ಅರಮನೆಗೆ ಅದ್ಧೂರಿ ಸ್ವಾಗತ.. ಮೈಸೂರು ದಸರಾ ಮಹೋತ್ಸವದ ಗಜಪಡೆಗೆ ಪೂಜೆ..

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಅರಣ್ಯಾಧಿಕಾರಿಗಳು ಮಂಗಳವಾರ ಗಜಪಡೆಗೆ ಪೂಜೆ ನೆರವೇರಿಸಿದರು. ಇಲ್ಲಿನ ಅರಣ್ಯ ಭವನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.‌ ಗಜಪೂಜೆ ನಂತರ ನೈವೇದ್ಯ ಅರ್ಪಣೆ ಮಾಡಲಾಯಿತು. ಅರಣ್ಯಾಧಿಕಾರಿಗಳು ಗಜಪಡೆಗೆ ಪುಷ್ಪಾರ್ಚನೆ ಮಾಡಿದರು.ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಗಜಪಡೆಗೆ ಪೂಜೆ, ಅರಮನೆಗೆ ಅದ್ಧೂರಿ ಸ್ವಾಗತ…ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಗಜಪಡೆಗೆ ಪೂಜೆ ನೆವೇರಿಸಲಾಯಿತು. ನಂತರ ಕ್ಯಾಪ್ಟನ್ ಅಭಿಮನ್ಯು ಹಾಗೂ ಗಜಪಡೆಗೆ ಅರಮನೆಗೆ ಅದ್ಧೂರಿ ಸ್ವಾಗತ ಕೋರಲಾಯಿತು ಕಾಲ್ನಡಿಗೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವೇಳೆ ಅಲಂಕಾರಗೊಂಡ […]

ನಾಳೆ ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಉಡುಪಿ, ಮಂಗಳೂರಿನಲ್ಲಿ ಭರದಿಂದ ಸಾಗಿದ ಹಬ್ಬದ ತಯಾರಿ

ಮಂಗಳೂರು (ದಕ್ಷಿಣ ಕನ್ನಡ) :ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ತಯಾರಿ ನಾಳೆ ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಗೆ ಸಿದ್ದತೆ ನಡೆಯುತ್ತಿದೆ.ಅಷ್ಟಮಿ ಸಂಭ್ರಮಾಚರಣೆಗೆ ಉಡುಪಿಯಲ್ಲಿ ಶ್ರೀಕೃಷ್ಣ ಮಠದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿದ್ದತೆ ನಡೆದಿವೆ. ಈಗಾಗಲೇ ದಕ್ಷಿಣ ಕನ್ನಡದಲ್ಲಿ ಅಷ್ಟಮಿಗೆ ಮೂಡೆ/ಕೊಟ್ಟಿಗೆ/ ಗುಂಡ ತಿಂಡಿಗೆ ಎಲೆ ಕಟ್ಟುವುದು, ದೇವರ ಅಲಂಕಾರ ಮಾಡುವುದಕ್ಕೆ ಸಿದ್ಧತೆ ನಡೆಯುತ್ತಿದೆ. ನಗರದ ಕಾರ್ ಸ್ಟ್ರೀಟ್ ನಲ್ಲಿ ಮಹಿಳೆಯರು ಮೂಡೆ, ಕೊಟ್ಟಿಗೆ, ಗುಂಡ ಎಲೆ ಕಟ್ಟಿ ಮಾರಿದರೆ, ಘಟ್ಟದ ಮೇಲಿನಿಂದ ಬಂದ ವ್ಯಾಪಾರಿಗಳು ಹೂವಿನ ಮಾರಾಟದಲ್ಲಿ […]

‘ಜಲಂಧರ’ ಪ್ರಮೋದ್​ ಶೆಟ್ಟಿ ನಟನೆಯ ಚಿತ್ರದ ಶೂಟಿಂಗ್​ ಕಂಪ್ಲೀಟ್

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದಲೇ ಪ್ರೇಕ್ಷಕರ ಮನ ಗೆದ್ದಿರುವ ನಟ ಪ್ರಮೋದ್​ ಶೆಟ್ಟಿ. ಪಾತ್ರದಿಂದ ಪಾತ್ರಕ್ಕೆ ಮ್ಯಾನರಿಸಂನ ಚೇಂಜ್​ ಮಾಡಿಕೊಳ್ಳುವ ಪ್ರಮೋದ್​ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಚಿತ್ರ ‘ಜಲಂಧರ’.ಪ್ರಮೋದ್​ ಶೆಟ್ಟಿ ನಾಯಕನಾಗಿ ನಟಿಸಿರುವ ‘ಜಲಂಧರ’ ಚಿತ್ರದ ಶೂಟಿಂಗ್​ ಮುಕ್ತಾಯಗೊಂಡಿದೆ.ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿದೆ. ಇತ್ತೀಚೆಗೆ ಪ್ರಮೋದ್​ ಶೆಟ್ಟಿಯವರ ಹುಟ್ಟುಹಬ್ಬಕ್ಕೆ ಈ ಚಿತ್ರದ ಪೋಸ್ಟರ್​ ಕೂಡ ಬಿಡುಗಡೆಯಾಗಿದ್ದು, ಕುತೂಹಲ ಮೂಡಿಸಿದೆ. ವಿಷ್ಣು ವಿ ಪ್ರಸನ್ನ ಚೊಚ್ಚಲ ನಿರ್ದೇಶನದ ಈ ಚಿತ್ರ […]

ಖುಷಿ ನಟ ವಿಜಯ್​ ದೇವರಕೊಂಡ ವಿಶಾಖಪಟ್ಟಣಂನ ಸಿಂಹಾಚಲಂ ದೇವಸ್ಥಾನಕ್ಕೆ ಭೇಟಿ

ದಕ್ಷಿಣ ಚಿತ್ರರಂಗದ ಬಹುಬೇಡಿಕೆ ನಟರಾದ ಸಮಂತಾ ರುತ್​ ಪ್ರಭು ಮತ್ತು ವಿಜಯ್​ ದೇವರಕೊಂಡ ಜೋಡಿಯ ‘ಖುಷಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಮುಂದುವರಿಸಿದೆ.ಖುಷಿ ಸಕ್ಸಸ್ ಸಂಭ್ರಮದಲ್ಲಿರುವ ನಟ ವಿಜಯ್​ ದೇವರಕೊಂಡ ಸಿಂಹಾಚಲಂನ ಶ್ರೀ ವರಾಹ ಲಕ್ಷ್ಮಿ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ‘ಖುಷಿ’ ಗೆದ್ದ ಖುಷಿಯಲ್ಲಿ ದೇವಸ್ಥಾನಗಳ ಭೇಟಿ ಮುಂದುವರಿಸಿರುವ ಅರ್ಜುನ್​ ರೆಡ್ಡಿ ಸ್ಟಾರ್​ ವಿಜಯ್​ ದೇವರಕೊಂಡ ಇಂದು ವಿಶಾಖಪಟ್ಟಣಂನ ಸಿಂಹಾಚಲಂ ದೇವಸ್ಥಾನದಲ್ಲಿ ಕಾಣಿಸಿಕೊಂಡರು. ‘ಖುಷಿ’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಯೋಗ್ಯ ಅಂಕಿ ಅಂಶ ಹೊಂದಿದೆ. ಈ […]

ಸೆನ್ಸೆಕ್ಸ್​ 152 & ನಿಫ್ಟಿ 47 ಅಂಕ ಏರಿಕೆ ; ರಿಲಯನ್ಸ್, ಐಟಿಸಿ, ಇನ್ಫೋಸಿಸ್ ಖರೀದಿ ಅಬ್ಬರ

ಮುಂಬೈ: ಮಂಗಳವಾರದ ವಹಿವಾಟಿನಲ್ಲಿ ಭಾರತೀಯ ಷೇರು ಮಾರುಕಟ್ಟೆಗಳು ಏರಿಕೆಯೊಂದಿಗೆ ಕೊನೆಗೊಂಡಿವೆ. ಜಾಗತಿಕ ಷೇರುಗಳಲ್ಲಿನ ಮಂದಗತಿಯ ಪ್ರವೃತ್ತಿಯ ಮಧ್ಯೆ ಮಾರುಕಟ್ಟೆಯ ದೊಡ್ಡ ಕಂಪನಿಗಳಾದ ಐಟಿಸಿ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಇನ್ಫೋಸಿಸ್​​ ಷೇರುಗಳ ಖರೀದಿಯಲ್ಲಿನ ಹೆಚ್ಚಳದಿಂದ ಈಕ್ವಿಟಿ ಬೆಂಚ್ ಮಾರ್ಕ್ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಮಂಗಳವಾರ ಸತತ ಮೂರನೇ ದಿನವೂ ಏರಿಕೆ ಕಂಡವು.ಇದಲ್ಲದೇ, ದೃಢವಾದ ದೇಶೀಯ ಸ್ಥೂಲ ಆರ್ಥಿಕ ದತ್ತಾಂಶವು ಸಕಾರಾತ್ಮಕ ಭಾವನೆಯನ್ನು ಹೆಚ್ಚಿಸಿದೆ ಎಂದು ಹೂಡಿಕೆದಾರರು ತಿಳಿಸಿದ್ದಾರೆ. ಬಿಎಸ್‌ಇ ಬೆಂಚ್​ಮಾರ್ಕ್ ಸೂಚ್ಯಂಕವು 152.12 ಪಾಯಿಂಟ್ ಅಥವಾ ಶೇಕಡಾ […]