ಬನ್ನೇರುಘಟ್ಟದಲ್ಲಿ ಮಾರಕ ವೈರಸ್ಗೆ 7 ಚಿರತೆ ಮರಿಗಳು ಸಾವು

ಆನೇಕಲ್(ಬೆಂಗಳೂರು ಗ್ರಾಮಾಂತರ): ಫೆಲಿನ್ ಪ್ಯಾನ್ಲೂಕೋಪೇನಿಯಾ ವೈರಸ್ ತಗುಲಿ ಬನ್ನೇರುಘಟ್ಟ ಜೈವಿಕ ಉದ್ಯಾನದ 3ರಿಂದ 10 ತಿಂಗಳ ವಯೋಮಾನದ ಏಳು ಚಿರತೆ ಮರಿಗಳು ಮೃತಪಟ್ಟಿವೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ತಿಳಿಸಿದ್ದಾರೆ. ಫೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ವೈರಸ್ ತಗುಲಿ ಬನ್ನೇರುಘಟ್ಟ ಜೈವಿಕ ಉದ್ಯಾನದ 7 ಚಿರತೆ ಮರಿಗಳು ಮೃತಪಟ್ಟಿವೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ತಿಳಿಸಿದ್ದಾರೆ. ಆಗಸ್ಟ್ 22ರಂದು ಉದ್ಯಾನದ ಚಿರತೆ ಮರಿಗಳಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು. ಇದು ಬೆಕ್ಕುಗಳಲ್ಲಿ ಕಾಣಿಸಿಕೊಳ್ಳುವ ಮಾರಕ ರೋಗವಾಗಿದೆ. […]
ಗಿನ್ನಿಸ್ ದಾಖಲೆ ಬರೆದ ಗರ್ಭಿಣಿ :ಸತತ 26 ಗಂಟೆಗಳ ಕಾಲ ಸ್ಯಾಕ್ಸೋಫೋನ್ ನುಡಿಸಿ ದಾಖಲೆ

ಹೊಸಕೋಟೆ (ಬೆಂಗಳೂರು): 7 ತಿಂಗಳ ಗರ್ಭಿಣಿ ಸತತ 26 ಗಂಟೆ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿ ವಿಶೇಷ ಮನ್ನಣೆ ತನ್ನದಾಗಿಸಿಕೊಂಡಿದ್ದಾರೆ.ಗರ್ಭಿಣಿಯೊಬ್ಬರು ಸತತ 26 ಗಂಟೆಗಳ ಕಾಲ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಆವಲಹಳ್ಳಿ ನಿವಾಸಿ ಸುಬ್ಬಲಕ್ಷ್ಮೀ ಈ ಸಾಧಕಿ. ಕಳೆದ ಪೆಬ್ರವರಿಯಲ್ಲಿ ಇವರು ಆವಲಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 26 ಗಂಟೆ 23 ನಿಮಿಷ ಸ್ಯಾಕ್ಸೊಫೋನ್ ನುಡಿಸಿದ್ದಾರೆ. ಇಷ್ಟು ಸಮಯ ನಿರಂತರವಾಗಿ ಸ್ಯಾಕ್ಸೊಪೋನ್ ನುಡಿಸಿದ ಮೊದಲ ಮಹಿಳೆ ಅನ್ನೋ […]
23 ರಿಂದ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್.

ನವದೆಹಲಿ: ಆರಂಭವಾಗಲಿರುವ ಹ್ಯಾಂಗ್ಝೌ ಏಷ್ಯನ್ ಗೇಮ್ಸ್ 19ನೇ ಆವೃತ್ತಿಯಲ್ಲಿ ಭಾರತ ಹೆಚ್ಚು ಪದಕದ ನಿರೀಕ್ಷೆಯೊಂದಿಗೆ ಭಾಗವಹಿಸುತ್ತಿದೆ.2018ರ ಆವೃತ್ತಿಯಲ್ಲಿ ಉತ್ತಮ ರೆಕಾರ್ಡ್ಗಳನ್ನು ಮಾಡಿರುವ ಅಥ್ಲೀಟ್ಗಳು ಈ ವರ್ಷ ಇನ್ನಷ್ಟೂ ಪದಕವನ್ನು ಭಾರತಕ್ಕೆ ಗೆದ್ದು ತೆರಲಿದ್ದಾರೆ. ಏಷ್ಯನ್ ಗೇಮ್ಸ್ನ 19ನೇ ಸೀಸನ್ ಸೆಪ್ಟೆಂಬರ್ 23 ರಿಂದ ಚೀನಾದ ಹ್ಯಾಂಗ್ಝೌನಲ್ಲಿ ಪ್ರಾರಂಭವಾಗಲಿದ್ದು, ಅಕ್ಟೋಬರ್ 8 ರ ವರೆಗೆ ನಡೆಯಲಿದೆ. ಚೀನಾದ ಹ್ಯಾಂಗ್ಝೌನಲ್ಲಿ ಸೆಪ್ಟೆಂಬರ್ 23 ರಿಂದ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ ಆರಂಭವಾಗುತ್ತಿದ್ದು, 2018ರ ರೀತಿಯಲ್ಲಿ ಭಾರತದಿಂದ ಅದ್ಭುತ ಪ್ರದರ್ಶನ ನಿರೀಕ್ಷೆ […]
‘ಅನಿಮಲ್’ ಹೊಸ ಪೋಸ್ಟರ್ನೊಂದಿಗೆ ಟೀಸರ್ ಡೇಟ್ ಅನೌನ್ಸ್

ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಮುಕ್ತಾಯವಾಗಿದ್ದು, ಬಿಡುಗಡೆಗೆ ಸಜ್ಜಾಗಿದೆ. ಇಂದು ಚಿತ್ರದ ಹೊಸ ಪೋಸ್ಟರ್ ಅನಾವರಣದೊಂದಿಗೆ ಟೀಸರ್ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದೆ. 2023ರ ಬಹುನಿರೀಕ್ಷಿತ ಸಿನಿಮಾ ‘ಅನಿಮಲ್’. ಕಬೀರ್ ಸಿಂಗ್ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಬಾಲಿವುಡ್ ಬಹುಬೇಡಿಕೆ ನಟ ರಣ್ಬೀರ್ ಕಪೂರ್ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸ್ಕ್ರೀನ್ ಶೇರ್ ಮಾಡಿದ್ದಾರೆ.ಇಂದು ‘ಅನಿಮಲ್’ ಚಿತ್ರದ ಹೊಸ ಪೋಸ್ಟರ್ ಅನಾವರಣದೊಂದಿಗೆ ಟೀಸರ್ ರಿಲೀಸ್ ಡೇಟ್ […]
ಎಲ್ಐಸಿ ಉದ್ಯೋಗಿಗಳು, ಏಜೆಂಟರಿಗೆ ಕೇಂದ್ರದಿಂದ ಗಣೇಶ ಹಬ್ಬಕ್ಕೆ ಭರ್ಜರಿ ಉಡುಗೊರೆ

ನವದೆಹಲಿ: ಎಲ್ಐಸಿ ಉದ್ಯೋಗಿಗಳು ಮತ್ತು ಏಜೆಂಟರಿಗೆ ಕೇಂದ್ರ ಸರ್ಕಾರ ಗಣೇಶ ಚತುರ್ಥಿಗೆ ಭರ್ಜರಿ ಉಡುಗೊರೆ ನೀಡಿದೆ. ಗ್ರಾಚ್ಯುಟಿ ಮಿತಿ, ಕುಟುಂಬ ಪಿಂಚಣಿ, ವಿಮೆ ಕವರೇಜ್ನಲ್ಲಿ ಹಲವು ಬದಲಾವಣೆಗಳನ್ನು ಮಾಡಿ ಹಣಕಾಸು ಸಚಿವಾಲಯ ಅನುಮೋದನೆ ಪಡೆದುಕೊಂಡಿದೆ. ಕುಟುಂಬ ಪಿಂಚಣಿ ಹೆಚ್ಚಳ, ಏಜೆಂಟರ ಗ್ರಾಚ್ಯುಟಿ ಮಿತಿ ಏರಿಕೆ ಸೇರಿದಂತೆ ವಿವಿಧ ಕೊಡುಗೆಗಳನ್ನು ಕೇಂದ್ರ ಸರ್ಕಾರ ಎಲ್ಐಸಿ ಸಿಬ್ಬಂದಿಗೆ ಪ್ರಕಟಿಸಿದೆ.ಇದು ಭಾರತೀಯ ಜೀವ ವಿಮಾ ನಿಗಮದ(ಎಲ್ಐಸಿ) ಉದ್ಯೋಗಿಗಳು ಮತ್ತು ಏಜೆಂಟರು ಖುಷಿ ಪಡುವ ಸುದ್ದಿ. ಭಾರತದ ಅತಿದೊಡ್ಡ ಜೀವ ವಿಮಾ ಸಂಸ್ಥೆ […]