ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಗೋಪಾಲ್ ಪೂಜಾರಿ ಅಂಪಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮತದಾರರ ಭೇಟಿ..

ಬೈಂದೂರು: ಬೈಂದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ್ ಪೂಜಾರಿ ಬೈಂದೂರು ವಿಧಾನಸಭಾ ಕ್ಷೇತ್ರದ ಅಂಪಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗೊರಟೆ ವ್ಯಾಪ್ತಿಯಲ್ಲಿ ನಡೆದ ಮತದಾರರ ಭೇಟಿಯಾದರು. ಮತಯಾಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಗ್ಯಾರಂಟಿ ಕಾರ್ಯಕ್ರಮಗಳ ಬಗ್ಗೆ ಮತದಾರರ ಗಮನ ಸೆಳೆದರು. ಜೊತೆಗೆ ಈ ಬಾರಿಯ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು. ಈ ಸಂದರ್ಭದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ಮುಖಂಡರಾದ ಕಿರಣ್‌ ಹೆಗ್ಡೆ, ಜ್ಯೋತಿ ಎಮ್‌, ಉದಯ್‌ ಕುಮಾರ್‌ ಶೆಟ್ಟಿ, ಸರ್ಜಿತ್‌ ಕುಮಾರ್‌ […]

ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ಬಗ್ಗೆ ಜನಗಳು ಏನಂತಾರೆ?

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆ ಮೇ 10ಕ್ಕೆ ನಡೆಯಲಿದ್ದು, ಆ ಪ್ರಯುಕ್ತ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ವಿ.ಸುನಿಲ್ ಕುಮಾರ್ ಕಣಕ್ಕೆ ಇಳಿದಿದ್ದಾರೆ. ವಿ.ಸುನಿಲ್ ಕುಮಾರ್ ಬಗ್ಗೆ ಜನರ ಅಭಿಮತ ಹೀಗಿವೆ. ಸುನೀಲ್ ಕುಮಾರ್ ಅಭಿವೃದ್ಧಿ ಗೆ ಹೊಸ ಭಾಷ್ಯ ಬರೆದಿದ್ದಾರೆ.  -ಜಯರಾಂ ಪ್ರಭು, ಕಡಾರಿ  ರಸ್ತೆ ಹಾಗೂ ಸೇತುವೆಗಳು ಅಭಿವೃದ್ಧಿ ಯೋಜನೆ ಗಳನ್ನು ಮಾಡಿದ್ದಾರೆ. -ಸದಾಶಿವ ಆಚಾರ್ಯ, ಮಾಳ ಕಾರ್ಕಳವನ್ನೆ ಬ್ರಾಂಡ್ ಮಾಡುವ ಮೂಲಕ ಬಿಳಿಬೆಂಡೆ ಕಾರ್ಲಕಜೆ ಅಕ್ಕಿಗೆ ಜಾಗತಿಕ ಮನ್ನಣೆ ನೀಡಿದ್ದಾರೆ. -ದೀಪಕ್ ಶೆಟ್ಟಿ, […]

ಗುರ್ಮೆ ಸುರೇಶ್ ಶೆಟ್ಟಿ ಶಾಸಕರೊಂದಿಗೆ ಮಣಿಪುರ, ಉದ್ಯಾವರ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ

ಕಟಪಾಡಿ: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಶಾಸಕರಾದ ಲಾಲಾಜಿ ಆರ್. ಮೆಂಡನ್ ಅವರೊಂದಿಗೆ ಕ್ಷೇತ್ರದ ಮಣಿಪುರ ಹಾಗೂ ಉದ್ಯಾವರ ಪಂಚಾಯತ್ ವ್ಯಾಪ್ತಿಯ ಮತದಾರರನ್ನು ಇಂದು ಭೇಟಿ ಮಾಡಿದರು. ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡುದರ ಮೂಲಕ ಕಾಪು ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವಂತೆ ಕೋರಿದರು.

ಸಾಣೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿದ ಸಚಿವ ಸುನಿಲ್ ಕುಮಾರ್

ಕಾರ್ಕಳ: ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಸಾಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಇಂದು ಭೇಟಿ ಮಾಡಿದರು. ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಕಾರ್ಕಳವನ್ನು ಅಭಿವೃದ್ಧಿಗೊಳಿಸುವಂತೆ ಕೋರಿದರು.

ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ

 ಕಾಪು: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಲಾಲಾಜಿ ಆರ್. ಮೆಂಡನ್ ಅವರೊಂದಿಗೆ ಬಂಟಕಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.