ಕಾರ್ಯಕರ್ತರ ಆಶೋತ್ತರಗಳಿಗೆ ಸ್ಪಂದಿಸುವುದು ಪಕ್ಷ ಮುಖಂಡರ ಕರ್ತವ್ಯ: ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಪಕ್ಷದ ಕಚೇರಿ ದೇವಸ್ಥಾನಕ್ಕೆ ಸಮಾನ, ಇಲ್ಲಿಗೆ ಬರುವ ಪ್ರತಿಯೊಬ್ಬ ಕಾರ್ಯಕರ್ತನ ಆಶೋತ್ತರಗಳಿಗೂ ಸ್ಪಂದಿಸುವುದು ಜನಪ್ರತಿನಿಧಿಗಳು, ಪಕ್ಷದ ಮುಖಂಡರ ಕರ್ತವ್ಯವಾಗಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಸೋಮವಾರ ಪಟ್ಟಣದ ಮಂಜುಶ್ರೀ ಎನ್‌ಕ್ಲೇವ್‌ಗೆ ಸ್ಥಳಾಂತರಗೊಂಡ ಬಿಜೆಪಿಯ ನೂತನ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪಕ್ಷಕ್ಕೆ ಅದೃಷ್ಟ ತಂದುಕೊಟ್ಟಿರುವ ಚುನಾವಣಾ ಕಚೇರಿಯನ್ನೇ ಪಕ್ಷದ ಅಧಿಕೃತ ಕಚೇರಿಯನ್ನಾಗಿ ಪರಿವರ್ತಿಸಲಾಗಿದೆ. ವಾರಕ್ಕೊಮ್ಮೆ ಇಲ್ಲಿನ ಕಚೇರಿಯಲ್ಲಿದ್ದು ಕಾರ್ಯಕರ್ತರ ಅಹವಾಲು ಸ್ವೀಕಾರ ಮಾಡುವುದಾಗಿ ಭರವಸೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]