ಮೈಸೂರು: ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆ ಮೇಲೆ ಐಟಿ ದಾಳಿ; 1 ಕೋಟಿ ವಶ

ಮೈಸೂರು: ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಚುನಾವಣಾ ಆಯೋಗವು ಎಷ್ಟೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೂ, ಅಕ್ರಮ ಹಣದ ಕಂತೆ ಕಂತೆಗಳು ಎಗ್ಗಿಲ್ಲದೆ ಅತ್ತಿಂದಿತ್ತ ಚಲಿಸುತ್ತಿವೆ. ಇದೀಗ ಮೈಸೂರಿನಲ್ಲಿರುವ ಸುಬ್ರಮಣ್ಯ ರೈ ಅವರ ಮನೆಯಲ್ಲಿ ಆದಾಯ ತೆರಿಗೆ ಇಲಾಖೆ ಒಂದು ಕೋಟಿ ರೂಪಾಯಿ ವಶಪಡಿಸಿಕೊಂಡಿದೆ. ಸುಬ್ರಮಣ್ಯ ರೈ ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಸಹೋದರನಾಗಿದ್ದಾರೆ. ಕಳೆದ ಕೆಲವು ವಾರಗಳಿಂದ ಐಟಿ ಇಲಾಖೆಯು ಕರ್ನಾಟಕದಲ್ಲಿ ಚುನಾವಣಾ ಸರಮಾಲೆಯ ದಾಳಿಗಳನ್ನು ನಡೆಸಿದೆ. ಹುಬ್ಬಳ್ಳಿ, ಬೆಂಗಳೂರು, ಮೈಸೂರು ಹಾಗೂ ದಕ್ಷಿಣ […]

ಮೇ 22 ರಿಂದ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಆರಂಭ: ಇಲ್ಲಿದೆ ವೇಳಾಪಟ್ಟಿ..!!

ಬೆಂಗಳೂರು :  ರಾಜ್ಯದಲ್ಲಿ 2023ನೇ ಸಾಲಿನ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪ್ರಕಟಗೊಳಿಸಲಾಗಿದೆ. ಮೇ 22 ರಿಂದ ಜೂನ್ 2 ರವರೆಗೆ ಪೂರಕ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಈ ವರ್ಷದಿಂದ ದ್ವಿತೀಯ ಪಿಯು ಪರೀಕ್ಷೆ ನಡೆಸುತ್ತಿರುವ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಂಗಳವಾರ ಬಿಡುಗಡೆ ಮಾಡಿದೆ. ಮೇ 22 ರಿಂದ […]

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ “ಭಜರಂಗದಳ ನಿಷೇಧ”: ಕಾರ್ಕಳ ಬಿಜೆಪಿ ಆಕ್ರೋಶ

ಕಾರ್ಕಳ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇಧಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವುದನ್ನು ಖಂಡಿಸಿ ಕಾರ್ಕಳ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈಗಾಗಲೇ ರಾಜ್ಯ ಬಿಜೆಪಿ ಸರಕಾರ ಪಿಎಫ್ಐ ಭಯೋತ್ಪಾದಕ ಸಂಘಟನೆಯನ್ನು ನಿಷೇಧಿಸಿ, ಅವರ ಕಾನೂನುಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕುತಿದ್ದರೂ ಕೂಡ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲೂ ಪಿಎಫ್ಐ ಅನ್ನು ನಿಷೇಧಿಸುವುದಾಗಿ ಹೇಳಿರುವುದು ಹಾಸ್ಯಾಸ್ಪದವಾಗಿದೆ. ಪಿಎಫ್ಐ ಜೊತೆಗೆ ಬಜರಂಗದಳವನ್ನು ಕೂಡ ನಿಷೇಧಿಸುವುದಾಗಿ ತಿಳಿಸಿರುವ ಕಾಂಗ್ರೆಸ್ ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ತನ್ನ ಅಧಿಕಾರವಧಿಯಲ್ಲಿ ಪಿಎಫ್ಐ ಜೊತೆಗೆ […]

ಮಣಿಪಾಲ: ಮಾಹೆ ಪರಿಸರಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ

ಮಣಿಪಾಲ: ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಮಂಗಳವಾರದಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಎಂಐಟಿ ಮಣಿಪಾಲ, ಪಾಲಿಟೆಕ್ನಿಕ್ ಕಾಲೇಜು, ಮಣಿಪಾಲ್ ಪ್ರೆಸ್ ಮತ್ತು ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಭೇಟಿ ನೀಡಿ ಮತಯಾಚಿಸಿದರು. ರಘುಪತಿ ಭಟ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಬ್ರಹ್ಮಾವರ; ಜೀವ ಬೆದರಿಕೆ ಆರೋಪ: ದೂರು, ಪ್ರತಿದೂರು ದಾಖಲು..!!

ಬ್ರಹ್ಮಾವರ: ನೀಲಾವರ ಜೋಡುಕಟ್ಟೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಪ್ರಸನ್ನ ಪುತ್ರಾಯ ಅವಾಚ್ಯವಾಗಿ ಬೈದು, ನಮ್ಮ ಜಾಗದ ತಕರಾರಿನ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿಕೊಂಡು ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಮಹೇಂದ್ರ ಕುಮಾರ್‌ ಆರೋಪಿಸಿ ಪ್ರತಿದೂರು ಸಲ್ಲಿಸಿದ್ದಾರೆ. ನರಸಿಂಹ ಶೆಟ್ಟಿ, ವಿಠಲ ಮರಕಾಲ ಹಾಗೂ ಪ್ರಸನ್ನ ಪುತ್ರಾಯ ಅವರ ನಡುವೆ ತಕರಾರು ಇರುವ ದಾರಿ ಮತ್ತು ಜಾಗದ ವಿಷಯದಲ್ಲಿ ರಾಜಿ ಪಂಚಾಯತಿ ಮಾಡಿದ್ದು, ಇದೇ ವಿಷಯದಲ್ಲಿ ಅಸಮಾಧಾನಗೊಂಡು ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ […]