ಇಂದ್ರಾಳಿ: ಎಂಸಿಸಿ ಲೆಕ್ಕಾಧಿಕಾರಿಯ ಕಾರು ಚಾಲಕನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ

ಇಂದ್ರಾಳಿ: ಮಂಗಳೂರು ಮಹಾನಗರ ಪಾಲಿಕೆಯ (ಎಂಸಿಸಿ) ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಇಂದ್ರಾಳಿಯಲ್ಲಿ ವೇಗವಾಗಿ ಬರುತ್ತಿದ್ದ ರೈಲಿನೆದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜನವರಿ 25ರ ಬುಧವಾರ ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು, ಮೃತರನ್ನು ಹೆಬ್ರಿಯ ರಾಘವೇಂದ್ರ ಹೆಗಡೆ ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳದ ಬಳಿ ಕಾರು ಪತ್ತೆಯಾಗಿದ್ದು, ಕಾರಿನ ಮೇಲೆ ‘ಮಂಗಳೂರು ಮಹಾನಗರ ಪಾಲಿಕೆ – ಮುಖ್ಯ ಲೆಕ್ಕಾಧಿಕಾರಿ’ ಎಂದು ಅಧಿಕೃತ ಬೋರ್ಡ್ ಇದೆ. ಮೂಲಗಳ ಪ್ರಕಾರ, […]

ನಗರಸಭಾ ವ್ಯಾಪ್ತಿಯ ಕಟ್ಟಡಗಳ ಮಾಹಿತಿಯನ್ನು ಆಸ್ತಿ ಕಣಜ ತಂತ್ರಾಂಶದಲ್ಲಿ ದಾಖಲಿಸಿ

ಉಡುಪಿ ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡ ಮಾಲಿಕರು ಮತ್ತು ಅನುಭೋಗದಾರರು ಈಗಾಗಲೇ ಇ-ಖಾತೆ ಪಡೆದವರನ್ನು ಹೊರತುಪಡಿಸಿ, ಉಳಿದ ಕಟ್ಟಡಗಳನ್ನು ಗಣಿಕೀಕರಣ ಮಾಡಲು ಪೌರಾಡಳಿತ ನಿರ್ದೇಶನಾಲಯವು ಆಸ್ತಿ ಕಣಜ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ಸ್ಥಳೀಯ ಸಂಸ್ಥೆಯ ಎಲ್ಲಾ ಕಟ್ಟಡಗಳನ್ನು ಆನ್‌ಲೈನ್ ಮಾಡಬೇಕಾಗಿದ್ದು, ಆಸ್ತಿ ಕಣಜ ತಂತ್ರಾಂಶದಲ್ಲಿ ಈ ಕೆಳಗೆ ನಮೂದಿಸಲಾದ ದಾಖಲೆಗಳನ್ನು ಕಡ್ಡಾಯವಾಗಿ ದಾಖಲಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ. ಕಟ್ಟಡವಾಗಿದ್ದಲ್ಲಿ: ಕಟ್ಟಡದ ಮಾಲೀಕರ ಭಾವಚಿತ್ರ ಮತ್ತು ಆಧಾರ್ ಹೊರತುಪಡಿಸಿ, ಒಂದು ಗುರುತಿನ ದಾಖಲೆ, ಮೊಬೈಲ್ ನಂಬರ್ ಮತ್ತು ಇ-ಮೇಲ್ […]

ಆತ್ಮನಿರ್ಭರ ಭಾರತದ ಭರವಸೆಯ ಆಪರೇಟಿಂಗ್ ಸಿಸ್ಟಮ್ “ಭರೋಸ್”

ನವದೆಹಲಿ: ಭರೋಸ್(BharOS)- ಸ್ವದೇಶಿ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಅನ್ನು ಐಐಟಿ ಮದ್ರಾಸ್ ಅಭಿವೃದ್ದಿಪಡಿಸಿದ್ದು, ಇದು ಗೂಗಲ್ ಗೆ ಪ್ರತಿಸ್ಪರ್ಧೆ ಒಡ್ಡಲಿದೆ. ಸಾಧನ ತಯಾರಕರ ಮೇಲೆ ಅನ್ಯಾಯದ ಪರಿಸ್ಥಿತಿಗಳನ್ನು ಹೇರುವ ಮೂಲಕ ಆಂಡ್ರಾಯ್ಡ್ ನಲ್ಲಿ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಗೂಗಲ್ ಏಕಸ್ವಾಮ್ಯವನ್ನು ಮುರಿಯಲು ಭಾರತದ ಸ್ಪರ್ಧಾತ್ಮಕ ಆಯೋಗವು ಮುಂದಾಗಿದೆ. ಭಾರತದ ಸ್ಪರ್ಧಾತ್ಮಕ ಆಯೋಗದ ಆಂಟಿಟ್ರಸ್ಟ್ ಆದೇಶವನ್ನು ನಿರ್ಬಂಧಿಸುವ ಗೂಗಲ್ ನ ಮನವಿಯನ್ನು ಭಾರತದ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರ ಅರ್ಥವೇನೆಂದರೆ, ಟೆಕ್ ದೈತ್ಯ ಈಗ ಭಾರತದಲ್ಲಿ ಆಂಡ್ರಾಯ್ಡ್ […]

ಅತ್ತೂರು: ಸಂತ ಲಾರೆನ್ಸ್ ಚರ್ಚಿನಲ್ಲಿ ಮೂರನೇ ದಿನದ ಬಲಿಪೂಜೆ

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಮೈನರ್ ಬಸಿಲಿಕಾ ವಾರ್ಷಿಕ ಮಹೋತ್ಸವದ ಮೂರನೇ ದಿನದಂದು ಸಹಸ್ರಾರು ಭಕ್ತರು ಪ್ರಾರ್ಥನೆ ಮತ್ತು ಬಲಿಪೂಜೆಯಲ್ಲಿ ಪಾಲ್ಗೊಂಡರು. ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಡಾ.ಲಾರೆನ್ಸ್ ಮುಖುಯಿ ಅವರು ಮೂರನೇ ದಿನದ ಮುಖ್ಯ ಬಲಿಪೂಜೆಯನ್ನು ನೆರವೇರಿಸಿದರು. ಲೌಕಿಕ ನೋವುಗಳು ಮತ್ತು ಕಷ್ಟಗಳು ನಮ್ಮನ್ನು ದುರ್ಬಲಗೊಳಿಸುತ್ತವೆ. ಆದರೆ ಪವಿತ್ರಾತ್ಮದ ಅನುಗ್ರಹದಿಂದ ಮತ್ತು ಸರ್ವಶಕ್ತನನ್ನು ಸಂಪೂರ್ಣವಾಗಿ ನಂಬುವ ಮೂಲಕ, ಆತನ ಸಾಕ್ಷಿಯಾಗುವುದರಿಂದ, ನಾವು ಆಶೀರ್ವದಿಸಲ್ಪಡುತ್ತೇವೆ ಎಂದು ಅವರು ಧರ್ಮಬೋಧನೆ ನೀಡಿದರು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಫಾದರ್ ಮ್ಯಾಕ್ಸಿಂ ನೊರೊನ್ಹಾ […]

ಕೊಡವೂರು: ಆವಾಸ್ ಯೋಜನೆ ಫಲಾನುಭವಿಗಳಿಗೆ ಮನೆ ಹಸ್ತಾಂತರ

ಕೊಡವೂರು: ದೇಶದ ಪ್ರತಿಯೊಬ್ಬರಿಗೂ ಮನೆ ಎಂಬ ಯೋಜನೆಯನ್ವಯ ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ ಕೊಡವೂರು ವಾರ್ಡಿನಲ್ಲಿ ನಗರಸಭಾ ಸದಸ್ಯ ವಿಜಯ ಕೊಡವೂರು ನೇತೃತ್ವದಲ್ಲಿ 8 ಮನೆಗಳು ನಿರ್ಮಾಣಗೊಂಡಿದ್ದು, ಇವುಗಳಲ್ಲಿ ಮೊದಲ ಮನೆ “ಸೃಜನ್” ಇದರ ಗೃಹಪ್ರವೇಶವು ಜ.14 ಶನಿವಾರದಂದು ನಡೆಯಿತು. ಪತ್ರಕರ್ತ ಜನಾರ್ಧನ ಕೊಡವೂರು ದೀಪಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮನೆಯನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ವಿಜಯ ಕೊಡವೂರು, ಹಿರಿಯರಾದ ಶಂಭುಮಾಸ್ಟರ್ ಹಾಗೂ ಸುರೇಶ್ ಉಪಸ್ಥಿತರಿದ್ದರು. 5 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ […]