ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಶಾಸಕ ಎಸ್.ಅಂಗಾರ

ಬೆಂಗಳೂರು: ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಶಾಸಕ ಎಸ್.ಅಂಗಾರ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇನೆ. ನಾನು ಬೇಸರದಲ್ಲಿ ಮತ್ತು ಉದ್ವೇಗದಲ್ಲಿ ಈ ಹಿಂದೆ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದೆ. ಆದರೆ ಆ ಮಾತನ್ನು ವಾಪಸ್ಸು ಪಡೆಯುತ್ತೇನೆ. ಮುಂದೆ ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿ ಗೆಲ್ಲಿಸುವುದು ನನ್ನ ಗುರಿ ಎಂದು ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ ಚುನಾವಣಾ ಪೂರ್ವಭಾವಿ ಸಭೆ

ಉಡುಪಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯು ಹಾಲಿ ಶಾಸಕ ಕೆ.ರಘುಪತಿ ಭಟ್ ಅವರ ಮಾರ್ಗದರ್ಶನದಲ್ಲಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ವೀಣಾ ನಾಯ್ಕ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಮಾಜಿ ಸಚಿವ […]

ಕ್ರಿಯೇಟಿವ್‌ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್‌ ಅಂಬೇಡ್ಕರ್‌ ಜಯಂತಿ ಆಚರಣೆ

ಕಾರ್ಕಳ: ಸಂವಿಧಾನ ಶಿಲ್ಪಿ ಡಾ. ಬಿ ಆರ್‌ ಅಂಬೇಡ್ಕರ್‌ ರವರ 132 ನೇ ಜಯಂತಿಯನ್ನು ಇಂದು ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಇವರು ಪುಷ್ಪ ನಮನ ಸಲ್ಲಿಸಿ ಮಾತನಾಡಿ ಅಂಬೇಡ್ಕರ್ ರವರು ವಿದೇಶದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್‌ (ಪಿಹೆಚ್‌ಡಿ) ಪದವಿ ಪಡೆದ ಮೊದಲ ಭಾರತೀಯ. ಇವರು ಸುಮಾರು 64 ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದರು ಹಾಗೂ ಒಂಬತ್ತು ಭಾಷೆಗಳನ್ನು ಬಲ್ಲವರಾಗಿದ್ದರು. ವಿಶ್ವದರ್ಜೆಯ ವಕೀಲರು, ಸಾಮಾಜ ಸುಧಾರಕರೂ ಆಗಿದ್ದವರು. ಭಾರತದ ದಲಿತ […]

ಅಮೆಜಾನ್ ಪ್ರೈಮ್ ಒಟಿಟಿ ಯಲ್ಲಿ ಕಬ್ಜ ಚಿತ್ರ ಪ್ರಸಾರ

ಆರ್.ಚಂದ್ರು ನಿರ್ದೇಶನ ಮತ್ತು ನಿರ್ಮಾಣದ ಕನ್ನಡ ಚಲನಚಿತ್ರ ‘ಕಬ್ಜ’ ಏಪ್ರಿಲ್ 14ರಿಂದ ಅಮೆಜಾನ್ ಪ್ರೈಮ್ ನಲ್ಲಿ ತೆರೆಕಾಣಲಿದ್ದು, ಚಿತ್ರರಸಿಕರು ಯಾವಾಗ ಬೇಕಾದರೂ ವೀಕ್ಷಿಸಬಹುದು. ಚಿತ್ರವು ಬೆಳ್ಳಿತೆರೆಯಲ್ಲಿ ಬಿಡುಗಡೆ ಹೊಂದಿ 25 ದಿನಗಳನ್ನು ಪೂರ್ಣಗೊಳಿಸಿದ್ದು, ಚಿತ್ರ ತಂಡವು ಸಂತೋಷ ವ್ಯಕ್ತಪಡಿಸಿದೆ. ಕಬ್ಜ ಚಿತ್ರದ ಮುಂದುವರೆದ ಭಾಗವೂ ಕೂಡಾ ಚಿತ್ರೀಕರಣವನ್ನು ಪ್ರಾರಂಭಿಸಿದ್ದು ಚಂದ್ರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ರಿಯಲ್ ಸ್ಟಾರ್ ಉಪೇಂದ್ರ, ಕಿಚ್ಚ ಸುದೀಪ್ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಈ ಚಿತ್ರದ ಬಗ್ಗೆ ಎಲ್ಲರಿಗೂ […]

ಗುರು ಸಂಕ್ರಮಣ: ಕರ್ಕಾಟಕ ಹಾಗೂ ಸಿಂಹ ರಾಶಿಯವರಿಗೆ ಫಲಗಳು

ಕರ್ಕಾಟಕ ರಾಶಿ ಗುರು ಈ ರಾಶಿಯ ಒಂಬತ್ತನೇ ಮತ್ತು ಆರನೇ ಮನೆಯ ಅಧಿಪತಿ. ಕರ್ಕಾಟಕ ರಾಶಿಯಿಂದ ಹತ್ತನೇ ಮನೆಯಲ್ಲಿ ಗುರು ಸಂಕ್ರಮಣವು ಕಾರ್ಯಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗಳನ್ನು ತರುತ್ತದೆ. ಈ ಸಮಯದಲ್ಲಿ ದೀರ್ಘಕಾಲದಿಂದ ಬಯಸುತ್ತಿರುವ ಬದಲಾವಣೆಯು ಬರಬಹುದು. ಆದರೆ ವ್ಯಕ್ತಿಯು ತಾಳ್ಮೆಯಿಂದಿರಬೇಕು. ತಕ್ಷಣವೇ ಬದಲಾವಣೆಗಳನ್ನು ಮಾಡಬಾರದು ಮತ್ತು ಆಗಸ್ಟ್ 2023 ರ ನಂತರ, ವ್ಯಕ್ತಿಯು ಕಾರ್ಯಕ್ಷೇತ್ರದಲ್ಲಿ ಬದಲಾವಣೆಗಳನ್ನು ಮಾಡಬಹುದು. ವ್ಯಾಪಾರ ಮಾಡುತ್ತಿದ್ದರೆ ಅದರಲ್ಲಿ ಅವರು ದೊಡ್ಡ ಬದಲಾವಣೆಯನ್ನು ಎದುರಿಸುತ್ತಾರೆ ಮತ್ತು ವ್ಯವಹಾರದಲ್ಲಿನ ಬದಲಾವಣೆಯು ಅವರಿಗೆ ದೊಡ್ಡ ಯಶಸ್ಸನ್ನು ನೀಡುತ್ತದೆ. […]