ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಮುಲ್ಕಿ- ಮೂಡುಬಿದ್ರಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ

ಮೂಡುಬಿದ್ರಿ: ಮುಲ್ಕಿ- ಮೂಡುಬಿದ್ರಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಸಹ್ಯಾದ್ರಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭೇಟಿ ಮಾಡಿದರು.

ಕುಂದಾಪುರ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಕೋಡಿ ಕನ್ಯಾನ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಭಾಗಿ

ಕುಂದಾಪುರ: ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಬಿಜೆಪಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಡಿ ಕನ್ಯಾನ ವ್ಯಾಪ್ತಿಯ ಕನ್ಯಾನ‌ ರಾಮ ಮಂದಿರ ಸಮೀಪ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ,ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಕುಂದಾಪುರ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕಾರ್ಯದರ್ಶಿ ಸತೀಶ್ ಪೂಜಾರಿ ಹಾಗೂ ಪ್ರಮುಖ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.

ಯಶ್ಪಾಲ್ ಗೆಲುವು ಅಭಿವೃದ್ಧಿಯ ದಿಕ್ಸೂಚಿ: ಮಹೇಶ್ ಠಾಕೂರ್

ಉಡುಪಿ: ಉಡುಪಿ ವಿದಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ, ಪ್ರಖರ ಹಿಂದುತ್ವವಾದಿ ಯಶ್ಪಾಲ್ ಸುವಣ೯ ಗೆಲುವು ಮುಂದಿನ ನವಉಡುಪಿ ಯ ಅಭಿವೃದ್ಧಿಯ ದಿಕ್ಸೂಚಿ ಎಂದು ಉಡುಪಿ ಬಿಜೆಪಿ ನಗರಾಧ್ಯಕ್ಷರಾದ ಮಹೇಶ್ ಠಾಕೂರ್ ತಿಳಿಸಿದರು. ಇಂದು ಉಡುಪಿ ಬೈಲೂರಿನ ಕಾರ್ಯಕರ್ತರ ಮನೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮಹೇಶ್ ಠಾಕೂರ್ ಉಡುಪಿಯಲ್ಲಿ ಡಾ.ವಿಸ್ ಆಚಾರ್ಯರಿಂದ ಆರಂಭಗೊಂಡ ಉಡುಪಿಯ ಅಭಿವೃದ್ಧಿಯ ಶಕೆ ಉಡುಪಿ ಶಾಸಕರಾದ ಕೆ ರಘುಪತಿ ಭಟ್ ರಿಂದ ಮುಂದುವರಿದು ಯಶ್ಪಾಲ್ ಸುವರ್ಣರಿಂದ ಮತ್ತೊಂದು ದೆಶೆಗೆ ತೆರಳಲಿದೆ ಎಂದು […]

ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಶಿರ್ವ ಪಂಚಾಯತ್ ವ್ಯಾಪ್ತಿಯ ಮತದಾರರ ಮನೆ ಮನೆಗೆ ತೆರಳಿ ಮತಯಾಚನೆ

ಶಿರ್ವ: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ವಿಧಾನಸಭಾ ಚುನಾವಣೆಯ ಪ್ರಯುಕ್ತ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್ ಹಾಗೂ ಚುನಾವಣಾ ಪ್ರವಾಸಿ ಪ್ರಮುಖ್ ಶ್ರೀ ವಿಜೇಂದ್ರ ಗುಪ್ತ ಅವರೊಂದಿಗೆ ಶಿರ್ವ ಪಂಚಾಯತ್ ವ್ಯಾಪ್ತಿಯ ಪ್ರದೇಶದ ನಿವಾಸಿಗಳ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಶ್ರೀ ಸತ್ಯದೆಕ್ಕಿ ಧರ್ಮರಸು ಕೊಡಮಣಿತ್ತಾಯ ಕುಕ್ಕಿನಂತಾಯ ಬ್ರಹ್ಮ ಬೈದರ್ಕಳ ಹಾಗೂ ಮಾಯಂದಾಲೆ ದೇವಿ ಜೋಡುಗರಡಿಯಲ್ಲಿ ಮೇ 3 ರಂದು ಪುನರ್ ಪ್ರತಿಷ್ಠೆ, ನೂತನ ಧ್ವಜಸ್ಥಂಭ ಪ್ರತಿಷ್ಠೆ

ಕಾರ್ಕಳ : ನೂತನ ಶಿಲಾಮಯ ಗರ್ಭಗುಡಿಗಳಲ್ಲಿ ಶ್ರೀ ಕ್ಷೇತ್ರದ ಧರ್ಮದೈವಗಳ ಪುನರ್ ಪ್ರತಿಷ್ಠೆ, ನೂತನ ಧ್ವಜಸ್ತಂಭ ಪ್ರತಿಷ್ಠೆ, ಬ್ರಹ್ಮ ಕಲಶಾಭಿಷೇಕ ಧಾರ್ಮಿಕ ಸಭೆ ಹಾಗೂ ವಾರ್ಷಿಕ ನೇಮೋತ್ಸವ ಕಾರ್ಯಕ್ರಮ ಎ. 29 ರಿಂದ ಎ.8ರವರಗೆ ನೂತನವಾಗಿ ನಿರ್ಮಿಸಿರುವ ಶಿಲಾಮಯ ಗರ್ಭಗುಡಿಗಳಲ್ಲಿ ಎಡಪದವು ಬ್ರಹ್ಮಶ್ರೀ ಮುರುಲೀಧರ ತಂತ್ರಿಗಳ ಮಾರ್ಗದರ್ಶನದಲ್ಲಿ ಗ್ರಾಮದ ಪ್ರಧಾನ ಅಸ್ರಣ್ಣರಾದ ಸಾಣೂರು ದೇಂದಬೆಟ್ಟು ವೇದಮೂರ್ತಿ ಶ್ರೀ ಶ್ರೀರಾಮ ಭಟ್ರ ನೇತೃತ್ವದಲ್ಲಿ ಶ್ರೀ ಕ್ಷೇತ್ರದ ಧರ್ಮದೈವಗಳನ್ನು ಪುನರ್ ಪ್ರತಿಷ್ಠೆ ಬ್ರಹ್ಮ ಕಲಶಾಭಿಷೇಕ ಜರಗಲಿರುವುದು. ಆ ಪ್ರಯುಕ್ತ ಶ್ರೀ […]