆಸ್ ಫೀಡರ್‌ಗಳ ಬೈಲೂರು, ಜಾರ್ಕಳ, ಪಳ್ಳಿ, ನೀರೆ, ಎರ್ಲಪಾಡಿ, ಕೌಡೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ಸದ್ಗುರು ಪ್ರಿಂಟರ್ಸ್ ಮಾಲಕ ಚೆರ್ಕಾಡಿ ದೊಡ್ಮನೆ ತಾರಾನಾಥ್ ಹೆಗ್ಡೆ ನಿಧನ

ಉಡುಪಿ: ಸದ್ಗುರು ಪ್ರಿಂಟರ್ಸ್ ನ ಮಾಲಕರಾದ ಚೆರ್ಕಾಡಿ ದೊಡ್ಮನೆ ತಾರಾನಾಥ್ ಹೆಗ್ಡೆ (57) ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಜ. 21 ರಂದು ರಜತಾದ್ರಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಇವರ ವತಿಯಿಂದ ಜನವರಿ 21 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ […]

ಸಂಕಷ್ಟದಲ್ಲಿರುವ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ವರದಾನ: ವೆರೋನಿಕಾ ಕರ್ನೆಲಿಯೊ

ಉಡುಪಿ: ಬಿಜೆಪಿ ಸರಕಾರದ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಪ್ರಿಯಾಂಕ ಗಾಂಧಿಯವರು ಕರ್ನಾಟಕದಲ್ಲಿ ಘೋಷಿಸಿದ ಗೃಹಲಕ್ಷ್ಮೀ ಯೋಜನೆ ವರದಾನವಾಗಲಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಅಭಿಪ್ರಾಯ ಪಟ್ಟಿದ್ದಾರೆ. ಪ್ರಿಯಾಂಕ ಗಾಂಧಿಯವರು ಕರ್ನಾಟಕದಲ್ಲಿ ಘೋಷಿಸಿದ ಗೃಹಲಕ್ಷ್ಮಿ ಯೋಜನೆಯನ್ನು ಮಹಿಳಾ ವರ್ಗ ತುಂಬಾ ಸಂತೋಷದಿಂದ ಸ್ವಾಗತಿಸುತ್ತೇವೆ. ಬಿಜೆಪಿ ಸರ್ಕಾರದ ಆಡಳಿತದಿಂದ ಜನರ ಜನಜೀವನ ತೀರ ಸಂಕಷ್ಟದಲ್ಲಿದೆ. ದಿನನಿತ್ಯದ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಗ್ಯಾಸ್ ಸಿಲಿಂಡರ್ ನ ಬೆಲೆ ಗಗನಕ್ಕೆ ಏರಿದೆ. ನಮ್ಮ ಯುವಕ ಯುವತಿಯರು ಯಾವುದೇ […]