ರೈತರ ಪಾಲಿಗೆ ಹುಳಿಯಾದ ಒಣದಾಕ್ಷಿ: ತೀವ್ರ ಬೆಲೆ ಕುಸಿತದಿಂದಾಗಿ ಬೆಳೆಗಾರರು ಕಂಗಾಲು; ಸರ್ಕಾರಕ್ಕೆ ಮೊರೆ

ವಿಜಯಪುರ: ದ್ರಾಕ್ಷಿಯ ಬೆಳೆಗೆ ಹೆಸರುವಾಸಿಯಾದ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಒಣ ದ್ರಾಕ್ಷಿಯ ಬೆಲೆ ತೀವ್ರ ಕುಸಿತದಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಕಳೆದ ವರ್ಷ ಒಣ ದ್ರಾಕ್ಷಿ ಕೆ.ಜಿಗೆ 150ರಿಂದ 250 ರೂ.ಗೆ ಮಾರಾಟವಾಗಿತ್ತು. ಈ ವರ್ಷ ಬೆಲೆ ತೀವ್ರ ಕುಸಿತ ಕಂಡಿದ್ದು, ದ್ರಾಕ್ಷಿ ಕೆ.ಜಿ.ಗೆ ಕೇವಲ 60ರಿಂದ 110 ರೂ.ಗೆ ಮಾರಾಟವಾಗುತ್ತಿದೆ ಎಂದು ಅಧಿಕಾರಿಗಳು ಮತ್ತು ಬೆಳೆಗಾರರ ​​ಸಂಘದವರು ತಿಳಿಸಿದ್ದಾರೆ. ಇದರಿಂದ ಉತ್ಪಾದನಾ ವೆಚ್ಚವೂ ಸಿಗದೆ ದ್ರಾಕ್ಷಿ ಬೆಳೆಗಾರರು ಕಂಗಾಲಾಗಿದ್ದಾರೆ. ತೋಟಗಾರಿಕೆ ಇಲಾಖೆ ಮೂಲಗಳ ಪ್ರಕಾರ ರಾಜ್ಯದಲ್ಲಿ […]

ಅನ್ನಭಾಗ್ಯ ಅಕ್ಕಿ ರಾಜಕೀಯ; ಕೇಂದ್ರವನ್ನು ಒತ್ತಾಯಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಗೈದ ಮಹೇಶ್ ಠಾಕೂರ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದು ಬೊಗಳೆ ಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಮುಖಂಡರು ತಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ವಿಫಲಗೊಂಡು, ಇದೀಗ ಅಕ್ಕಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಒತ್ತಾಯಿಸಲು ನಾಚಿಕೆಯಾಗುವುದಿಲ್ಲವೆ? ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಮುಖಂಡರು ಉಚಿತ 10 ಕೆ.ಜಿ. […]

ಕೇಂದ್ರ ಸರಕಾರದ 5 ಕೆ.ಜಿ ಜೊತೆಗೆ ಗ್ಯಾರಂಟಿಯ 10 ಕೆ.ಜಿ. ಅಕ್ಕಿ ವಿತರಿಸಿ ಕಾಂಗ್ರೆಸ್ ಪೌರುಷ ತೋರಿಸಲಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಚುನಾವಣೆಯ ಸಂದರ್ಭದಲ್ಲಿ ಪೂರ್ವಾಪರ ಆಲೋಚಿಸದೆ ಬೇಕಾಬಿಟ್ಟಿಯಾಗಿ 5 ಉಚಿತ ಗ್ಯಾರಂಟಿಗಳನ್ನು ಘೋಷಿಸಿ, ತಮ್ಮ ವಾಗ್ದಾನದಂತೆ 24 ಗಂಟೆಗಳಲ್ಲಿ ಜಾರಿಗೊಳಿಸದೆ ರಾಜ್ಯದ ಜನತೆಯನ್ನು ಯಾಮಾರಿಸಿರುವ ಕಾಂಗ್ರೆಸ್ ಇದೀಗ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನದ ಬದಲು ಕೇಂದ್ರ ಸರಕಾರ ರಾಜ್ಯಕ್ಕೆ ನೀಡುತ್ತಿರುವ ಉಚಿತ 5 ಕೆ.ಜಿ. ಅಕ್ಕಿಯನ್ನು ಹೊರತುಪಡಿಸಿ, ತಮ್ಮ ಗ್ಯಾರಂಟಿಯ 10 ಕೆ.ಜಿ. ಅಕ್ಕಿಯನ್ನು ಖರೀದಿಸಿ ಪ್ರತ್ಯೇಕವಾಗಿ ವಿತರಿಸಿ ಪೌರುಷ ತೋರಿಸಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ರಾಷ್ಟ್ರೀಯ […]

ಮಂಗಳೂರು: ಅನ್ನಭಾಗ್ಯಕ್ಕೆ ಅಕ್ಕಿ ನಿರಾಕರಣೆ ಆರೋಪಿಸಿ ಮಂಗಳೂರಿನಲ್ಲಿ ಅನ್ನದ ತಟ್ಟೆ ಹಿಡಿದು ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಮಂಗಳವಾರ ಮಂಗಳೂರಿನ ಮಿನಿ ವಿಧಾನಸೌಧದ ಎದುರು ‘10 ಕೆಜಿ ಉಚಿತ ಅಕ್ಕಿ’ ಅನ್ನಭಾಗ್ಯ ಯೋಜನೆಗಾಗಿ ಕರ್ನಾಟಕಕ್ಕೆ ಅಕ್ಕಿ ನಿರಾಕರಿಸುತ್ತಿರುವ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಅಕ್ಕಿ ತಟ್ಟೆ ಹಿಡಿದು ಪ್ರತಿಭಟನೆ ನಡೆಸಿದರು. ಭಾರತೀಯ ಆಹಾರ ನಿಗಮವು (ಎಫ್‌ಸಿಐ) ಬಿಪಿಎಲ್ ಕಾರ್ಡ್‌ದಾರರಿಗೆ 10 ಕೆಜಿ ಉಚಿತ ಅಕ್ಕಿಯನ್ನು ಪೂರೈಸುವ ತನ್ನ ಪ್ರಮುಖ ಕಾರ್ಯಕ್ರಮಕ್ಕೆ ಹೆಚ್ಚುವರಿ ಅಕ್ಕಿಗಾಗಿ ರಾಜ್ಯದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಆದರೆ, ಬಳಿಕ ಕೇಂದ್ರದ ಒತ್ತಡಕ್ಕೆ ಮಣಿದು ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಪ್ರತಿಭಟನಾಕಾರರು […]

ಲಘು ನ್ಯುಮೋನಿಯಾ ಲಕ್ಷಣ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ರಾತ್ರಿ ಲಘು ನ್ಯುಮೋನಿಯಾ ಲಕ್ಷಣಗಳೊಂದಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಐಸಿಯುನಲ್ಲಿರುವ ಅವರು ವೈದ್ಯಕೀಯ ನಿಗಾದಲ್ಲಿದ್ದಾರೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ. ಅವರ ಉಸಿರಾಡಲು ಅನುಕೂಲವಾಗುವಂತೆ ಆಮ್ಲಜನಕ ನೀಡಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ. ಆಕೆ ಆ್ಯಂಟಿಬಯೋಟಿಕ್ಸ್ ಸೇವಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ. ಮಣಿಪಾಲ ಆಸ್ಪತ್ರೆ ಹಳೆ ವಿಮಾನ ನಿಲ್ದಾಣ ರಸ್ತೆಯ ಪಲ್ಮನಾಲಜಿ ಸಮಾಲೋಚಕ ಡಾ.ಗುರುಪ್ರಸಾದ್ ಭಟ್ ಚಿಕಿತ್ಸೆ ನೀಡುತ್ತಿದ್ದಾರೆ […]