ಕಾರ್ಕಳ: ಬೈಕ್ ಹಾಗೂ ಟ್ಯಾಂಕರ್‌ ಮಧ್ಯೆ ಅಪಘಾತ, ವಿದ್ಯಾರ್ಥಿ ಸಾವು

ಕಾರ್ಕಳ: ಟ್ಯಾಂಕರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರನಾಗಿದ್ದ ವಿದ್ಯಾರ್ಥಿಯು ಸ್ಥಳದಲ್ಲೇ ಮೃತಪಟ್ಟ ಘಟನೆ ಬಜಗೋಳಿ- ಮಾಳ ಹೆದ್ದಾರಿಯ ಮಾಳ ಚೆಕ್ ಪೋಸ್ಟ್ ಬಳಿ ಗುರುವಾರ ನಡೆದಿದೆ. ಮಹಾರಾಷ್ಟ್ರ ಮೂಲದ ವೈಭವ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಸಹ ಸವಾರೆ ಕೋಲಾರ ಮೂಲದ ವಿದ್ಯಾರ್ಥಿನಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರಿಬ್ಬರೂ ಕರಾವಳಿ ಆಯುರ್ವೇದ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ವೈಭವ್ ಮತ್ತು ಇನ್ನೋರ್ವ ವಿದ್ಯಾರ್ಥಿನಿ ಹೊರನಾಡು ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದರು. ಈ […]

ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಶುಲ್ಕ ಪಾವತಿಸುವಂತೆ ಸೂಚನೆ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಮೀನುಗಾರರ ಸಂಕಷ್ಟ ಪರಿಹಾರ ನಿಧಿಗೆ ಅನುದಾನ ಸಂಗ್ರಹಿಸಲು ಸರ್ಕಾರವು ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ನಿಗದಿಪಡಿಸುವ ರಾಜ್ಯ ಮಾರಾಟಕರ ದರದ ಶೇ. 1.5 ರ ಮೊತ್ತವನ್ನು ಡೀಸೆಲ್ ವಿತರಣೆ ಮಾಡುವ ಸಮಯದಲ್ಲಿ ಪ್ರತಿ ದೋಣಿಗೆ ನಿಗದಿಪಡಿಸಿರುವ ಡೀಸೆಲ್ ಪ್ರಮಾಣಕ್ಕನುಗುಣವಾಗಿ ಮೀನುಗಾರಿಕೆ ದೋಣಿ ಮಾಲೀಕರಿಂದ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯ ಶುಲ್ಕದ ವಸೂಲಾತಿಯನ್ನು ತಕ್ಷಣ ಪ್ರಾರಂಭಿಸಿ, ಆ ಮೊತ್ತವನ್ನು ಡೀಸೆಲ್ ಬಂಕ್ ಮಾಲಿಕರು ಮೀನುಗಾರರ ಸಂಕಷ್ಟ ಪರಿಹಾರ ನಿಧಿಗಾಗಿ ಮೀನುಗಾರಿಕೆ ನಿರ್ದೇಶಕರು, ಬೆಂಗಳೂರು ಹೆಸರಿನ […]

ಶ್ರಾವಣಿ ಭಟ್ ಇವರಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊಡಲಾಗುತ್ತಿರುವ ಹತ್ತು ಸಾವಿರ ರೂಪಾಯಿ ನಗದನ್ನು ಒಳಗೊಂಡ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಕುಮಾರಿ ಶ್ರಾವಣಿ ಭಟ್ ಪಡೆದಿರುತ್ತಾರೆ. ಇವಳು ಬೈಲೂರು ಸ್ಮಿತಾ ಮತ್ತು ಕೃಷ್ಣರಾಜ ಭಟ್ ದಂಪತಿಗಳ ಪುತ್ರಿ.

ಕಟಪಾಡಿ: ಆಕಸ್ಮಿಕ ಅಗ್ನಿಅವಘಡಕ್ಕೆ ಮನೆ ಭಸ್ಮ; 3 ಲಕ್ಷ ರೂ. ಗೂ ಅಧಿಕ ಹಾನಿ

ಉಡುಪಿ: ಇಲ್ಲಿನ ಕಟಪಾಡಿಯ ಮಟ್ಟು ದುಗ್ಗುಪಾಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ವರದಿಯಾಗಿದೆ. ಇಲ್ಲಿನ ವನಜ ಎನ್‌.ಕೆ ಎಂಬವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಮನೆ ಹಾಗೂ ದನದ ಕೊಟ್ಟಿಗೆ ಭಸ್ಮವಾಗಿದೆ. ಮನೆಯ ರಿಪೇರಿಗಾಗಿ ಮತ್ತು ದೈವದ ಗುಡಿ ಕಟ್ಟಲು ತಂದಿರಿಸಲಾಗಿದ್ದ ಮರದ ದಾರಂದಗಳು, ಕಿಟಕಿಗಳು, ಬೈಹುಲ್ಲು ಹಾಗೂ ವಿದ್ಯುತ್‌ ಸಲಕರಣೆಗಳು ಅಗ್ನಿಗೆ ಆಹುತಿಯಾಗಿವೆ. ಸ್ಥಳೀಯ ನಿವಾಸಿಗಳು ಮತ್ತು ಜಿಲ್ಲಾ ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿ ಹೆಚ್ಚಿನ ಅವಘಡವಾಗುವುದನ್ನು ತಪ್ಪಿಸಿದ್ದಾರೆ. ಅಗ್ನಿ […]

ಸ್ವಾವಲಂಬಿ ಭಾರತ ವತಿಯಿಂದ ಮಿನಿ ಉದ್ಯೋಗ ಮೇಳ ಕಾರ್ಯಕ್ರಮ

ಉಡುಪಿ: ಶ್ರೀ ಜಗದ್ಗುರು ನಿತ್ಯಾನಂದ ಸ್ವಾಮಿ ಮಂದಿರ ಮಠದ ಆಶ್ರಯದಲ್ಲಿ, ರಾಷ್ಟ್ರೀಯ ಪದವಿ ಪೂರ್ವ ವಿದ್ಯಾರ್ಥಿಗಳ, ಪೋಷಕರ ಮತ್ತು ಶಿಕ್ಷಕರ ಸಂಘ, ಸ್ವಾವಲಂಬಿ ಭಾರತ ಉಡುಪಿ ಜಿಲ್ಲೆ ಮತ್ತು ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್, ಉಡುಪಿ ವಲಯ ಇದರ ಸಹಯೋಗದಲ್ಲಿ ಮಿನಿ ಉದ್ಯೋಗ ಮೇಳವು ಜ. 29 ನೂತನವಾಗಿ ಉದ್ಘಾಟನೆಗೊಂಡ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದ ಸಭಾಂಗಣದಲ್ಲಿ ನಡೆಯಿತು. ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದ ಕಾರ್ಯಾಧ್ಯಕ್ಷ ದಿವಾಕರ್ ಶೆಟ್ಟಿ ತೋಟದಮನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅಥಿತಿಗಳಾಗಿ […]