ಸಂಕಲ್ಪ ಸಾಧನೆ: ಯಶಸ್ವಿಯಾಗಿ ಸಮಾಪ್ತಿಗೊಂಡ ಶಿವಪಾಡಿಯ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಸಮಾಪ್ತಿಯ ದಿನ ಮಾರ್ಚ್ 05, 2023 ರ ಭಾನುವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಜಗದ್ಗುರುಗಳ ಸಾನಿಧ್ಯದಲ್ಲಿ ಪೂರ್ಣಾಹುತಿ, ಮಧ್ಯಾಹ್ನ ಜಗದ್ಗುರುಗಳಿಂದ ಶ್ರೀ ದೇವರಿಗೆ ಕಲಶಾಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ, ಫಲಮಂತ್ರಾಕ್ಷತೆ. ನಂತರ ಪಲ್ಲಪೂಜೆ, ಮಹಾಸಂತರ್ಪಣೆ ನೆರವೇರಿತು. ಅತಿರುದ್ರ ಮಹಾಯಾಗದ ಮಹಾಸಂಕಲ್ಪ ಸುದೀರ್ಘ 12 ದಿನಗಳ ಕಾಲ ನಡೆದು ಅತ್ಯಂತ ಯಶಸ್ವಿಯಾಗಿ ಇಂದು ಸಮಾಪ್ತಿಗೊಂಡಿತು. ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ […]

ನಿಮ್ಮದೇ ಸಂಭ್ರಮ, ನಿಮ್ಮದೇ ಉತ್ಸವ ಹರ್ಷೋತ್ಸವದ ಸಂಭ್ರಮಾಚರಣೆ ನಾಳೆಯಿಂದ ಆರಂಭ

ಉಡುಪಿ: ಪ್ರತಿವರ್ಷವೂ ಗ್ರಾಹಕರ ಅಪಾರ ಬೆಂಬಲದಿಂದ ಹರ್ಷೋತ್ಸವವು ಯಶಸ್ವಿಯಾಗಿ ನಡೆಯುತ್ತಿದ್ದು, ವರ್ಷದಿಂದ ವರ್ಷಕ್ಕೆ ಭಾರೀ ಜನಮನ್ನಣೆ ಗಳಿಸುತ್ತಾ, ಎಲ್ಲರ ನೆಚ್ಚಿನ “ಶಾಪಿಂಗ್ ಹಬ್ಬ”ವಾಗಿ ಸಂಭ್ರಮದಿಂದ ಆಚರಿಸಲ್ಪಡುತ್ತಿದೆ. ಈ ಬಾರಿಯೂ ಇನ್ನಷ್ಟು ವೈಶಿಷ್ಟö್ಳೊಂದಿಗೆ ಏಳು ದಿನಗಳು ನಡೆಯಲಿರುವ ಹೊಸ ರೂಪದ ಹರ್ಷೋತ್ಸವವು ನಿಮ್ಮ ಶಾಪಿಂಗ್‌ಗೆ ಒಂದು ವಿನೂತನ ಮೆರುಗನ್ನು ನೀಡಲಿದೆ. ಹರ್ಷದ ವಾರ್ಷಿಕಾಚರಣೆ – “ಹರ್ಷೋತ್ಸವ” ನಾಳೆ ಅಂದರೆ ಮಾರ್ಚ್ 06 ರಿಂದ 12ರವರೆಗೆ ಉಡುಪಿಯ ಮೂರು, ಮಂಗಳೂರಿನ ಎರಡು, ಬ್ರಹ್ಮಾವರ, ಸುರತ್ಕಲ್, ಪುತ್ತೂರು, ಕುಂದಾಪುರ ಹಾಗೂ ಶಿವಮೊಗ್ಗ […]

ಉಡುಪಿ: ಮಾ.10 ರಿಂದ ರಾಷ್ಟ್ರೀಯ ಯುವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್

ಭಾರತದ ಅಥ್ಲೆಟಿಕ್ ಫೆಡರೇಷನ್, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ಉಡುಪಿ ಜಿಲ್ಲಾ ಅಮೆಚೂರು ಅಥ್ಲೆಟಿಕ್ ಅಸೋಸಿಯೇಷನ್‌ನ ಸಂಯುಕ್ತ ಆಶ್ರಯದಲ್ಲಿ 18ನೇ ರಾಷ್ಟ್ರೀಯ ಯುವ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಮಾ.10ರಿಂದ 12ರವರೆಗೆ ಉಡುಪಿ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾಕೂಟದ ಸಂಘಟನಾ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಿಟ್ಟೆಯ ನಿಟ್ಟೆ ವಿದ್ಯಾಸಂಸ್ಥೆಯ ಪ್ರಾಯೋಜಕತ್ವದಲ್ಲಿ ಈ ಪ್ರತಿಷ್ಠಿತ ಕ್ರೀಡಾಕೂಟ ಮೂರು ದಿನಗಳ ಕಾಲ ನಡೆಯಲಿದೆ ಎಂದರು. ಈ ಕ್ರೀಡಾಕೂಟದಲ್ಲಿ ದೇಶದ […]

ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನಗರ ವತಿಯಿಂದ ಕಾರ್ಯಕರ್ತರ ಕುಟುಂಬ ಮಿಲನ ಮತ್ತು ಹಿರಿಯ ಕಾರ್ಯಕರ್ತರಿಗೆ ಸನ್ಮಾನ

ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನಗರ ವತಿಯಿಂದ ಶಾಸಕರಾದ ಡಾ ಭರತ್ ವೈ. ಶೆಟ್ಟಿ, ನೇತೃತ್ವದಲ್ಲಿ ಸುರತ್ಕಲ್ ನಗರ 1 ಮತ್ತು 2 ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಕುಟುಂಬ ಮಿಲನ ಮತ್ತು ಹಿರಿಯ ಕಾರ್ಯಕರ್ತರ ಸನ್ಮಾನ ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ತಿಲಕ್ ರಾಜ್ ಕೃಷ್ಣಾಪುರ, ಪದಾಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ಪಕ್ಷದ […]

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಮಾ.7 ರಂದು ಶ್ರೀ ಮನ್ಮಹಾರಥೋತ್ಸವ

ಉಡುಪಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಶ್ರೀ ಮಹಿಷಮರ್ದಿನಿ ದೇವಿಯ ಸನ್ನಿಧಿಯಲ್ಲಿ ಮಾ.4 ರಿಂದ ತಾ. ಮಾ.9ರ ರವರೆಗೆ ವೇದಮೂರ್ತಿ ಪಾಡಿಗಾರು ಶ್ರೀ ಶ್ರೀನಿವಾಸ ತಂತ್ರಿಗಳವರ ನೇತೃತ್ವದಲ್ಲಿ ರಥೋತ್ಸವಾದಿ ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮ: ಮಾ.4 ಶನಿವಾರ  ರಾತ್ರಿ 7.30 ಗಂಟೆಗೆ ವಿಘ್ನೇಶ್ವರ ಪ್ರಾರ್ಥನೆ, ಅಂಕುರಾರೋಹಣ. ಮಾ.5 ಆದಿತ್ಯವಾರ  ಬೆಳಿಗ್ಗೆ ಗಂಟೆ 8.00ಕ್ಕೆ ಧ್ವಜಾರೋಹಣ, ಸಾಮೂಹಿಕ ಗಣಹೋಮ, ಮಹಾಪೂಜೆ, ಕಲಶಾಭಿಷೇಕ ಮಧ್ಯಾಹ್ನ 1.00 ದಿ|ಪರ್ಕಳ ಗುರುರಾಜ ಜೋಯಿಸರ್ ರವರ ಸುಪುತ್ರರಿಂದ ಸಂತರ್ಪಣೆ, ರಾತ್ರಿ ಬೈಗಿನ ಬಲಿ, ಚಂದ್ರಮಂಡಲ […]