ದ.ಕ ಜಿಲ್ಲೆ: ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಣೆ

ಮಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ಫಲಿತಾಂಶ 2023 ಅನ್ನು ಇಂದು ಮಾರ್ಚ್ 31, 2023 ರಂದು ಬಿಡುಗಡೆ ಮಾಡಿದೆ. ಪೂರ್ವ ವಿಶ್ವವಿದ್ಯಾಲಯ ಪರೀಕ್ಷೆ (ಪಿಯುಸಿ) 1 ನೇ ವರ್ಷದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು result.dkpucpa.com ಅಧಿಕೃತ ವೆಬ್‌ಸೈಟ್‌ ನಲ್ಲಿ ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಬಹುದು. ಫಲಿತಾಂಶವು ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜುಗಳಿಗೆ ಮಾತ್ರ ಎಂಬುದನ್ನು ವಿದ್ಯಾರ್ಥಿಗಳು ಗಮನಿಸಬೇಕು.

ದೊಡ್ಡಣ್ಣಗುಡ್ಡೆ: ಏಪ್ರಿಲ್ 3 ರಂದು ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನಾಗ ತನು ತರ್ಪಣ

ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಏಪ್ರಿಲ್ 3ರಂದು ನಾಗ ತನು ತರ್ಪಣ ಮಂಡಲ ಸೇವೆಯು ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ. ಆ ಪ್ರಯುಕ್ತ ಕ್ಷೇತ್ರದ ನಾಗಾಲಯದಲ್ಲಿ ಬೆಳಿಗ್ಗೆ ನವಕ ಕಲಶ ಪ್ರಧಾನ ಹೋಮ, ಕಲಶಾ ಅಭಿಷೇಕ, ಸುಬ್ರಹ್ಮಣ್ಯ ದೇವರಿಗೆ ಪವಮಾನ ಕಲಶಾಭಿಷೇಕ, ಪ್ರಸನ್ನ ಪೂಜೆ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನೆರವೇರಲಿರುವುದು. ಸಮಸ್ತ ನಾಗದೋಷ ಪರಿಹಾರಾರ್ಥವಾಗಿ ಸರ್ವ ಪ್ರಾಯಶ್ಚಿತ್ತ ಪೂರ್ವಕವಾಗಿ ನೆರವೇರಲಿರುವ ಈ […]

ಚುನಾವಣಾ ನೀತಿ ಸಂಹಿತೆ ಜಾರಿ: ಶಸ್ತ್ರಾಸ್ತ್ರ ಠೇವಣಿಗೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಕರ್ನಾಟಕ ಸಾರ್ವತ್ರಿಕ ಚುನಾವಣೆ- 2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ಚುನಾವಣೆ ನಡೆಯಲಿದ್ದು, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಶಸ್ತ್ರಾಸ್ತ್ರ, ಆಯುಧ ಮತ್ತು ಮದ್ದುಗುಂಡುಗಳೊಂದಿಗೆ ಸಂಚಾರ ಹಾಗೂ ಅವುಗಳನ್ನು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ. ಆತ್ಮ ರಕ್ಷಣೆ ಮತ್ತು ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ವಿಧಧ ಶಸ್ತ್ರಾಸ್ತ್ರಗಳನ್ನು (ಎಸ್‌ಬಿಬಿಎಲ್, ಡಿಬಿಬಿಎಲ್, […]

ವಸಯಿ: ಮೊಗವೀರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ವಸಯಿ: ವಸಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಆಯೋಜಿಸಲಾದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಹಳದಿ ಕುಂಕುಮ ಕಾರ್ಯಕ್ರಮ ಮಾರ್ಚ್ 26ರಂದು ಸಂಘದ ಕಚೇರಿ. ಬಿ-1೦2, ನ್ಯೂ ವರ್ಷಾ ಕೋಅಪರೇಟಿವ್ ಹೌಸಿಂಗ್ ಸೊಸೈಟಿ, ಆನಂದ ನಗರ ವಸಯಿ ಪಶ್ಚಿಮ ಕಚೇರಿಯ ಕೊರಗಪ್ಪ ಸಾಲ್ಯಾನ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು. ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸುವ ಮೂಲಕ ಅತಿಥಿ ಗಾಗೂ ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಮಾಜ ಸೇವಕಿ ಧಾರ್ಮಿಕ ಚಿಂತಕರಾದ ಪುಷ್ಪ ಜಿ ಬಂಗೇರ ಹಾಗೂ ಪರಿಸರದ […]

ಮೈಸೂರಿನ ಕುಟುಂಬ ಮಂಗಳೂರಿನಲ್ಲಿ ಆತ್ಮಹತ್ಯೆ

ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಲಾಡ್ಜ್‌ ಒಂದರಲ್ಲಿ ಮೈಸೂರಿನಿಂದ ಬಂದಿದ್ದರೆನ್ನಲಾದ ಒಂದೇ ಕುಟುಂಬದ ನಾಲ್ವರು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ದೇವೇಂದ್ರ (48), ನಿರ್ಮಲಾ (38) ಮತ್ತು 9 ವರ್ಷದ ಅವಳಿ ಹೆಣ್ಣು ಮಕ್ಕಳಾದ ಚೈತ್ರ ಮತ್ತು ಚೈತನ್ಯ ಎಂದು ಗುರುತಿಸಲಾಗಿದೆ. ಕುಟುಂಬವು ಮಾರ್ಚ್ 27 ರಂದು ಕೊಠಡಿಯನ್ನು ಬಾಡಿಗೆಗೆ ತೆಗೆದುಕೊಂಡಿತ್ತು ಮತ್ತು ಮಾರ್ಚ್ 30 ರಂದು ಖಾಲಿಮಾಡಬೇಕಾಗಿತ್ತು. ಪತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಪತ್ನಿ ಹಾಗೂ ಇಬ್ಬರು […]