ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರೇ ಸರ್ಕಾರಿ ಸೇವೆ ಸ್ಥಗಿತ

ಉಡುಪಿ: ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಲಿದ್ದು, ಈ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ಸರ್ಕಾರಿ ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಆಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಹೇಳಿದರು. ಅವರು ಸೋಮವಾರ ಉಡುಪಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆದ ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ನಡೆಯುವ ನೌಕರರ ಅರ್ನಿದಿಷ್ಟಾವಧಿ ಮುಷ್ಕರದ ರೂಪು ರೇಷೆ ಕುರಿತ ಜಿಲ್ಲೆಯ ಸರಕಾರಿ ನೌಕರರ ವಿವಿಧ […]

ಪಡುಬಿದ್ರಿ: ಕೋಟ್ಪಾ ದಾಳಿ; 20 ಪ್ರಕರಣ ದಾಖಲು

ಪಡುಬಿದ್ರಿ : ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಸೋಮವಾರದಂದು ಉಡುಪಿ ತಾಲೂಕಿನ ಪಡುಬಿದ್ರಿ ಹಾಗೂ ಇಂಡಸ್ಟ್ರಿಯಲ್ ಏರಿಯಾ ನಂದಿಕೂರು ವ್ಯಾಪ್ತಿಯ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿ ಒಟ್ಟು 20 ಪ್ರಕರಣ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕಾರ್ಮಿಕ […]

ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ವತಿಯಿಂದ ಕಾರ್ಯಕರ್ತರ ಅಭಿನಂದನಾ ಸಮಾರಂಭ

ಕೊಡವೂರು: ಕೊಡವೂರು ವಾರ್ಡಿನ ಕಾರ್ಯಕರ್ತರ ಅಭಿನಂದನಾ ಸಭೆಯು ಫೆ.26 ಭಾನುವಾರದಂದು ಕೊಡವೂರಿನ ವಿಪ್ರ ಶ್ರೀ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಂ.ಎಫ್ ನ ಮಾಜಿ ಅಧ್ಯಕ್ಷ ರವಿರಾಜ್ ಹೆಗ್ಡೆ, ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ರಚನೆ ಮಾಡಿ ಆ ಮೂಲಕ ಕೊಡವೂರು ಗ್ರಾಮದ ಸರ್ವೆ ನಡೆಸಿ ಆ ಸರ್ವೆಯಲ್ಲಿ ಒಟ್ಟು 792 ಮನೆಗಳು, 51 ಕೃಷಿಕರು, 432 ಬಾವಿಗಳು, 90 ನಿರುಪಯುಕ್ತ ಬಾವಿಗಳು ಕಂಡುಬಂದಿವೆ. ಕೊಡವೂರಿನ ಸಮಸ್ಯೆ, ಸವಾಲು ಮತ್ತು ಅಪೇಕ್ಷೆಗಳನ್ನು ತಿಳಿಯುವ ಪ್ರಯತ್ನ ನಡೆದ […]

ಹಿರಿಯಡಕ: ಮಾ. 3 ರಿಂದ 5 ರವರೆಗೆ ಕೃಷಿ ಮೇಳ ಮತ್ತು ಸಾಂಸ್ಕೃತಿಕ ವೈಭವ-2023

ಹಿರಿಯಡಕ: ಉಡುಪಿ ಜಿಲ್ಲೆ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.), ಪರ್ಕಳ ಇವರ ಸಹಭಾಗಿತ್ವದಲ್ಲಿ, ವೆನಿಲ್ಲಾ ಅಭಿವೃದ್ದಿ ಟ್ರಸ್ಟ್ (ರಿ). ಹಿರಿಯಡ್ಕ ಪಳ್ಳಿ ಶ್ರೀನಿವಾಸ ಹೆಗ್ಡೆ ಚಾರಿಟೇಬಲ್ ಟ್ರಸ್ಟ್, ಹಿರಿಯಡ್ಕ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಮತ್ತು ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ ನೈಸರ್ಗಿಕ ಕೃಷಿ ಯೋಜನೆ ವಲಯ – 10. ವ.ಕೃ.ತೋ.ಸಂ.ಕೇಂದ್ರ, ಬ್ರಹ್ಮಾವರ ಜಿಲ್ಲಾ ಕೃಷಿಕ ಸಂಘ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ಮೇಳ ಮತ್ತು ಸಾಂಸ್ಕೃತಿಕ ವೈಭವ […]

ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರದಂದು ಉದ್ಘಾಟಿಸಿದರು. ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ 80 ನೇ ಜನ್ಮದಿನದಂದು ಅವರ ಚುನಾವಣಾ ಕ್ಷೇತ್ರದಲ್ಲಿ ವಿಶ್ವದರ್ಜೆಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಯಿತು. ಈ ವಿಮಾನ ನಿಲ್ದಾಣವು ಕಮಲದ ಆಕಾರದಲ್ಲಿದೆ. No. of airports built between Independence & 2014 in the country – 74. Shivamogga Airport, inaugurated by Sri @NarendraModi Ji today, […]