ಏರ್​ಪೋರ್ಟ್ನಲ್ಲಿ ರಶ್ಮಿಕಾ ಮಂದಣ್ಣ ಲುಕ್​ ವೈರಲ್

ಇದೀಗ ಮುಂಬೈ ವಿಮಾನ ನಿಲ್ದಾಣದಲ್ಲಿ ನಟಿ ಕಾಣಿಸಿಕೊಂಡಿದ್ದು, ಆನ್​ಲೈನ್​ನಲ್ಲಿ ವಿಡಿಯೋ ವೈರಲ್​ ಆಗಿದೆ.ನ್ಯಾಶನಲ್​ ಕ್ರಶ್​​ ರಶ್ಮಿಕಾ ಮಂದಣ್ಣ ಸರಣಿ ಸಿನಿಮಾ ಶೂಟಿಂಗ್​​ಗಳಲ್ಲಿ ಬ್ಯುಸಿಯಾಗಿದ್ದಾರೆ. ವರ್ಕ್ ಕಮಿಟ್​​ಮೆಂಟ್ಸ್ ಹಿನ್ನೆಲೆ ಹೆಚ್ಚು ಪ್ರಯಾಣ ಮಾಡುತ್ತಾರೆ. ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಏರ್​ಪೋರ್ಟ್ ಲುಕ್​ ಟ್ರೋಲ್​ ಆಗಿದೆ. ರಶ್ಮಿಕಾ ಮಂದಣ್ಣ ನ್ಯಾಶನಲ್​ ಕ್ರಶ್​ ಎಂದೇ ಫೇಮಸ್​. ಅತಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿರುವ ನಟಿ. ಇವರ ನಟನೆ ಜೊತೆ ಜೊತೆಗೆ ಸೌಂದರ್ಯ, ಫ್ಯಾಷನ್​ ಸೆನ್ಸ್​ ಸಹ ಸಖತ್​ ಸದ್ದು […]

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡೆಂಗ್ಯೂ ಜ್ವರ : ಬೆಂಗಳೂರಲ್ಲಿ ಜನರಲ್ಲಿ ಆತಂಕ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ.ಬೆಂಗಳೂರು ನಗರದಲ್ಲಿ ಕಳೆದ ಒಂದು ತಿಂಗಳಲ್ಲಿ ಡೆಂಗ್ಯೂ ಜ್ವರ ಪ್ರಕರಣದಲ್ಲಿ ಏರಿಕೆ ಕಂಡುಬಂದಿದೆ.ಆಗಸ್ಟ್ ತಿಂಗಳಿನಲ್ಲಿಯೇ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು. ಮುಂದುವರೆದು ಸೆಪ್ಟೆಂಬರ್ ಪ್ರಾರಂಭದಿಂದ 20 ದಿನಗಳಲ್ಲಿಯೇ 2,182 ಪ್ರಕರಣಗಳು ದಾಖಲಾಗಿವೆ. ಪ್ರತಿದಿನ ಸುಮಾರು 100 ಜನರಲ್ಲಿ ಡೆಂಗ್ಯೂ ಕಾಣಿಸಿಕೊಳ್ಳುತ್ತಿರುವುದು ಆತಂಕ ಹೆಚ್ಚಾಗಲು ಕಾರಣವಾಗಿದೆ. ರಾಜ್ಯದಲ್ಲಿ ಒಟ್ಟು 9000 ಕೇಸ್​ಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಪ್ರಕರಣ : […]

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಿಂದ ನಾಳೆ ಸಾಹಸ

14 ದಿನಗಳ ಕಾಲ ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡಿದ್ದ ರೋವರ್​ ಹಲವಾರು ಮಾಹಿತಿ ಮತ್ತು ಚಿತ್ರಗಳನ್ನು ಭೂಮಿಗೆ ರವಾನಿಸಿತ್ತು. ಚಂದ್ರನ ಉಷ್ಣಾಂಶವನ್ನು ಲೆಕ್ಕ ಹಾಕಿತ್ತು. ಬಳಿಕ ಕತ್ತಲೆ ಆವರಿಸಿದ್ದರಿಂದ ಸುರಕ್ಷಿತ ಸ್ಥಳದಲ್ಲಿ ಲ್ಯಾಂಡರ್​ ಮತ್ತು ರೋವರ್​ ಅನ್ನು ಸ್ಲೀಪ್​ ಮೋಡ್​ಗೆ ಹಾಕಲಾಗಿತ್ತು. ತಲಾ 14 ದಿನ ಕತ್ತಲು, ಬೆಳಕು ಇರಲಿದೆ. ಚಂದ್ರನ ಮೇಲಿನ ಒಂದು ದಿನವು ಭೂಮಿಯ ಮೇಲಿನ 14 ದಿನಗಳಾಗಿರುತ್ತವೆ. ಹೀಗಾಗಿ ಲ್ಯಾಂಡರ್ ಮತ್ತು ರೋವರ್​ ಅನ್ನು 14 ದಿನಗಳ ಅವಧಿಗೆ ಕೆಲಸ ಮಾಡುವಂತೆ ರೂಪಿಸಲಾಗಿತ್ತು. […]

ಹೈದರಾಬಾದ್​-ಬೆಂಗಳೂರು ಮಧ್ಯೆ ಸಂಚಾರ ಕರ್ನಾಟಕದ 3ನ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು

ಹೈದರಾಬಾದ್​-ಯಶವಂತಪುರ ಮಧ್ಯೆ ಸೆಪ್ಟೆಂಬರ್​ 25 ರಂದು ವಂದೇ ಭಾರತ್​ ರೈಲು ಸಂಚಾರ ಆರಂಭವಾಗಲಿದ್ದು, ಇದು ರಾಜ್ಯದ ಮೂರನೇ ರೈಲಾಗಲಿದೆ. ಹೈದರಾಬಾದ್: ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ವಂದೇ ಭಾರತ್​ ರೈಲು ಸಂಪರ್ಕ ಶುರುವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 24 ರಂದು ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಇದು ಎರಡು ಮಹಾನಗರಗಳಾದ ಹೈದರಾಬಾದ್ ಮತ್ತು ಬೆಂಗಳೂರನ್ನು ಸಂಪರ್ಕಿಸಲಿದ್ದು, ಸೆಪ್ಟೆಂಬರ್​ 25 ರಿಂದ ಅಧಿಕೃತ ಸಂಚಾರ ಆರಂಭಿಸಲಿದೆ. 20703 ಸಂಖ್ಯೆಯ ರೈಲು ಕಾಚಿಗುಡದಿಂದ ಬೆಳಗ್ಗೆ 5:30ಕ್ಕೆ […]

ಬಿಡುಗಡೆಗೂ ಹ್ಯಾಟ್ರಿಕ್ ಹೀರೋ‌ ‘ಘೋಸ್ಟ್’ ಸಿನಿಮಾ ಬಗ್ಗೆ ಭಾರಿ ಕುತೂಹಲ!

ಶೀರ್ಷಿಕೆಯಿಂದಲೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್​ ಟಾಕ್​ ಆಗುತ್ತಿರುವ ಸಿನಿಮಾ ‘ಘೋಸ್ಟ್’. ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ದೊಡ್ಡ ಗೆಲುವಿಗೆ ರೆಡಿಯಾಗಿರೋ ಚಿತ್ರವೂ ಹೌದು. ಇದು ಹ್ಯಾಟ್ರಿಕ್ ಹೀರೋ ಶಿವ ರಾಜ್​​ಕುಮಾರ್ ಗ್ಯಾಂಗ್​ಸ್ಟರ್ ಆಗಿ ಕಾಣಿಸಿಕೊಂಡಿರುವ ಪ್ಯಾನ್ ಇಂಡಿಯಾ ಸಿನಿಮಾ. ಪಾಸಿಟಿವ್ ವೈಬ್ಸ್ ಕ್ರಿಯೇಟ್ ಮಾಡಿರೋ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಗಳಿವೆ.ಬಹುನಿರೀಕ್ಷಿತ ಘೋಸ್ಟ್ ಚಿತ್ರದ ಪ್ರೀ ಬ್ಯುಸಿನೆಸ್ ಜೋರಾಗಿದೆ ಎಂಬ ಮಾಹಿತಿ ಇದೆ. ಘೋಸ್ಟ್ ಚಿತ್ರದ ಥಿಯೇಟ್ರಿಕಲ್, ಸ್ಯಾಟಲೈಟ್ ಹಾಗೂ ಡಿಜಿಟಲ್ ರೈಟ್ಸ್ ಭಾರಿ ಮೊತ್ತಕ್ಕೆ ಮಾರಾಟವಾಗಿದೆ. […]