ಉಡುಪಿ: ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಜೊತೆ ಭಾಗಿಯಾದ ಕೇಂದ್ರ ಸಚಿವ-ಸಂಸದರು

ಉಡುಪಿ: ಇಲ್ಲಿನ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಪರವಾಗಿ ಉಡುಪಿ ಸಂತೆಕಟ್ಟೆಯಲ್ಲಿ ಆಯೋಜಿಸಿದ್ದ ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಬಿ ಎಲ್ ವರ್ಮಾ, ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ, ಕೆ ರಘುಪತಿ ಭಟ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ಶ್ರೀಮತಿ ವೀಣಾ ನಾಯ್ಕ್, ನಿಕಟ ಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿ ಮತಯಾಚನೆ ಮಾಡಿದರು.

ಕಾಪು: ಪಕ್ಷೇತರ ಅಭ್ಯರ್ಥಿ ಆಸಿಫ್ ಹನನ್ ಕಾಂಗ್ರೆಸ್ ಸೇರ್ಪಡೆ 

  ಕಾಪು: ನಮ್ಮ ಕಾಪು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಆಸೀಫ್ ಹನನ್ ನಾಮಪತ್ರ ಹಿಂತೆಗೆದು ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಆಸೀಫ್ ಜೊತೆ ಶೇಖ್ ಸೈಯದ್ ಅಹ್ಮದ್, ಇಬ್ರಾಹಿಂ ಅವರನ್ನೂ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಕಾಂಗ್ರೆಸ್ ಮುಖಂಡರಾದ ನವೀನಚಂದ್ರ ಸುವರ್ಣ , ಶರ್ಫುದ್ದೀನ್ ಶೇಖ್, ರಾಜ್ ಶೇಖರ್ ಕೋಟ್ಯಾನ್, ದಿನೇಶ್ ಕೋಟ್ಯಾನ್, ಇಮ್ರಾನ್ ಮಜೂರು, ಫಾರೂಕ್ ಚಂದ್ರ ನಗರ, ಉಸ್ಮಾನ್ ಕಾಪು, ರಮೀಝ್ ಪಡುಬಿದ್ರಿ, ಹಮೀದ್ […]