ಇಸ್ರೇಲ್ ಮತ್ತು ಹಮಾಸ್ ಉಗ್ರರ ಸಂಘರ್ಷ: 274 ಭಾರತೀಯರನ್ನು ಹೊತ್ತು ಸ್ವದೇಶದತ್ತ ಬರುತ್ತಿರುವ ನಾಲ್ಕನೇ ವಿಮಾನ

ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ಸಂಘರ್ಷ ಮುಂದುವರೆದಿದ್ದು, ಇಸ್ರೇಲ್ ನಲ್ಲಿ ನೆಲೆಸಿರುವ ಭಾರತೀಯರನ್ನು ಕರೆತರುವ ಕಾರ್ಯ ನಡೆಯುತ್ತಿದೆ. 274 ಭಾರತೀಯರನ್ನು ಹೊತ್ತ ನಾಲ್ಕನೇ ವಿಮಾನವು ಭಾನುವಾರ ಮುಂಜಾನೆ ಇಸ್ರೇಲ್ನಿಂದ ಭಾರತಕ್ಕೆ ಹೊರಟಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್, ಆಪರೇಷನ್ ಅಜಯ್ ಭಾಗವಾಗಿ ಭಾನುವಾರ ಬೆಳಗ್ಗೆ 274 ಭಾರತೀಯರನ್ನು ಒಳಗೊಂಡ ನಾಲ್ಕನೇ ವಿಮಾನವು ಇಸ್ರೇಲ್ನಿಂದ ಹೊರಟಿದೆ ಎಂದು ಹೇಳಿದ್ದಾರೆ. ಇಸ್ರೇಲ್ನಲ್ಲಿ ಸಿಲುಕಿರುವ ಸುಮಾರು 18000 […]

ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ

ಕಾಪು: ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವವನ್ನು ಅ.15ರಿಂದ ಅ.24ರ ವರೆಗೆ ಆಚರಿಸಲಾಗುವುದು ಹಾಗೂ ಅ.31 ಮಂಗಳವಾರ ಚಂಡಿಕಾಯಾಗ ಪೂರ್ಣಾಹುತಿ ಜರುಗಲಿರುವುದು. ಕಾರ್ಯಕ್ರಮಗಳ ವಿವರಗಳು: ತಾ.15/10/2023 ರಿಂದ ತಾ.23/10/2023 ರವರೆಗೆ ಪ್ರತಿ ದಿನ ಶ್ರೀದೇವಿ ಮಹಾತ್ಮೆ ಪಾರಾಯಣ, ನವದುರ್ಗಾ ಪೂಜೆ ಪ್ರಸನ್ನ ಪೂಜೆ, ಗದ್ದಿಗೆ ಪೂಜೆ, ಹೂವಿನ ಪೂಜೆ, ಅನ್ನಸಂತರ್ಪಣೆ ತಾ.17/10/2023ನೇ ಮಂಗಳವಾರ ಕದಿರು ಕಟ್ಟುವುದು ತಾ.20/10/2023ನೇ ಶುಕ್ರವಾರ ಶಾರದಾ ಪೂಜೆ ತಾ.22/10/2023ನೇ ರವಿವಾರ ದುರ್ಗಾಷ್ಟಮಿ, ದುರ್ಗಾ ನಮಸ್ಕಾರ ಪೂಜೆ […]

ದೊಡ್ಡಣ್ಣ ಗುಡ್ಡೆ : ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವಕ್ಕೆ ಚಾಲನೆ

ದೊಡ್ಡಣ್ಣ ಗುಡ್ಡೆ: ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲ ನಿರಂತರ ಹತ್ತು ದಿನಗಳ ಕಾಲ ನೆರವೇರಲಿರುವ ನವರಾತ್ರಿ ಮಹೋತ್ಸವಕ್ಕೆ ಕದಿರು ಕಟ್ಟುವಿಕೆಯೊಂದಿಗೆ ಚಾಲನೆ ನೀಡಲಾಯಿತು. ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ, ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ಆದ್ಯ ಗಣಪತಿಯಾಗ ಜೋಡಿ ಚಂಡಿಕಾಯಾಗ ಕಲ್ಪೋಕ್ತ ಪೂಜಾ ಸಹಿತ ರಂಗ ಪೂಜೆ ದುರ್ಗಾ ನಮಸ್ಕಾರ ಪೂಜೆ ರಾತ್ರಿಯ ಮಹಾಪೂಜೆಗಳು ನೆರವೇರಿದವು. ವಿವೇಕ್ ನಳಿನಿ ರಾವ್ ಹಾಗೂ ಆದಿತ್ಯ ಮುಕುಂದ ರಾವ್ ಅವರ ಪ್ರಯುಕ್ತ ಚಂಡಿಕಾಯಾಗ ರಾಧಾ […]

ಮೌಲ್ಯದ 70 ಆಸ್ತಿಗಳ ಜಪ್ತಿ ಮಾಡಿದ ಇಡಿ : ಎನ್‌ಸಿಪಿ ಮಾಜಿ ಸಂಸದರಿಗೆ ಸೇರಿದ 315 ಕೋಟಿ ರೂ. !

ನವದೆಹಲಿ: ಮಹಾರಾಷ್ಟ್ರದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ಮಾಜಿ ರಾಜ್ಯಸಭಾ ಸದಸ್ಯ ಈಶ್ವರಲಾಲ್​ ಶಂಕರಲಾಲ್​ ಜೈನ್ ಲಾಲ್ವಾನಿ ಮತ್ತು ಕುಟುಂಬ ಹಾಗೂ ಇವರ ವ್ಯಾಪಾರಕ್ಕೆ ಸೇರಿದ 315 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಭಾನುವಾರ ತಿಳಿಸಿದೆ.ಇದರಲ್ಲಿ ಜಾಮೀನು, ಪವನ ಘಟಕಗಳು, ಬೆಳ್ಳಿ, ಚಿನ್ನ ಮತ್ತು ವಜ್ರದ ಆಭರಣಗಳು ಸೇರಿವೆ ಎಂದು ತನಿಖಾ ಸಂಸ್ಥೆ ಮಾಹಿತಿ ನೀಡಿದೆ.ಎನ್‌ಸಿಪಿ ಮಾಜಿ ಸಂಸದ ಈಶ್ವರಲಾಲ್​ ಶಂಕರಲಾಲ್​ ಜೈನ್ ಲಾಲ್ವಾನಿ, ಕುಟುಂಬ ಹಾಗೂ […]

ನಿಂತಿದ್ದ 2 ಖಾಸಗಿ ಬಸ್​ಗಳಿಗೆ ಬೆಂಕಿ ತಗುಲಿ ಸುಟ್ಟು ಕರಕಲು :ಕಲಬುರಗಿ

ಕಲಬುರಗಿ: ಅಕ್ಕಪಕ್ಕದಲ್ಲಿ ನಿಂತಿದ್ದ ಎರಡು ಬಸ್​ಗಳು ಬೆಂಕಿಯ ಕೆನ್ನಾಲೆಗೆಯಿಂದ ಸಂಪೂರ್ಣ ಸುಟ್ಟು ಕರಕಲಾಗಿವೆ. ಹೀಗಾಗಿ ದಟ್ಟವಾದ ಹೊಗೆ ಆವರಿಸಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಂತರ ಅಗ್ನಿ ಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.ಖಾಸಗಿ ಕಂಪನಿಗೆ ಸೇರಿದ ಎರಡು ಸ್ಲೀಪರ್ ಬಸ್​ಗಳಿಗೆ ಬೆಂಕಿ ತಗುಲಿ ಧಗಧಗಿಸಿ ಸುಟ್ಟು ಕರಗಲಾದ ಘಟನೆ ಕಲಬುರಗಿ ನಗರದ ಹಾಗರಗಾ ರಸ್ತೆಯ ಮಹೆಫಿಲ್​ ಎ ಖಾಸ್ ಡಾಬಾದ ಬಳಿ ಶನಿವಾರ ನಡೆದಿದೆ.ಬೆಂಕಿಗೆ ಧಗಧಗನೆ […]