ವಾರದ ಬಳಿಕ ಶರತ್ ಮೃತ ದೇಹ ಪತ್ತೆ

ಕುಂದಾಪುರ: ಕೊಲ್ಲೂರಿನ ಅರಶಿನಗುಂಡಿ ಜಲಪಾತ ವೀಕ್ಷಣೆಗೆಂದು ಹೋಗಿದ್ದ ಶರತ್ ಎಂಬ ವ್ಯಕ್ತಿ ಕಾಲು ಜಾರಿ ಬಿದ್ದು ನೀರು ಪಾಲಾಗಿದ್ದು ಆತನ ಮೃತ ದೇಹ ವಾರದ ಬಳಿಕ ಪತ್ತೆಯಾಗಿದೆ. ಜುಲೈ 23ರಂದು ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನಗುಂಡಿ ಜಲಪಾತ ನೋಡಲು ಭದ್ರಾವತಿ 23 ವರ್ಷದ ಶರತ್ ಕುಮಾರ್ ಸ್ನೇಹಿತನೊಂದಿಗೆ ಹೋಗಿದ್ದರು. ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದು ಅವರು ಜಾರಿ ನೀರಿಗೆ ಬಿದ್ದಿದ್ದರು. ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸಿದ್ದವು. ಆದರೆ […]

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್‌: ಕೇರಳ ಮೂಲದ ಯುವಕರಿಂದ ಕೃತ್ಯ

ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಗ್ಯಾಂಗ್ ರೇಪ್‌ ನಡೆಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರುವಾಯಿ ಗ್ರಾಮದ 16 ವರ್ಷ ಪ್ರಾಯದ ಬಾಲಕಿಗೆ ಕೇರಳ ಭಾಗದ ಕೆಲವು ಯುವಕರಿಂದ ಹಲವು ಸಮಯದಿಂದ ನಿರಂತರ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿದೆ. ಶನಿವಾರ ವಿಟ್ಲ ಠಾಣೆಗೆ ಆಗಮಿಸಿದ ಪರಿಶಿಷ್ಟಪಂಗಡದ ಬಾಲಕಿಯ ಪೋಷಕರು ಘಟನೆಯ ಬಗ್ಗೆ ಕೇರಳ ಮೂಲದ ಕೆಲವು ಯುವಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ ಎಂದು […]

ಕಾರ್ಕಳ: ಪುರಸಭಾ ಮಾಜಿ ಅಧ್ಯಕ್ಷ, ಶಿರ್ಡಿ ಸಾಯಿ ಕಾಲೇಜಿನ ಸಂಸ್ಥಾಪಕ ಚಂದ್ರಹಾಸ ಸುವರ್ಣ ನಿಧನ

ಕಾರ್ಕಳ: ಪುರಸಭಾ ಮಾಜಿ ಅಧ್ಯಕ್ಷ, ಶಿರ್ಡಿ ಸಾಯಿ ಕಾಲೇಜಿನ ಸಂಸ್ಥಾಪಕ ಚಂದ್ರಹಾಸ ಸುವರ್ಣ (68 ವ) ಅವರು ಇಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಚಂದ್ರಹಾಸ ಸುವರ್ಣ ಅವರು ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಚಂದ್ರಹಾಸ ಸುವರ್ಣರು ಲಯನ್ಸ್‌, ಜೇಸಿಐ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಶಿರ್ಡಿ ಸಾಯಿಬಾಬಾ ಮಂದಿರದ ಆಡಳಿತ ಮೊಕ್ತೇಸರರಾಗಿ, ಕಲಾ ರಂಗ ಸಂಸ್ಥಾಪಕರಾಗಿದ್ದರು. ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಪುರಸಭಾ ಸದಸ್ಯರಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು ಬಿಜೆಪಿ, ಕಾಂಗ್ರೆಸ್‌, […]

ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ನಗರದಲ್ಲಿ ಎಬಿವಿಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ

ಉಡುಪಿ: ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಎಬಿವಿಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯೊಬ್ಬಳಿಗೆ ಸಾಮಾಜಿಕ ಜಾಲತಾಣದ ಮೂಲಕ ಅಶ್ಲೀಲ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿಭಟನಾ ಸಭೆಯಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹೇಳಿಕೆಯನ್ನು ನೀಡಿದ್ದರು. ಇದೇ ಕಾರಣಕ್ಕಾಗಿ ಜು.28ರಂದು ಸಾಮಾಜಿಕ ಜಾಲತಾಣವಾದ ಇನ್ಟಾಗ್ರಾಮ್ ನಲ್ಲಿ ಜಿಗರ್ ಕೋಬ್ರಾ ಎಂಬ ಇನ್ಟಾಗ್ರಾಮ್ ಖಾತೆದಾರ ವಿದ್ಯಾರ್ಥಿನಿಯನ್ನು ಫಾಲೋ […]

ಬೈಲೂರು: ಆ 1ರಂದು ಉಚಿತ ನೇತ್ರ ಚಿಕಿತ್ಸಾ ಶಿಬಿರ 

ಬೈಲೂರು: ಕಲಾಕಿರಣ್ ಕ್ಲಬ್ ಬೈಲೂರು ಮತ್ತು ಜಿಲ್ಲಾ ಸಂಚಾರಿ ನೇತ್ರ ಘಟಕದ ವತಿಯಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರವು ಆ 1 ರಂದು ಕಲಾ ಕಿರಣ್ ಕ್ಲಬ್ ಬೈಲೂರು – ಕೊರಂಗ್ರಪಡಿಯಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ಗಂಟೆ ವರೆಗೆ ನಡೆಯಲಿದ್ದು ಸಾರ್ವಜನಿಕರು ಪ್ರಯೋಜನ ಪಡೆದು ಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.