ಮಗಳಿಂದ ಸ್ಪೆಷಲ್​ ಫೋಟೋ ಶೇರ್​ : 50 ವರ್ಷ ದಾಂಪತ್ಯ ಪೂರೈಸಿದ ಅಮಿತಾಭ್​ ಬಚ್ಚನ್​- ಜಯಾ

ಬಾಲಿವುಡ್​ ಹಿರಿಯ ನಟ ಅಮಿತಾಭ್​ ಬಚ್ಚನ್​ ಮತ್ತು ಜಯಾ ಬಚ್ಚನ್​ ದಂಪತಿ ತಮ್ಮ ದಾಂಪತ್ಯ ಜೀವನದಲ್ಲಿ 50 ವರ್ಷಗಳನ್ನು ಪೂರೈಸಿದ್ದಾರೆ. ನಟ ಅಮಿತಾಭ್​ ಬಚ್ಚನ್​ ಮತ್ತು ಜಯಾ ಬಚ್ಚನ್​ ದಂಪತಿ 50ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಬಿಗ್​ ಬಿ ಮಗಳು ಶ್ವೇತಾ ಬಚ್ಚನ್​ ಸೋಶಿಯಲ್​ ಮೀಡಿಯಾದಲ್ಲಿ ತಂದೆ- ತಾಯಿಯ ಹಳೆಯ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಅವರಿಬ್ಬರ ಬಗ್ಗೆ ಸುಂದರ ಟಿಪ್ಪಣಿಯನ್ನು ಬರೆದಿದ್ದಾರೆ. ಈ ಚಿತ್ರಕ್ಕೆ ಅಭಿಮಾನಿಗಳು ಲೈಕ್ಸ್​ಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಇನ್​ಸ್ಟಾದಲ್ಲಿ ಬ್ಲ್ಯಾಕ್​ […]

ಏರ್ ಮಾರ್ಷಲ್ ಕಡೆಯಿಂದ ತರಬೇತಿಯಲ್ಲಿ ಕ್ಷಮತೆ ತೋರಿದ ವೀರರಿಗೆ ಸಿಕ್ಕಿತು ಬಹುಮಾನ

ಬೆಳಗಾವಿ: ವೀರರಿಗೆ ಏರ್ ಮಾರ್ಷಲ್ ಕಡೆಯಿಂದ ಬಹುಮಾನ ವಿತರಣೆ ,ಬೆಳಗಾವಿ ಏರ್​ಮನ್ ತರಬೇತಿ ಪೂರ್ಣಗೊಂಡ ಅಗ್ನಿವೀರರನ್ನು ಅದ್ಧೂರಿ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು. ಅಗ್ನಿಪಥ್ ಯೋಜನೆಯಡಿ ದೇಶದಲ್ಲೇ ತರಬೇತಿ ಪೂರ್ಣಗೊಳಿಸಿದ ಮೊದಲ ಅಗ್ನವೀರರು ಎಂಬ ಖ್ಯಾತಿಗೆ ಈ ಶಿಬಿರಾರ್ಥಿಗಳು ಪಾತ್ರರಾಗಿದ್ದಾರೆ. ಸಾಂಬ್ರಾದಲ್ಲಿನ ಏರ್​ಮನ್ ತರಬೇತಿ ಶಾಲೆಯಲ್ಲಿ 22 ವಾರಗಳ‌ ಕಾಲ ತರಬೇತಿ ಪಡೆದ 2675 ಅಗ್ನಿವೀರರ ಬೀಳ್ಕೊಡುಗೆ ಕಾರ್ಯಕ್ರಮ ಶನಿವಾರ ಅದ್ಧೂರಿಯಾಗಿ ನೆರವೇರಿತು. ತರಬೇತಿ ಅವಧಿಯಲ್ಲಿ ತಾವು ಪಡೆದ ವಿವಿಧ ಕೌಶಲ್ಯಗಳನ್ನು ಅಗ್ನಿವೀರರು ಪ್ರದರ್ಶಿಸಿ, ತಮ್ಮ ಸಾಮರ್ಥ್ಯ ಸಾಬೀತು ಮಾಡಿದರು. […]

ಸುರತ್ಕಲ್​ನ ಎನ್​ಐಟಿಕೆಯಲ್ಲಿ 107 ಬೋಧಕ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರಿನ ಸುರತ್ಕಲ್​ನ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ (ಎನ್​ಐಟಿಕೆ)ನಲ್ಲಿ ಖಾಲಿ ಇರುವ ವಿವಿಧ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೋಧಕ ವೃತ್ತಿಯಲ್ಲಿ ಆಸಕ್ತಿ ಹೊಂದಿರುವ ಪದವೀಧರ ಅಭ್ಯರ್ಥಿಗಳು ಇದು ಉತ್ತಮ ಅವಕಾಶ ಆಗಿದೆ. ಒಟ್ಟು 107 ಹುದ್ದೆಗಳ ಭರ್ತಿಗೆ ನೇಮಕಾತಿಗೆ ಮುಂದಾಗಲಾಗಿದೆ. ಈ ಹುದ್ದೆ ಕುರಿತ ವಿವರ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿಗಳು ಕೆಳಗಿನಂತಿದೆ. ಹುದ್ದೆ ವಿವರ: ಅಸಿಸ್ಟಂಟ್​ ಪ್ರಫೆಸರ್​​, ಪ್ರೊಫೆಸರ್​ ಹುದ್ದೆಗಳಿಗೆ ನೇಮಕಾತಿಗೆ ಕ್ರಮಕ್ಕೆ ಮುಂದಾಗಲಾಗಿದೆ. ಸಿಎಸ್​ಇ, ಐಟಿ, ಎಂಎಸಿಎಸ್​ ಮತ್ತು ಎಂಇ ಸೇರಿದಂತೆ […]

ಬೊರಿವಲಿ ಪಶ್ಚಿಮ: ಶ್ರೀ ಕ್ಷೇತ್ರ ಜಯರಾಜನಗರದ ಶ್ರೀಮಹಿಷಮರ್ಧಿನಿ ದೇವಸ್ಥಾನದ ವಾರ್ಷಿಕ ಪೂಜಾ ಮಹೋತ್ಸವ

ಬೊರಿವಲಿ: ಉತ್ತರ ಮುಂಬಯಿ ಬೊರಿವಲಿ ಪಶ್ಚಿಮ ಪರಿಸರದ ಶ್ರೀ ಕ್ಷೇತ್ರ ಜಯರಾಜನಗರದ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ಜರುಗುತ್ತಿರುವ ವಾರ್ಷಿಕ ಪೂಜಾ ಮಹೋತ್ಸವದ ಅಂಗವಾಗಿ ಜೂ. 1ರಂದು ಬೆಳಿಗ್ಗೆ ಶ್ರೀದೇವಿಯ ಸನ್ನಿಧಾನದಲ್ಲಿ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಯವರ ನೇತೃತ್ವದಲ್ಲಿ ಅಷ್ಟ ಬಂಧ ಬ್ರಹ್ಮಕಲಶ ಹಾಗೂ ಧಾರ್ಮಿಕ ಕಾರ್ಯಕ್ರಮವು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅದ್ದೂರಿಯಿಂದ ಜರುಗಿತು. ಪೂಜಾ ವಿಧಿ ನೆರವೇರಿಸಿ ಕಲಶವುಗಳನ್ನು ಮೆರವಣಿಗೆ ಬಿರುದಾವಳಿಗಳ ಮೂಲಕ ಶ್ರೀ ಮಹಿಷಮರ್ಧಿನಿ ಆದಿ ಗಣಪತಿ ಮತ್ತು ಆಂಜನೇಯ ದೇವರಿಗೆ ಅಭಿಷೇಕ ಸಮರ್ಪಿಸಲಾಯಿತು. ಬಳಿಕ […]

ವಿಧಾನಸಭೆಯಲ್ಲಿ ಸಹಕಾರಿ ಕ್ಷೇತ್ರದ ಧ್ವನಿಯಾಗುವೆ: ಯಶ್ ಪಾಲ್ ಸುವರ್ಣ

ಉಡುಪಿ: ಸ್ವತಃ ಸಹಕಾರಿ ರಂಗದಲ್ಲಿ ಸಾಕಷ್ಟು ಅನುಭವ ಹೊಂದಿರುವ ತಾನು, ವಿಧಾನಸಭೆಯಲ್ಲಿ ಸಹಕಾರಿ ಕ್ಷೇತ್ರದ ಧ್ವನಿಯಾಗುವೆ ಎಂದು ಶಾಸಕ ಯಶಪಾಲ್ ಸುವರ್ಣ ಭರವಸೆ ನೀಡಿದರು. ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಡಯಾನ ಹೋಟೆಲ್ ಹಾಲ್ ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ವಿಧಾನ ಪರಿಷತ್ ಸದಸ್ಯತ್ವಕ್ಕೆ ಸಹಕಾರಿಗಳನ್ನು ಪರಿಗಣಿಸಬೇಕು ಎಂದು ಹಿಂದಿನಿಂದಲೂ ಪ್ರತಿಪಾದಿಸಿದ್ದ ನನಗೆ ಶಾಸಕನಾಗುವ ಅವಕಾಶ ಲಭಿಸಿದೆ. ಉಡುಪಿಯಲ್ಲಿ ಸಹಕಾರ ಸೌಧ ನಿರ್ಮಾಣ ಹಾಗೂ ಸಹಕಾರಿ ತರಬೇತಿ ಕೇಂದ್ರ ಸ್ಥಾಪನೆ ಬಗ್ಗೆ […]