ಜನ್ಮದಿನದ ಸಂಭ್ರಮದಲ್ಲಿ ಕೋಮಲ್: – ಯಲಾಕುನ್ನಿ ಫಸ್ಟ್ ಲುಕ್ ಅನಾವರಣ.

ಹಾಸ್ಯ ನಟನಾಗಿ, ಬಳಿಕ ನಾಯಕ ಪಟ್ಟಕ್ಕೇರಿ, ಕನ್ನಡ ಚಲನಚಿತ್ರಗಳನ್ನು ನಿರ್ಮಾಣ ಮಾಡುವುದಲ್ಲದೇ ವಿತರಕ, ಪ್ರದರ್ಶಕ ಆಗಿ ಗುರುತಿಸಿಕೊಂಡಿರುವ ನಟ ಕೋಮಲ್. ಕನ್ನಡ ಸಿನಿಮಾ ರಂಗದಲ್ಲಿ ಎರಡು ದಶಕಗಳಿಗಿಂತ ಹೆಚ್ಚು ಕಾಲದಿಂದ ಕಾಮಿಡಿ ಮಾಡುತ್ತ ಹೀರೋ ಆದ ನಟರ ಪೈಕಿ ಕೋಮಲ್ ಕುಮಾರ್ ಕೂಡ ಓರ್ವರು. ಕೋಮಲ್ ಕುಮಾರ್ ಅಭಿನಯದ ಯಲಾಕುನ್ನಿ ಸಿನಿಮಾದ ಫಸ್ಟ್ ಲುಕ್ ಅನಾವರಣಗೊಂಡಿದೆ ಕೋಮಲ್ ಕುಮಾರ್ ಜನ್ಮದಿನ: ಸಾಹಸಸಿಂಹ ಡಾ. ವಿಷ್ಣುವರ್ಧನ್, ಹ್ಯಾಟ್ರಿಕ್​ ಹೀರೋ ಶಿವ ರಾಜ್​ಕುಮಾರ್, ಕನ್ನಡ ಚಿತ್ರರಂಗ ನಗಮೊಗದ ರಾಜಕುಮಾರ ದಿ. […]

ಶಾರುಖ್​ ಖಾನ್ ಗೆ ಶೂಟಿಂಗ್​ ವೇಳೆ ಗಾಯ ​, ಯಶಸ್ವಿ ಶಸ್ತ್ರಚಿಕಿತ್ಸೆ

ಲಾಸ್​ ಏಂಜಲೀಸ್​​ನಲ್ಲಿ ನಡೆದ ಸಣ್ಣ ಅವಘಡದಲ್ಲಿ ಶಾರುಖ್​ ಮೂಗಿಗೆ ಗಾಯವಾಗಿದೆ. ಹೀಗಾಗಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಬಾಲಿವುಡ್​ ನಟ​ ಶಾರುಖ್​ ಖಾನ್ ಅಮೆರಿಕದಲ್ಲಿ​ ಶೂಟಿಂಗ್​ ವೇಳೆ ಗಾಯಗೊಂಡಿದ್ದಾರೆ. ಭಾರತಕ್ಕೆ ಮರಳುವ ಮುನ್ನ ಲಾಸ್​ ಏಂಜಲೀಸ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ನಟ ಶಾರುಖ್​ ಖಾನ್​ ಅಮೆರಿಕದಲ್ಲಿ ಶೂಟಿಂಗ್​ ವೇಳೆ ಗಾಯಗೊಂಡಿದ್ದಾರೆ. ಬಹಿರಂಗಪಡಿಸದ ಪ್ರಾಜೆಕ್ಟ್‌ನ ಚಿತ್ರೀಕರಣದಲ್ಲಿದ್ದಾಗ ಘಟನೆ ಸಂಭವಿಸಿದೆ ಎಸ್​​ಆರ್​ಕೆ ಅಪಘಾತವನ್ನು ಹೇಗೆ ಎದುರಿಸಿದರು ಎಂಬ ಬಗ್ಗೆ ಹೆಚ್ಚು ವಿವರಗಳು […]

ಟೊಮೊಟೊ ಬೆಲೆ ಸೇಬಿಗಿಂತ ದುಬಾರಿ

ಹಿಮಾಚಲ ಪ್ರದೇಶದಲ್ಲಿ ಇಲ್ಲಿನ ಆರ್ಥಿಕತೆಯ ಜೀವಾಳ. ಇಲ್ಲಿ ಪ್ರತಿ ಕೆಜಿ ಸೇಬು 70 ರಿಂದ 80 ರೂಪಾಯಿ ಬಿಕರಿಯಾಗುತ್ತಿದೆ. ಆದರೆ, ಅದಕ್ಕಿಂತಲೂ ಹೆಚ್ಚು ದುಬಾರಿಯಾಗಿದೆ ಸೇಬಿನಂತೆ ಕೆಂಪಾಗಿರುವ ಟೊಮೆಟೊ. ಕೆಜಿ ಟೊಮೆಟೊ 90 ರಿಂದ 100 ರೂಪಾಯಿ ಬೆಲೆ ಇದೆ. ಹೀಗಾಗಿ ಹಿಮಪ್ರದೇಶದ ಟೊಮೆಟೊಗೆ ಬೇಡಿಕೆ ಹೆಚ್ಚಾಗಿದೆ. ಇದು ಇಲ್ಲಿನ ರೈತರಿಗೆ ಲಾಭವೂ ತಂದುಕೊಡುತ್ತಿದೆ. ಹಿಮಾಚಲ ಪ್ರದೇಶದ ಸೋಲನ್​ ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಸೇಬಿಗಿಂತ ದುಬಾರಿಯಾಗಿದೆ. ಪ್ರತಿ ಸೇಬು 70ರಿಂದ 80 ರೂಪಾಯಿಗೆ ಮಾರಾಟವಾದರೆ, ಟೊಮೆಟೊ 100ರ […]

ಜಿಲ್ಲೆಯಲ್ಲಿ ರೆಡ್ ಅಲರ್ಟ್;  ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಹೆಗಲಿಗೆ: ಜಿಲ್ಲಾಧಿಕಾರಿ ಕೂರ್ಮ ರಾವ್

ಉಡುಪಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಮತ್ತು ಮುಂಜಾಗರೂಕತಾ ಕ್ರಮವಾಗಿ ಸ್ಥಳೀಯವಾಗಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯು ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಸ್ಥಳೀಯ ಮಳೆಯ ಪ್ರಮಾಣ, ವಿಪತ್ತು ಪರಿಸ್ಥಿತಿಯನ್ನು ಆದರಿಸಿ ಅವಶ್ಯವಿರುವ ಕಡೆಗಳಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಅವಶ್ಯವೆನಿಸಿದ ಶಿಕ್ಷಣ ಸಂಸ್ಥೆಗಳಿಗೆ (ವಿಪತ್ತು […]

ಇನ್‌ಸ್ಟಾಗ್ರಾಮ್ ಖಾತೆ ತೆಗೆದ ತೆಗೆದ ನಟ​ ಪವನ್​ ಕಲ್ಯಾಣ್​ ಕೆಲವೇ ಗಂಟೆಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಪಾಲೋವರ್ಸ್​

ಸಿನಿಮಾ ಮತ್ತು ರಾಜಕೀಯ ಎರಡನ್ನೂ ಸಮಾನವಾಗಿ ಬ್ಯಾಲನ್ಸ್​ ಮಾಡುತ್ತಾ ಹಲವಾರು ಕೋಟಿ ಜನರ ಪ್ರೀತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಸಿನಿಮಾಗಳಲ್ಲಿ ತಮ್ಮದೇ ಸ್ಟೈಲ್​ನಲ್ಲಿ ನಟಿಸಿ ಇಂಪ್ರೆಸ್​ ಮಾಡಿದ್ದ ಈ ಸ್ಟಾರ್​ ಹೀರೋ, ಅದೇ ಬಲವನ್ನು ರಾಜಕೀಯದಲ್ಲೂ ತೋರಿಸಲು ಪ್ರಯತ್ನಿಸುತ್ತಿದ್ದಾರೆ.ಟಾಲಿವುಡ್​ ಪವರ್​ ಸ್ಟಾರ್​ ಪವನ್​ ಕಲ್ಯಾಣ್​ ತೆಲುಗಿನಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅವರು ಈವರೆಗೆ ಮಾಧ್ಯಮದಲ್ಲಿ ಮತ್ತು ಟ್ವಿಟರ್​ನಲ್ಲಿ ತಮ್ಮ ಅಭಿಪ್ರಾಯಗಳನ್ನು, ಸಿನಿಮಾ ವಿಚಾರಗಳನ್ನು ತಿಳಿಸುತ್ತಿದ್ದರು. ಇತ್ತೀಚೆಗೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್​ಸ್ಟಾಗ್ರಾಮ್​ಗೆ ಪ್ರವೇಶಿಸಿದ್ದಾರೆ. ಕೆಲವು ದಿನಗಳ ಹಿಂದೆ […]