ಬಜಗೋಳಿ: ಸತ್ಯನಾರಾಯಣ ಪೂಜೆಯಲ್ಲಿ ಮತದಾನ ಜಾಗೃತಿ

ಬಜಗೋಳಿ: ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣಾ ಪ್ರಯುಕ್ತ ಬಜಗೋಳಿಯಲ್ಲಿ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ವಿಶೇಷ ರೀತಿಯಲ್ಲಿ ಮತದಾನ ಜಾಗೃತಿ ನಡೆಯಿತು. ಶ್ರಿಮತಿ ಶ್ರೀ ಜನಾರ್ದನ ಶೆಣೈ ಇವರ ಪುತ್ರ ಪ್ರತೀಶ್ ಹಾಗೂ ಶ್ರೀಮತಿ ಶ್ರೀ ದೇವಕಿ ಮತ್ತು ದಿ.ರಾಮನಾರಾಯಣ ಇವರ ಪುತ್ರಿ ರಕ್ಷಿತಾ ಇವರ ವಿವಾಹದ ಪ್ರಯುಕ್ತ ಬಜಗೋಳಿಯ “ಏಕದಂತ” ಸ್ವಗ್ರಹದಲ್ಲಿ ಮೇ9 ರಂದು ಸತ್ಯನಾರಾಯಣ ಪೂಜೆಯಲ್ಲಿ ಕಾರ್ಯಕ್ರಮದಲ್ಲಿ ಫೊಟೋ ಕಾರ್ನರ್ ನಲ್ಲಿ ಪೋಟೋ ಕ್ಲಿಕಿಸುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ […]

ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ವಸಂತ ವೇದ ಶಿಬಿರ 2023..!!

ಉಡುಪಿ:ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ, ಪಡುಕುತ್ಯಾರು ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ವಸಂತ ವೇದ ಶಿಬಿರ 2023 ದಿನಾಂಕ: 2023 ಮೇ 6 ರಿಂದ 14ರ ತನಕ ಸ್ಥಳ: ಶ್ರೀ ಸರಸ್ವತೀ ಸತ್ಸಂಗ ಮುಂದಿರ ಪಡುಕುತ್ಯಾರು ಶಿಬಿರ ಉದ್ಘಾಟನೆ: ಮೇ 7 ರಂದು ಭಾನುವಾರ ಬೆಳಿಗ್ಗೆ 9.30ಕ್ಕೆ ಶಿಬಿರ ಸಮಾರೋಪ: ಮೇ 14 ರ ಜಗದ್ಗುರುಗಳ ಪಟ್ಟಾಭಿಷೇಕ ವರ್ಧಂತಿ ವಸಂತ ವೇದ ಶಿಬಿರದ […]

ವಿಧಾನಸಭೆ ಚುನಾವಣೆ ಮತದಾನ- ಮಸ್ಟರಿಂಗ್ ಪ್ರಕ್ರಿಯೆ ಪ್ರಾರಂಭ

ಉಡುಪಿ : ನಾಳೆ ಕರ್ನಾಟಕ ರಾಜ್ಯ ವಿದಾನಸಭಾ ಚುನಾವಣೆ ಹಿನ್ನಲೆ ಇಂದು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಿಗೆ ಮಸ್ಟರಿಂಗ್ ಪ್ರಕ್ರಿಯೆ ಪ್ರಾರಂಭವಾಗಿದೆ. ಉಡುಪಿಯ ಸೈಂಟ್ ಸಿಸಿಲಿಸ್ ಎಜುಕೇಶನ್ ಟ್ರಸ್ಟ್, ಕುಂದಾಪುರದ ಭಂಡಾರ್ಕಾಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜು, ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು, ಕಾಪು ದಂಡತೀರ್ಥ ಪಿಯು ಕಾಲೇಜು, ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಪ್ರಕ್ರಿಯೆ ನಡೆಯುತ್ತಿದೆ. ಮಸ್ಟರಿಂಗ್ ಕೇಂದ್ರದಿಂದ ಚುನಾವಣಾ ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್, ವಿವಿ […]

ಜೆ.ಪಿ.ನಡ್ಡಾ ರಾಜೀನಾಮೆಗೆ MLC ಮಂಜುನಾಥ ಭಂಡಾರಿ ಆಗ್ರಹ..!!

ಉಡುಪಿ: ಕೇಂದ್ರ ಸರಕಾರದ ಅನುದಾನವನ್ನು ಕಡಿತಗೊಳಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಹೇಳಿಕೆ ಸಂವಿಧಾನ ವಿರೋಧಿಯಾಗಿದ್ದು, ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಆಗ್ರಹಿಸಿದರು. ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹೇಳಿಕೆ ರಾಜ್ಯಗಳಿಗೆ ಬೆದರಿಕೆ ಒಡ್ಡುವ ರೀತಿಯಲ್ಲಿದೆ. ಹಾಗೆಯೇ ಈ ಹೇಳಿಕೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಕರ್ನಾಟಕದ ಜನತೆ ಬಿಜೆಪಿಗೆ ತಕ್ಕ […]