ಏ.14 ರಿಂದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ನೂತನ ರಥ ಸಮರ್ಪಣಾ ಸಮಾರಂಭ

ಕಾರ್ಕಳ: ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ನೂತನ ರಥ ಸಮರ್ಪಣಾ ಸಮಾರಂಭ ಮತ್ತು ಶ್ರೀ ಮನ್ಮಹಾರಥೋತ್ಸವವು ಏ.14 ರಿಂದ ಏ. 20 ರವರೆಗೆ ನಡೆಯಲಿರುವುದು. ದಿನಾಂಕ 15.04.2023ನೇ ಶನಿವಾರದಿಂದ ದಿನಾಂಕ 20.04.2023ನೇ ಶುಕ್ರವಾರದವರೆಗೆ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯತಕ್ಕ ಧ್ವಜಾರೋಹಣ ಮೊದಲ್ಗೊಂಡು ನೂತನ ರಥ ಸಮರ್ಪಣೆ ಮತ್ತು ಶ್ರೀ ಮನ್ಮಹಾರಥೋತ್ಸವ ಕೊರಂಗ್ರಪಾಡಿ ಶ್ರೀ ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ಜರಗಲಿರುವುದು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾಭಿಮಾನಿಗಳಾದ ತಾವೆಲ್ಲರೂ ತಮ್ಮ ಬಂಧು ಮಿತ್ರರೊಡಗೂಡಿ ಆಗಮಿಸಿ, […]

ರಂಗೇರಿದ ಚುನಾವಣಾ ಕಣ: ಮೊದಲ ದಿನ 4 ನಾಮಪತ್ರ ಸಲ್ಲಿಕೆ

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಮೊದಲ ದಿನದಂದು ಜಿಲ್ಲೆಯಲ್ಲಿ ಒಟ್ಟು 4 ನಾಮಪತ್ರಗಳು ಸಲ್ಲಿಕೆಯಾಗಿದೆ. 119 ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಿರಣ್ ಕುಮಾರ್ ಕೊಡ್ಗಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಭ್ಯರ್ಥಿಯಾಗಿ ದಿನೇಶ್ ನಾಮಪತ್ರ ಸಲ್ಲಿಸಿರುತ್ತಾರೆ. 120 ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಮದಾಸ ಭಟ್ ನಾಮಪತ್ರ ಸಲ್ಲಿಸಿದ್ದಾರೆ. 122 ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ […]