ಹೆಬ್ರಿ: ಚಾಣಕ್ಯ ನಲಿಕಲಿ ವೈವಿಧ್ಯಮಯ ಬೇಸಗೆ ಶಿಬಿರಕ್ಕೆ ಚಾಲನೆ

ಹೆಬ್ರಿ: ಮೊಬೈಲ್ ಹಾಗೂ ಟಿವಿ ನೋಡುತ್ತಾ ರಜಾ ಸಮಯದಲ್ಲಿ ಕಾಲಹರಣ ಮಾಡುವ ಬದಲು, ಬದುಕು ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಇಂತಹ ವೈವಿಧ್ಯಮಯ ಬೇಸಗೆ ಶಿಬಿರದಲ್ಲಿ ಮಕ್ಕಳನ್ನು ಸೇರಿಸಿ ಎಂದು ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿ.ಕರುಣಾಕರ ಶೆಟ್ಟಿ ಹೇಳಿದರು. ಅವರು ಚಾಣಕ್ಯ ಎಜುಕೇಷನ್ ಮತ್ತು ಕಲ್ಚರಲ್ ಅಕಾಡೆಮಿ ಆಶ್ರಯದಲ್ಲಿ ಏ.26ರ ವರೆಗೆ ಹೆಬ್ರಿ ಎಸ್.ಆರ್.ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ನಡೆಯುತ್ತಿರುವ ಚಾಣಕ್ಯ ನಲಿಕಲಿ ವೈವಿಧ್ಯಮಯ ಬೇಸಗೆ ಶಿಬಿರವನ್ನು ಉದ್ಘಾಟಿಸಿ […]

ಬ್ರಹ್ಮಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಸಾದ್ ರಾಜ್ ಕಾಂಚನ್

ಬ್ರಹ್ಮಾವರ: ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಪ್ರಸಾದ್ ರಾಜ್ ಕಾಂಚನ್, ಶ್ರೀ‌ಮಹಾಲಿಂಗೇಶ್ವರ ದೇವರ ದರ್ಶನ ಪಡೆದು ದೇವರ ಪ್ರಸಾದ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ಅಡಳಿತ ಮಂಡಳಿ ಶಾಲು ಹೊದಿಸಿ ಅಭಿನಂದಿಸಿ ಶುಭ ಹಾರೈಸಿದರು.