ಉಡುಪಿ ಬಿಜೆಪಿ ಅಭ್ಯರ್ಥಿಗೆ ಶುಭ ಹಾರೈಸಿದ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ಇಂದು ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಯಶ್ಪಾಲ್ ಸುವರ್ಣ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಪಾಲ್ಗೊಂಡು, ಅಭ್ಯರ್ಥಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿಯ ಶಾಸಕರಾದ ಶ್ರೀ ಕೆ ರಘುಪತಿ ಭಟ್, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್, ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ಮಟ್ಟಾರ್ ರತ್ನಾಕರ್ ಹೆಗ್ಡೆ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು […]

ರಾಮ ಮಂದಿರದಲ್ಲಿ ಬಿಲ್ಲು ಬಾಣದಿಂದ ಶಸ್ತ್ರಸಜ್ಜಿತ ಬಾಲರಾಮ: ಅರುಣ್ ಯೋಗಿರಾಜ್ ಹೆಗಲಿಗೆ ವಿಗ್ರಹ ನಿರ್ಮಾಣ ಕಾರ್ಯ

ಅಯೋಧ್ಯಾ: ರಾಮಮಂದಿರದ ನಿರ್ಮಾಣದ 60 ಪ್ರತಿಶತದಷ್ಟು ಪೂರ್ಣಗೊಂಡಿದ್ದು 2024 ರಲ್ಲಿ ಜನವರಿಯಲ್ಲಿ ರಾಮನು ದೇವಾಲಯದ ಮೂಲ ಗರ್ಭಗುಡಿಯನ್ನು ಸೇರಲಿದ್ದಾನೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಲಿರುವ ಬಿಲ್ಲು ಬಾಣದಿಂದ ಶಸ್ತ್ರಸಜ್ಜಿತವಾದ ಐದು ವರ್ಷದ ಬಾಲರಾಮನ ವಿಗ್ರಹವು ಗರ್ಭಗುಡಿಯಲ್ಲಿ ಸ್ಥಳವನ್ನು ಪಡೆಯಲಿದೆ ಎಂದು ಅಯೋಧ್ಯೆಯ ವರದಿಗಳು ತಿಳಿಸಿವೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ಅಯೋಧ್ಯೆಯ ಸದಸ್ಯರೂ ಆಗಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ನಿನ್ನೆ ಅಯೋಧ್ಯೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅರುಣ್ […]

ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿ ಜನರ ಮನ್ನಣೆಗೆ ಪಾತ್ರವಾಗಿದೆ: ಸುನಿಲ್ ಕುಮಾರ್

ಕಾರ್ಕಳ: ಸ್ವಚ್ಛ ಕಾರ್ಕಳದ ಪರಿಕಲ್ಪನೆ, 237 ಕಿಂಡಿ ಅಣೆಕಟ್ಟುಗಳ ಮೂಲಕ ಕೃಷಿಗೆ ಉತ್ತೇಜನ್, ಕೆಜೆ, ಟಿಟಿಐ ನರ್ಸಿಂಗ್ ಕಾಲೇಜುಗಳ ಮೂಲಕ ಶಿಕ್ಷಣಕ್ಕೆ ಒತ್ತು, ಪ್ರವಾಸೋದ್ಯಮಕ್ಕೆ ಉತ್ತೇಜನ, ಕರೋನಾ ಸಂಕಷ್ಟ ಕಾಲದಲ್ಲೂ ಸವಾಲುಗಳನ್ನು ಎದುರಿಸಿರುವುದು, ತಾಲೂಕಿನ ಸಂಪೂರ್ಣ ಅಭಿವೃದ್ದಿಯು ತನಗೆ ಶ್ರೀರಕ್ಷೆಯಾಗಿದೆ ಎಂದು ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಹೇಳಿದರು. ಕಾರ್ಕಳದ ಜನತೆ ಬಿಜೆಪಿ ಆಡಳಿತವನ್ನು ಮೆಚ್ಚಿ ಬೆಂಬಲಿಸಿದ್ದಾರೆ. ಇಂದು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವವರೂ ಬಿಜೆಪಿಯಿಂದ ಫಲಾನುಭವಿಯಾಗಿದ್ದವರು ಎಂದು ಅವರು ಹೇಳಿದರು. ಗ್ರಾಮಾಭಿವೃದ್ದಿಯಿಂದ ರಾಜ್ಯದ ಅಭಿವೃದ್ದಿ […]

ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಬೃಹತ್ ಪಾದಯಾತ್ರೆ ನಡೆಸಿ ನಾಮಪತ್ರ ಸಲ್ಲಿಕೆ..!!

ಉಡುಪಿ: ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಅವರು ಸಹಸ್ರಾರು ಕಾರ್ಯಕರ್ತರ ಉಪಸ್ಥಿತಿಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ಉಡುಪಿ ಜಿಲ್ಲಾ ಕಚೇರಿಯಲ್ಲಿ ಸಾರ್ವಜನಿಕ ಸಭೆ ನಡೆಸಿ ಬಳಿಕ ಕಡಿಯಾಳಿ, ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಬನ್ನಂಜೆ ಮಾರ್ಗವಾಗಿ ತಾಲೂಕು ಕಚೇರಿಯ ತನಕ ಬೃಹತ್ ಪಾದಯಾತ್ರೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದರು.ಪಾದಯಾತ್ರೆಯಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಉಡುಪಿ, ಮಲ್ಪೆ, ಬ್ರಹ್ಮಾವರ, ಭಾಗಗಳಿಂದ ಭಾಗಿಯಾಗಿದ್ದರು. ಸಚಿವ ಸುನಿಲ್ ಕುಮಾರ್, ಪ್ರಮೋದ್ ಮಧ್ವರಾಜ್, ಶಾಸಕ ರಘುಪತಿ ಭಟ್ ಜಿಲ್ಲಾ […]

ಉಡುಪಿ ಜಿಲ್ಲಾ ಚುನಾವಣಾ ಪೊಲೀಸ್ ವೀಕ್ಷಕರರಾಗಿ ಬಿನಿತ ಠಾಕೂರ್ ನೇಮಕ

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲೆಗೆ ಪೊಲೀಸ್ ವೀಕ್ಷಕರನ್ನಾಗಿ ಬಿನಿತ ಠಾಕೂರ್ , ಐ.ಪಿ.ಎಸ್. ಅವರನ್ನು ನೇಮಿಸಿದ್ದು, ಸದ್ರಿ ಅವರು ಕರ್ತವ್ಯಕ್ಕೆ ಹಾಜರಾಗಿದ್ದು, ಇವರ ಕಚೇರಿಯನ್ನು ಉಡುಪಿ ಪ್ರವಾಸಿ ಮಂದಿರದ ಕೊಠಡಿ ಸಂಖ್ಯೆ ವಿವಿಐಪಿ-1 ನಲ್ಲಿ ತೆರೆಯಲಾಗಿದ್ದು, ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಸಾರ್ವಜನಿಕರು/ ಜನಪ್ರತಿನಿಧಿಗಳು ಪ್ರತಿದಿನ ಬೆಳಗ್ಗೆ 12 ರಿಂದ 1 ಗಂಟೆಯವರೆಗೆ ಅಥವಾ ಅವರ ಪ್ರತಿನಿಧಿಗಳಿಗೆ ಸಲ್ಲಿಸಬಹುದಾಗಿದ್ದು, ಪೊಲೀಸ್ ವೀಕ್ಷಕರ ಮೊಬೈಲ್ ಸಂಖ್ಯೆ. 9482778235, ದೂ.ಸಂ. 0820-2003022 ಮೂಲಕ ಸಹ […]