ಮಾಂಡವಿ ಆಕ್ರೊಪೊಲಿಸ್ ವಸತಿ ಸಮುಚ್ಚಯದಲ್ಲಿ ಆಟಿಡೊಂಜಿ ದಿನ

ಉಡುಪಿ: ನಗರದ ಅಲಂಕಾರ್ ಟಾಕೀಸ್ ಬಳಿ ಇರುವ ಮಾಂಡವಿ ಆಕ್ರೊಪೊಲಿಸ್ ವಸತಿ ಸಮುಚ್ಚಯದಲ್ಲಿ ನಿವಾಸಿಗಳ ಸಂಘದ ಸೊಸೈಟಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಶನಿವಾರ ರಾತ್ರಿ ನಡೆಯಿತು , ಸೊಸೈಟಿಯ ಅಧ್ಯಕ್ಷ ಸುಕುಮಾರ್ ಶೆಟ್ಟಿ ದೀಪ ಬೆಳಗಿಸಿ ಚಾಲನೆ ನೀಡಿ, ನಮ್ಮ ಹಿರಿಯರು ಅಂದಿನ ಕಷ್ಟದ ದಿನಗಳಲ್ಲಿ ಆರೋಗ್ಯದ ದೃಷ್ಟಿಯಿಂದ ಪರಿಸರದಲ್ಲಿ ದೊರೆಯುವ ವಿವಿಧ ತರಕಾರಿಗಳಿಂದ ತಿಂಡಿ ತಿನಿಸುಗಳನ್ನು ತಯಾರಿಸಿ ಎಲ್ಲರೂ ಒಟ್ಟಾಗಿ ನೆಮ್ಮದಿಯ ಜೀವನ ನಡೆಸುತ್ತಿದ್ದರು. ಅಂದಿನ ಕೂಡು ಕುಟುಂಬದ ಐಕ್ಯಮತ್ಯ ಇಂದು ಕಾಣತ್ತಿಲ್ಲ. ಈ […]

ಕಲ್ಮಾಡಿ ವೆಲಂಕಣಿ ಮಾತೆಯ ವಾರ್ಷಿಕ ಮಹೋತ್ಸವ ಮೆರವಣಿಗೆ ಸಂಪನ್ನ

ಉಡುಪಿ: ಸ್ಟೆಲ್ಲಾ ಮಾರಿಸ್ ಚರ್ಚ್ ಕಲ್ಮಾಡಿ ಇಲ್ಲಿನ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಯುಕ್ತ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಗೆಯು ಆದಿವುಡುಪಿಯಿಂದ ಕಲ್ಮಾಡಿ ಚರ್ಚಿನವರೆಗೆ ನಡೆಯಿತು. ಪುಣ್ಯಕ್ಷೇತ್ರದ ರೆಕ್ಟರ್ ವಂದನೀಯ ಬ್ಯಾಪ್ಟಿಸ್ಟ್ ಮಿನೇಜಸ್ ಅವರು ಧರ್ಮಾಧ್ಯಕ್ಷರಿಗೆ ಹಾಗೂ ನೆರೆದ ಭಕ್ತಾದಿಗಳಿಗೆ ಸ್ವಾಗತ ಕೋರಿದರು. ಮಿಲಾಗ್ರಿಸ್ ಚರ್ಚಿ ಕಲ್ಯಾಣ್ಪುರದ ಸಹ ಗುರುಗಳಾದ ವಂದನೀಯ ಜೋಯ್ ಅಂದ್ರಾದೆ ಅವರು ದೇವರ ವಾಚನವನ್ನು ಓದಿ ಸಂದೇಶ ನೀಡಿದರು. ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷ ಅತೀ ವಂದನೀಯ ಡಾ| ಅಲೋಷಿಯಸ್ ಪಾವ್ಲ್ […]

ಕೊಡವೂರು: ಉಚಿತ ಆರೋಗ್ಯ ತಪಾಸಣಾ ಶಿಬಿರ

ಕೊಡವೂರು: ಹಳೆ ವಿದ್ಯಾರ್ಥಿ ಸಂಘ, ಯುವಕ ಸಂಘ (ರಿ.) ಕೊಡವೂರು ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಆ12 ರಂದು ವಿಪ್ರ ಶ್ರೀ ಸಭಾಭವನದಲ್ಲಿ ನಡೆಯಿತು. ನಗರಸಭಾ ಸದಸ್ಯ ವಿಜಯ್ ಕೊಡವೂರು ಮಾತನಾಡಿ, ವಾರ್ಡಿನಲ್ಲಿ ಇದುವರೆಗೆ 380ಕ್ಕೂ ಹೆಚ್ಚಿನ ಜನರಿಗೆ ಕನ್ನಡಕ ವಿತರಣೆ, 18 ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ, 28 ಜನರಿಗೆ ಪೊರೆ ತೆಗೆಯುವ ಕಾರ್ಯವು ಸಂಘ – ಸಂಸ್ಥೆಗಳ ಸಹಕಾರದೊಂದಿಗೆ ನಡೆದಿದೆ. ಶಿಬಿರದ ಮೂಲಕ ಆರೋಗ್ಯ ತಪಾಸಣೆ […]

ಸ್ವಾತಂತ್ರ್ಯದ ಮುನ್ನಾ ದಿನ ಪಾಕಿಸ್ತಾನಕ್ಕೆ ಆಘಾತ: ಬಲೂಚಿಸ್ತಾನದಲ್ಲಿ ಚೀನಾ ಇಂಜಿನಿಯರ್‌ಗಳ ಬೆಂಗಾವಲು ವಾಹನದ ಮೇಲೆ ದಾಳಿ

ಬಲೀಚಿಸ್ತಾನ: ಆದಿತ್ಯವಾರದಂದು ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಚೀನಾದ ಇಂಜಿನಿಯರ್‌ಗಳ ಬೆಂಗಾವಲು ಪಡೆಯ ಮೇಲೆ ಸಶಸ್ತ್ರ ಬಂಡುಕೋರರು ಭಾನುವಾರ ದಾಳಿ ನಡೆಸಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಪಾಕಿಸ್ತಾನದ ಭದ್ರತಾ ಪಡೆಗಳು ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಂದಿದ್ದಾರೆ. ಗ್ವಾದರ್‌ನ ಫಕೀರ್ ಸೇತುವೆಯ ಮೇಲೆ ಚೀನಾದ ನಿರ್ಮಾಣ ಕಂಪನಿಯಲ್ಲಿ ಕೆಲಸ ಮಾಡುವ ಇಂಜಿನಿಯರ್‌ಗಳ ಬೆಂಗಾವಲು ವಾಹನದ ಮೇಲಿನ ದಾಳಿಯಲ್ಲಿ ಇಬ್ಬರು ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ಇತರ ಭಯೋತ್ಪಾದಕರು ಗಾಯಗೊಂಡ ಸ್ಥಿತಿಯಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ ಮತ್ತು […]

ಕುದ್ಕುಂಜೆ ಸರೋಜ ಪಾಟೀಲ್ ನಿಧನ

ಉಡುಪಿ: ಕುಡಾಲ್ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಮಾಜದ ಪ್ರತಿಷ್ಠಿತ ಪಾಟೀಲ್ ಕುಟುಂಬದ ಕುದ್ಕುಂಜೆ ಸರೋಜ ಪಾಟೀಲ್(70) ಇವರು ಸ್ವಗೃಹದಲ್ಲಿ ಆ. 13, ಆದಿತ್ಯವಾರದಂದು ದೈವಾಧೀನರಾಗಿರುತ್ತಾರೆ. ಇವರು ಪುತ್ರ, ಸೊಸೆ ಮೊಮ್ಮಗ ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ.