ಕೃಷಿ ವಿವಿಯ ಸಹಾಯಕ ಪ್ರಾಧ್ಯಾಪಕ & ಹೋಂ ನರ್ಸ್ ಇಸ್ರೇಲ್ನಲ್ಲಿ

ಧಾರವಾಡ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸುಮೇಶ ಅವರು ಜೇರುಸೆಲಂನಲ್ಲಿ ಸಿಲುಕಿದ್ದಾರೆ. ಇಸ್ರೆಲ್ನ ಜೇರುಸೆಲಂನಲ್ಲಿ ಲಾಡ್ಜ್ನಲ್ಲಿರುವ ಸುಮೇಶ ಹವಾಮಾನ ಶಾಸ್ತ್ರದ ಕುರಿತ ತರಬೇತಿಗಾಗಿ ತೆರಳಿದ್ದರು.ಇಸ್ರೆಲ್ ಮತ್ತು ಹಮಾಸ್ ಯುದ್ಧ ನಡೆಯುತ್ತಿದ್ದು, ಪ್ರಸ್ತುತ ಧಾರವಾಡ ಓರ್ವ ವ್ಯಕ್ತಿ ಇಸ್ರೆಲ್ನಲ್ಲಿ ಸಿಲುಕಿಕೊಂಡಿದ್ದಾರೆ. ಧಾರವಾಡದ ಕೃಷಿ ವಿವಿಯ ಸಹಾಯಕ ಪ್ರಾಧ್ಯಾಪಕ ಹಾಗೂ ಕೋಲಾರ ಮೂಲದ ಹೋಂ ನರ್ಸ್ ಇಸ್ರೇಲ್ನಲ್ಲಿ ಸಿಲುಕಿದ್ದಾರೆ. ಇಸ್ರೇಲ್ನಲ್ಲಿ ಸಿಲುಕಿದ ಕೋಲಾರ ಮೂಲದ ಮಹಿಳೆ: ಇಸ್ರೇಲ್ನಲ್ಲಿ ಕೋಲಾರ ಜಿಲ್ಲೆ ಮಾಲೂರು ಮೂಲದ ಮಹಿಳೆ ಶಾಂತಿ ಆಲ್ಮೇಡಾ ಸಿಲುಕಿಕೊಂಡಿದ್ದಾರೆ. […]
ಆರೋಗ್ಯ ತಜ್ಞರಿಂದ ಎಚ್ಚರಿಕೆ : ವಾಯು ಮಾಲಿನ್ಯದ ಹೆಚ್ಚಳ ಮಿದುಳಿನಲ್ಲಿ ಊರಿಯುತಕ್ಕೆ ಕಾರಣ

ನವದೆಹಲಿ: ದೀಪಾವಳಿ ಆರಂಭವಾಗುತ್ತಿದ್ದಂತೆ ದೆಹಲಿ – ಎನ್ಸಿಆರ್ಗಳಲ್ಲಿ ಗಾಳಿ ಮಟ್ಟ ಕುಸಿಯುತ್ತದೆ. ಈ ವಾಯು ಮಾಲಿನ್ಯವೂ ಮಿದುಳಿನಲ್ಲಿ ಊರಿಯೂತಕ್ಕೆ ಕಾರಣವಾಗುವ ಸಾಧ್ಯತೆ ಇದ್ದು, ಇದು ಆತಂಕ, ಖಿನ್ನತೆ ಮತ್ತು ಸ್ಮರಣೆ ಸಮಸ್ಯೆಗೆ ಕಾರಣವಾಗಬಹುದು ಎಂದು ಎಚ್ಚರಿಸಿದ್ದಾರೆ. ಅಕ್ಟೋಬರ್ 10ರಂದು ವಿಶ್ವ ಮಾನಸಿಕ ಆರೋಗ್ಯ ದಿನದ ನಿಮಿತ್ತ ಈ ಕುರಿತು ಎಚ್ಚರಿಸಿರುವ ವೈದ್ಯರು, ಮಾಲಿನ್ಯವೂ ಮನುಷ್ಯನ ಯೋಗಕ್ಷೇಮಕ್ಕೆ ಹಾನಿ ಮಾಡುತ್ತದೆ ಎಂಬ ಅಂಶವನ್ನು ಒತ್ತಿ ಹೇಳಿದ್ದಾರೆ. ದೆಹಲಿಯಲ್ಲಿ ವಾಯು ಗುಣಮಟ್ಟ ಕುಸಿತವೂ ಅನೇಕ ದೈಹಿಕ ಮತ್ತು ಮಾನಸಿಕ ಆರೋಗ್ಯ […]
ಪಾಕ್ ವಿರುದ್ಧ ಸಿಗುವುದೇ ಮೊದಲ ಜಯ: ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ

ಹೈದರಾಬಾದ್ ಪಿಚ್ನಲ್ಲಿ ಬ್ಯಾಟ್ಸ್ಮನ್ಗಳಿಗೆ ಸಾಕಷ್ಟು ಸಹಾಯವಾಗುತ್ತದೆ. ಅಭ್ಯಾಸ ಪಂದ್ಯಗಳು ಸೇರಿದಂತೆ ಈ ಟೂರ್ನಿಯಲ್ಲಿ ಇದುವರೆಗೆ ಆಡಿದ ಎಲ್ಲ ಪಂದ್ಯಗಳಲ್ಲಿ ಬ್ಯಾಟ್ಸ್ಮನ್ಗಳು ಉತ್ತಮ ಪ್ರದರ್ಶನ ತೋರಿದ್ದಾರೆ. ಕಳೆದ ಐದು ಪಂದ್ಯಗಳಲ್ಲಿ ಈ ಪಿಚ್ನಲ್ಲಿ ಸರಾಸರಿ ಸ್ಕೋರ್ 296 ಆಗಿದೆ. ನೆದರ್ಲೆಂಡ್ಸ್ ವಿರುದ್ಧ ಪಾಕಿಸ್ತಾನದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆರಂಭಿಕ ಬ್ಯಾಟ್ಸ್ಮನ್ ಫಖರ್ ಜಮಾನ್ ಕಳೆದ 10 ಇನ್ನಿಂಗ್ಸ್ಗಳಲ್ಲಿ ಉತ್ತಮ ಪ್ರದರ್ಶನ ಕಂಡು ಬಂದಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಅವರನ್ನು ಕೈ ಬಿಡಲಾಗಿದ್ದು, ಅವರ […]
ಸ್ಯಾಂಡಲ್ವುಡ್ಗೆ ರಾಧಿಕಾ ಕುಮಾರಸ್ವಾಮಿ ಸಹೋದರನ ಎಂಟ್ರಿ : ಹಾರರ್ ಕಥೆಗೆ ರವಿರಾಜ್ ನಿರ್ಮಾಪಕ

ಸೌಂದರ್ಯ ಮತ್ತು ಅಭಿನಯದಿಂದಲೇ ಕನ್ನಡ ಸಿನಿಮಾರಂಗದಲ್ಲಿ ತನ್ನದೇ ಬೇಡಿಕೆ ಹೊಂದಿರುವ ನಟಿ ರಾಧಿಕಾ ಕುಮಾರಸ್ವಾಮಿ. ನಟನೆ ಜೊತೆಗೆ ನಿರ್ಮಾಣದಲ್ಲೂ ಗುರುತಿಸಿಕೊಂಡಿರುವ ಸ್ಯಾಂಡಲ್ವುಡ್ ಸ್ವೀಟಿ, ಶಮಿಕಾ ಎಂಟರ್ಪ್ರೈಸಸ್ ಮೂಲಕ ಮೂರು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಆದರೆ, ರವಿರಾಜ್ ಅವರಿಗೆ ಸಿಮಾ ರಂಗ ಹೊಸತೇನಲ್ಲ. ರಾಧಿಕಾ ಅವರ ಶಮಿಕಾ ಎಂಟರ್ಪ್ರೈಸಸ್ ಮೂಲಕ ಸಹ ನಿರ್ಮಾಪಕರಾಗಿ ಕೆಲಸ ಮಾಡಿರುವ ಅನುಭವ ಅವರಿಗಿದೆ. ‘ಲಕ್ಕಿ’, ‘ಸ್ವೀಟಿ ನನ್ನ ಜೋಡಿ’, ಭೈರಾದೇವಿ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಚಿತ್ರ ವಿತರಣೆ ವಿಭಾಗದಲ್ಲೂ ಕೈಯಾಡಿಸಿದ್ದಾರೆ. ಆದರೀಗ […]
ಉಡುಪಿ: ಮನೆಯೊಂದರಿಂದ 73 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಉಡುಪಿ: ನಗರದ ಲಾಲಾಲಜಪತ್ ರಾಯ್ ಮಾರ್ಗದ 4ನೇ ಅಡ್ಡರಸ್ತೆಯಲ್ಲಿರುವ ಮನೆಯೊಂದಕ್ಕೆ ಭಾನುವಾರ ರಾತ್ರಿ ನುಗ್ಗಿದ ಕಳ್ಳರು 73 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಕಳ್ಳರು ಮನೆಯ ಮುಂಬಾಗಿಲಿನ ಮತ್ತು ಮಾಸ್ಟರ್ ಬೆಡ್ ರೂಮಿನ ಬಾಗಿಲುಗಳ ಬೀಗ ಮುರಿದು, ಕಪಾಟುಗಳನ್ನು ತೆರೆದು ಅದರಲ್ಲಿದ್ದ ಅಂದಾಜು 1,882 ಗ್ರಾಂ ತೂಕದ ಸುಮಾರು ರೂ. 66,36,300 ಮೌಲ್ಯದ ಚಿನ್ನಾಭರಣಗಳು ಹಾಗೂ 7,450 ಗ್ರಾಂ ತೂಕದ ರೂ. 6,70,500 ಮೌಲ್ಯದ ಬೆಳ್ಳಿಯ ಸ್ವತ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. […]