ಮತಗಟ್ಟೆಗಳ ಸುತ್ತ ಪ್ರತಿಬಂಧಕಾಜ್ಞೆ: ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ

ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯುವ ಹಿನ್ನೆಲೆ, ಮೇ 8 ರಂದು ಸಂಜೆ 6 ಗಂಟೆಯಿಂದ ಮೇ 10 ರಂದು ಮತದಾನ ಮುಕ್ತಾಯವಾಗುವವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳ ಸುತ್ತಲೂ 200 ಮೀ. ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ, ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ಈ ಕೆಳಗಿನಂತೆ ಷರತ್ತುಗಳನ್ನು ವಿಧಿಸಿ, ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ […]

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ..

ಮಣಿಪಾಲ: ದಿನಾಂಕ 25 ಏಪ್ರಿಲ್ 2023: 21 ವರ್ಷದ ಶ್ರೀ ಉಲ್ಲಾಸ್ ಆರ್ ಇವರಿಗೆ ಭದ್ರಾವತಿ ತಾಲೂಕಿನ ಚೆನ್ನಗಿರಿ ರಸ್ತೆಯಲ್ಲಿ 22.04.2023ರಂದು ಮದ್ಯಾಹ್ನ 3. 00 ಗಂಟೆಗೆ ರಸ್ತೆ ಅಪಘಾತ ಸಂಭವಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ದಿನಾಂಕ 23.04.2023ರಂದು ಬೆಳಿಗ್ಗೆ 10. 47 ಕ್ಕೆ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು . ಭದ್ರಾವತಿ ತಾಲೂಕಿನ ಕೆಂಚನಹಳ್ಳಿ ಗ್ರಾಮ, ನೀರಗುಂಡಿ ಅಂಚೆಯ ಶ್ರೀ ರಾಜಪ್ಪ ಇವರ ಮಗನಾದ ಶ್ರೀ ಉಲ್ಲಾಸ್ ಅವರು ಅಪಘಾತದ ಪರಿಣಾಮದಿಂದ ತೀವ್ರತರವಾದ ಗಾಯವನ್ನು […]

ವಾಟ್ಸಾಪ್ (WhatsApp)ಬಳಕೆದಾರರು ಈಗ ನಾಲ್ಕು ಫೋನ್‌ಗಳಲ್ಲಿ ಒಂದು ಖಾತೆಯನ್ನು ಬಳಸಬಹುದು: ಹೇಗೆಂದು ತಿಳಿಯಿರಿ

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಸಿಇಒ ಮಾರ್ಕ್ ಜುಕರ್‌ಬರ್ಗ್, ವಾಟ್ಸಾಪ್ (WhatsApp) ಅಂತಿಮವಾಗಿ ಬಹು-ಸಾಧನ ಲಾಗಿನ್ ಬೆಂಬಲವನ್ನು ಪರಿಚಯಿಸುತ್ತಿದೆ ಎಂದು ಘೋಷಿಸಿದ್ದು, ಇದು ಬಳಕೆದಾರರಿಗೆ ಒಂದೇ ವಾಟ್ಸಾಪ್ ಖಾತೆಯನ್ನು ನಾಲ್ಕು ಬೇರೆ ಬೇರೆ ಫೋನ್‌ಗಳಲ್ಲಿ ಬಳಸಲು ಅನುವು ಮಾಡಿಕೊಡುತ್ತದೆ. ವಾಟ್ಸಾಪ್ ಪ್ರಕಾರ, ಈ ವೈಶಿಷ್ಟ್ಯವನ್ನು ಮುಂಬರುವ ವಾರಗಳಲ್ಲಿ ಎಲ್ಲಾ ಬಳಕೆದಾರರಿಗೆ ಬಿಡುಗಡೆ ಮಾಡಲಾಗುವುದು. ಈ ಹಿಂದೆ, ಬಳಕೆದಾರರು ಒಂದೇ ಫೋನ್ ಮತ್ತು ಬಹು ಕಂಪ್ಯಾನಿಯನ್ ಡೆಸ್ಕ್‌ಟಾಪ್ ಸಾಧನಗಳಲ್ಲಿ ಒಂದು ವಾಟ್ಸಾಪ್ ಖಾತೆ ಬಳಸಲು ಸೀಮಿತರಾಗಿದ್ದರು. ಈ ಹೊಸ ಬಹು-ಸಾಧನ […]

ಬೈಂದೂರು: ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ್ ಪೂಜಾರಿ ಶ್ರೀ ಸೇನೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಭಾಗಿ..

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಗೋಪಾಲ್ ಪೂಜಾರಿ ಅವರು ಚಾರಿತ್ರಿಕ ಹಿನ್ನೆಲೆಯುಳ್ಳ ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಭಾಗಿಯಾದರು. ಹಾಗೂ ಶ್ರೀ ದೇವರ ಆಶೀರ್ವಾದ ಪಡೆದರು.

ಪ್ರಚಾರ ತೀವ್ರಗೊಳಿಸಿದ ಭಾರತೀಯ ಜನತಾ ಪಕ್ಷ: ಮೋದಿ-ಯೋಗಿ ಸಹಿತ ಘಟಾನುಘಟಿ ನಾಯಕರಿಂದ ಸಭೆ-ರೋಡ್ ಶೋ

ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಭಾರತೀಯ ಜನತಾ ಪಕ್ಷವು ತೀವ್ರಗೊಳಿಸಿದ್ದು, ಮುಂದಿನ ಎರಡು ವಾರಗಳಲ್ಲಿ ಹಲವಾರು ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಮಂಡ್ಯ ಮತ್ತು ವಿಜಯಪುರದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್ ಪ್ರವೇಶ ಮಾಡಲಿದ್ದಾರೆ. ಒಕ್ಕಲಿಗರಲ್ಲಿ ಹಲವರು ತಮ್ಮದು ನಾಥ ಪಂಥಕ್ಕೆ ಸೇರಿದ ಮಠವೆಂದು ನಂಬುತ್ತಾರೆ. ಈ ಕಾರಣದಿಂದ ಒಕ್ಕಲಿಗರು ಯೋಗಿ […]