ಮರು ಮೌಲ್ಯಮಾಪನ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ನಾಲ್ಕನೇ ರ‍್ಯಾಂಕ್

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ಹೊರಡಿಸಿದ ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಶರಣ್ಯ ಎಸ್. ಹೆಗ್ಡೆ ಇಂಗ್ಲೀಷ್‌ನಲ್ಲಿ 2, ಕನ್ನಡದಲ್ಲಿ1 ಹೆಚ್ಚುವರಿ ಅಂಕ ಪಡೆದು ಒಟ್ಟು 594 ಅಂಕದೊಂದಿಗೆ ರಾಜ್ಯಕ್ಕೆ ನಾಲ್ಕನೇ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ. ಆಕಾಶ್ ಪೈ ಇಂಗ್ಲೀಷ್‌ನಲ್ಲಿ 3, ವ್ಯವಹಾರ ಅಧ್ಯಯನದಲ್ಲಿ 2 ಅಂಕಗಳನ್ನು ಹೆಚ್ಚುವರಿ ಪಡೆದು ಒಟ್ಟು 593 ಅಂಕಗಳನ್ನು ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರೋಹಿತ್ ಹೆಗ್ಡೆ […]

ತುಳು ಲಾಂಛನದ ಶಾಲು ಧರಿಸಿ ತುಳುನಾಡಿನ ಹೆಸರಲ್ಲಿ ಶಾಸಕ ವೇದವ್ಯಾಸ್ ಕಾಮತ್ ಪ್ರಮಾಣವಚನ ಸ್ವೀಕಾರ

ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಮಾಣವಚನ ಸ್ವೀಕರಿಸಿದ್ದು, ತುಳುನಾಡು, ಭಾರತಮಾತೆ ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತುಳುನಾಡಿನ ಲಾಂಛನವಿರುವ ಶಾಲು ಧರಿಸಿ ಗಮನಸೆಳೆದಿದ್ದಾರೆ.

ಶ್ರೀ ಕೃಷ್ಣ , ಗೋಮಾತೆ ಹಾಗೂ ವಿಬುಧೇಶ ತೀರ್ಥ ಸ್ವಾಮೀಜಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಶಾಸಕನಾಗಿ ಚುನಾಯಿತರಾಗಿರುವ ಯಶ್ ಪಾಲ್ ಸುವರ್ಣ ಅವರು ಉಡುಪಿಯ ಶ್ರೀಕೃಷ್ಣ ಪರಮಾತ್ಮ, ಗೋಮಾತೆ ಮತ್ತು ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಗಳ ಸಂಸ್ಥಾಪಕ ವಿಬುಧೇಶ ತೀರ್ಥ ಸ್ವಾಮಿಜಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. https://twitter.com/i/status/1660910788960456704 “ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿ ನನ್ನ ಆರಾಧ್ಯ ದೈವ ಪೊಡವಿಗೊಡೆಯ ಉಡುಪಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರು, ಗೋ ಮಾತೆ ಹಾಗೂ ನಾನು ಕಲಿತ ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ, ಅದಮಾರು ಮಠದ ಕೃಷ್ಣೈಕ್ಯ ಶ್ರೀ ಶ್ರೀ […]

ವಿಶ್ವ ನಂ1 ಪಟ್ಟಕ್ಕೇರಿದ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ

ನವದೆಹಲಿ: ಭಾರತದ ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಸೋಮವಾರ ಇತ್ತೀಚಿನ ಪುರುಷರ ಜಾವೆಲಿನ್ ಎಸೆತದ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದ್ದಾರೆ ಮತ್ತು ವಿಶ್ವ ಅಥ್ಲೆಟಿಕ್ಸ್ ಬಿಡುಗಡೆ ಮಾಡಿದ ಶ್ರೇಯಾಂಕದಲ್ಲಿ ಹೊಸ ವಿಶ್ವ ನಂ.1 ಆಗಿ ಹೊರಹೊಮ್ಮಿದ್ದಾರೆ. ಚೋಪ್ರಾ 1455 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಆಗಸ್ಟ್ 30, 2022 ರಿಂದ ಚೋಪ್ರಾ ನಂ.2 ಸ್ಥಾನದಲ್ಲಿದ್ದರು, ಆದರೆ ಈ ವಾರ ಹಾಲಿ ವಿಶ್ವ ಚಾಂಪಿಯನ್ ಪೀಟರ್ಸ್ ಅವರನ್ನು ಹಿಂದಿಕ್ಕಿ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ.

ಸುಳ್ಯ: ಬೈಕ್- ಕಾರು ನಡುವೆ ಅಪಘಾತ; ಆಯುರ್ವೇದ ವಿದ್ಯಾರ್ಥಿ ಸಾವು

ಸುಳ್ಯ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಸುಳ್ಯದ ಪಾಲಡ್ಕ ಎಂಬಲ್ಲಿ ವರದಿಯಾಗಿದೆ. ಮೃತ ಬೈಕ್ ಸವಾರನನ್ನು ಸುಳ್ಯ ಕೆವಿಜೆ ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಚಿಕ್ಕಬಳ್ಳಾಪುರ ನಿವಾಸಿ ಸ್ವರೂಪ್ (22) ಎಂದು ಗುರುತಿಸಲಾಗಿದೆ. ಸ್ವರೂಪ್ ತನ್ನ ಸ್ನೇಹಿತ ಸಂಭ್ರಮ್ ಜೊತೆ ದ್ವಿಚಕ್ರವಾಹದಲ್ಲಿ ತೆರಳುತ್ತಿದ್ದ ವೇಳೆ ವಾಹನವೊಂದನ್ನು ಓವರ್ ಟೇಕ್ ಮಾಡುವ ಸಂದರ್ಭ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ […]