ಮೂಲ್ಕಿ- ಮೂಡುಬಿದ್ರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಪರ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಗಳಿಂದ ಶಿರ್ತಾಡಿಯಲ್ಲಿ ಬೃಹತ್ ಪ್ರಚಾರ ಸಭೆ

ಮೂಡುಬಿದ್ರೆ: ಮೂಲ್ಕಿ- ಮೂಡುಬಿದ್ರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಪರ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಹಿಮಾಂತ ಬಿಸ್ವಾ ಶರ್ಮಾರವರು ಉಪಸ್ಥಿತಿಯಲ್ಲಿ ಶಿರ್ತಾಡಿಯಲ್ಲಿ ಬೃಹತ್ ಪ್ರಚಾರ ಸಭೆ ನಡೆಯಿತು.ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ, ಜಿಲ್ಲಾ ಅಧ್ಯಕ್ಷರಾದ ಶ್ರೀ ಸುದರ್ಶನ್ ಮೂಡುಬಿದಿರೆ, ಮಂಡಲಾಧ್ಯಕ್ಷರಾದ ಶ್ರೀ ಸುನಿಲ್ ಆಳ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಈಶ್ವರ್ ಕಟೀಲ್, ಮೂಡ ಅಧ್ಯಕ್ಷರಾದ ಶ್ರೀ ಮೇಘನಾಥ್ ಶೆಟ್ಟಿ, ಕೆ. ಎಂ. ಎಫ್ […]

ಪುತ್ತೂರು: ನಾಳೆ ನಟಿ ರಮ್ಯ- ನಿಕೇತ್ ರಾಜ್ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಮತಯಾಚನೆ

ಪುತ್ತೂರು: ಖ್ಯಾತ ಚಲನಚಿತ್ರ ನಟಿ ರಮ್ಯ ಮತ್ತು ನಿಕೇತ್ ರಾಜ್ ಮೌರ್ಯ ಅವರು ನಾಳೆ ನಡೆಯುವ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರ ರೋಡ್ ಶೋ ದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ಬೋಳುವಾರು ವೃತ್ತದಿಂದ ಆರಂಭಗೊಂಡು ದರ್ಬೆ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಯಲಿದೆ. ಖ್ಯಾತ ಚಲನಚಿತ್ರ ನಟಿ, ರಮ್ಯಾ ಮತ್ತು ಖ್ಯಾತ ವಾಗಿ ನಿಕೇತ್ ರಾಜ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಅಶೋಕ್ ಕುಮಾರ್ ರೈ ಪರ ಮತ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಕಾರ್ಕಳದಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಬರೆಯಲು ನನ್ನ ಜೊತೆಯಾಗಿ: ಮುನಿಯಾಲು ಉದಯ ಶೆಟ್ಟಿ

ಕಾರ್ಕಳ: ಕಾರ್ಕಳಕ್ಕೆ ಬೇಕಿರುವುದು ಆಡಂಭರ ತೋರಿಕೆಯಲ್ಲ.ಸಹಜ ಸುಂದರ ಅಭಿವೃದ್ಧಿ, ಈ ಊರಿನ‌ ಸೊಗಡನ್ನು ಹಾಳು ಮಾಡದಂತಹ,ಇಲ್ಲಿನ ಜನರ ಬದುಕಿಗೆ ಭರವಸೆ ಕೊಡುವ ಕೆಲಸಗಳು ಕಾರ್ಕಳಕ್ಕೆ ಬೇಕು.ಅಂತಹ ಅಭಿವೃದ್ಧಿಯ ಪರಿಕಲ್ಪನೆಗಳು ನನ್ನಲ್ಲಿವೆ.ಆ ಪರಿಕಲ್ಪನೆಯ ಸಾಕಾರಕ್ಕಾಗಿ ಈ ಸಲ‌ ಕಾರ್ಕಳದಲ್ಲಿ ನನ್ನನ್ನು ಬೆಂಬಲಿಸಿ‌,ನನ್ನ ಕನಸುಗಳಿಗೆ ಜೊತೆಯಾಗಿ ಎಂದು ಕಾರ್ಕಳದ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲು ತಿಳಿಸಿದ್ದಾರೆ. ಕಾರ್ಕಳವನ್ನು ಶಿಕ್ಷಣ ಕಾಶಿ ಮಾಡುವೆ: ಕಾರ್ಕಳ ವಿಧಾನಾಸಭಾ ಕ್ಷೇತ್ರದಲ್ಲಿ ಸರಕಾರಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣ, ಸರಕಾರಿ ಮೆಡಿಕಲ್ ಕಾಲೇಜು, ಪ್ಯಾರಾಮೆಡಿಕಲ್, ನರ್ಸಿಂಗ್ […]

ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ ರಾಜ್ ಕಾಂಚನ್ ನೇತೃತ್ವದಲ್ಲಿ ಕೊಕ್ಕರ್ಣೆಯಲ್ಲಿ ಬೃಹತ್ ಪಾದಯಾತ್ರೆ

ಉಡುಪಿ: ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೊಕ್ಕರ್ಣೆಯಲ್ಲಿ ಶನಿವಾರ ಬ್ರಹತ್ ಪಾದಯಾತ್ರೆ ನಡೆಯಿತು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ರಾಜ್ಯ ಸಂವಹನ ವಿಭಾಗದ ಮುಖ್ಯಸ್ಥ ಅಮೃತ್ ಶೆಣೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ ಗಫೂರ್, ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೋ, ಉಡುಪಿ ಜಿಲ್ಲಾ […]

ಹೆಬ್ರಿ ಪರಿಸರದಲ್ಲಿ ಸುನಿಲ್ ಪರ ಮತಯಾಚನೆ

ಕಾರ್ಕಳ: ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಕಳೆದ ಚುನಾವಣೆಯಲ್ಲಿ ಹತಾಶರಾಗಿ ಸಜ್ಜನ ಗೋಪಾಲ ಭಂಡಾರಿಯವರ ಶವಯಾತ್ರೆ ನಡೆಸಿ ಭಂಡಾರಿ ಹಾಗೂ ಅವರ ಕುಟುಂಬಸ್ಥರು ಕಣ್ಣೀರು ಹಾಕುವಂತೆ ಮಾಡಿದರು. ಅವರ ಸಾವಿಗೂ ಕಾರಣರಾದರು. ಈಗ ವಿ ಸುನಿಲ್‌ಕುಮಾರ್ ಅವರ ತೇಜೋವಧೆಗೆ ಮುಂದಾಗಿದ್ದಾರೆ. ಕಣ್ಣಿರು ಹಾಕಿಸುವುದು, ತೇಜೋವಧೆ ನಡೆಸುವುದೇ ಕಾಂಗ್ರೆಸ್ ಅಭ್ಯರ್ಥಿಯ ಸಂಸ್ಕೃತಿಯಾಗಿದೆ. ಅವರಂದು ನಡೆದುಕೊಂಡ ಅಮಾನವೀಯ ವರ್ತನೆಯನ್ನು ಹೆಬ್ರಿ, ಕಾರ್ಕಳದ, ಜನ ಮರೆತಿಲ್ಲ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ ಹೇಳಿದರು. ಹೆಬ್ರಿ ಪರಿಸರದಲ್ಲಿ ಬಿಜೆಪಿ ಅಭ್ಯರ್ಥಿ […]