ಮಥೀಷ ಪತಿರಾಣ ಸ್ಥಾನಕ್ಕೆ ಅನುಭವಿ ಆಲ್​ರೌಂಡರ್ ಏಂಜಿಲೊ ಮ್ಯಾಥ್ಯೂಸ್ : ವಿಶ್ವಕಪ್ 2023​

ಹೈದರಾಬಾದ್​: ಭುಜದ ಗಾಯಕ್ಕೆ ತುತ್ತಾಗಿರುವ ಶ್ರೀಲಂಕಾದ ವೇಗಿ ಮಥೀಷ ಪಥಿರಾಣ ಪಂದ್ಯಗಳಿಂದ ಹೊರಗುಳಿದಿದ್ದು, ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಅನುಭವಿ ಆಲ್​ರೌಂಡರ್​ ಏಂಜೆಲೊ ಮ್ಯಾಥ್ಯೂಸ್​ ತಂಡ ಸೇರಿಕೊಂಡಿದ್ದಾರೆ.ವಿಶ್ವಕಪ್​ ಟೂರ್ನಿಯಲ್ಲಿ ಕಳಪೆ ಫಾರ್ಮ್​ನಿಂದ ಕಂಗೆಟ್ಟಿರುವ ಶ್ರೀಲಂಕಾಗೆ ಆಟಗಾರರ ಗಾಯದ ಸಮಸ್ಸೆ ಕೂಡ ಜೋರಾಗಿ ಕಾಡುತ್ತಿದೆ.ಭುಜದಗಾಯಕ್ಕೆ ತುತ್ತಾಗಿರುವ ಶ್ರೀಲಂಕಾದ ವೇಗಿ ಮಥೀಷ ಪತಿರಾಣ ಸ್ಥಾನಕ್ಕೆ ಬದಲಿ ಆಟಗಾರನಾಗಿ ಅನುಭವಿ ಆಲ್​ರೌಂಡರ್​ ಆಯ್ಕೆಯಾಗಿದ್ದಾರೆ. 36 ವರ್ಷದ ಮ್ಯಾಥ್ಯೂಸ್​ಗೆ ಇದು ನಾಲ್ಕನೇ ವಿಶ್ವಕಪ್​ ಆಗಿದೆ. ಶ್ರೀಲಂಕಾ ಪರ 221 ಪಂದ್ಯಗಳನ್ನು ಆಡಿರುವ ಅವರು […]

150 ಹುದ್ದೆಗಳಿಗೆ ನೇಮಕಾತಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ

ಕರ್ನಾಟಕ ಸರ್ಕಾರದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 150 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳ ನೇಮಕಾತಿ ನಡೆಯಲಿದೆ. ಎರಡು ವರ್ಷಗಳ ಅವಧಿಗೆ ಈ ಹುದ್ದೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆಯನ್ನು ವರ್ಷದಿಂದ ವರ್ಷಕ್ಕೆ ಮಾಡಲಾಗುವುದು. ಈ ಬಗ್ಗೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಎರಡು ವರ್ಷಗಳ ಅವಧಿಗೆ ಈ ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆಯನ್ನು ವರ್ಷದಿಂದ […]

ಇಸ್ರೇಲ್ ಮಿಲಿಟರಿ : ಗಾಜಾ ಪಟ್ಟಿಗೆ ಇಂಧನ ಪೂರೈಸಲು ಅವಕಾಶ ನೀಡಲ್ಲ

ಜೆರುಸಲೇಂ : ಒತ್ತೆಯಾಳುಗಳ ಬಿಡುಗಡೆಗೆ ಬದಲಾಗಿ ಇಸ್ರೇಲ್ ಗಾಜಾಕ್ಕೆ ಇಂಧನ ಪೂರೈಕೆಗೆ ಅವಕಾಶ ನೀಡಲಿದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಮಂಗಳವಾರ ತಡರಾತ್ರಿ ಉತ್ತರಿಸಿದ ಇಸ್ರೇಲ್ ರಕ್ಷಣಾ ಪಡೆಗಳ (ಐಡಿಎಫ್) ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ, ವಿಶ್ವಸಂಸ್ಥೆಯ ಪರಿಹಾರ ಕಾರ್ಯಾಚರಣೆ ಏಜೆನ್ಸಿಗೆ (UN Relief and Works Agency -UNRWA) ಕಳುಹಿಸಲಾದ ಇಂಧನವನ್ನು ಹಮಾಸ್ ಕದ್ದಿದೆ ಎಂದು ಹೇಳಿದರು. ಗಾಜಾ ಪಟ್ಟಿಗೆ ಇಂಧನ ತೀವ್ರ ಅಗತ್ಯವಾಗಿರುವುದು ನಿಜವಾದರೂ ಅಲ್ಲಿಗೆ ಕಳುಹಿಸುವ ಇಂಧನವನ್ನು ಹಮಾಸ್​ ಕದ್ದು ಅದನ್ನು ತನ್ನ […]

ಸಮಿತಿ ಸಭೆ: ಕಾನೂನು ಆಯೋಗದ ಜೊತೆ ಕೋವಿಂದ್ ನೇತೃತ್ವದಲ್ಲಿ ಸಭೆ

ನವದೆಹಲಿ : “ಒಂದು ದೇಶ, ಒಂದು ಚುನಾವಣೆ” ಸಾಧ್ಯತೆ ಬಗ್ಗೆ ಪರಿಶೀಲಿಸಲು ನೇಮಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ನೇತೃತ್ವದ ಸಮಿತಿಗೆ ಕಾನೂನು ಆಯೋಗವು ತನ್ನ ವಿಸ್ತೃತ ವರದಿಯನ್ನು ಪ್ರಸ್ತುತಪಡಿಸಲು ಸಜ್ಜಾಗಿದೆ.”ಒಂದು ದೇಶ, ಒಂದು ಚುನಾವಣೆ” ನಡೆಸುವ ಸಂಬಂಧ ಮಾಜಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ನೇತೃತ್ವದ ಸಮಿತಿಗೆ ವರದಿ ಸಲ್ಲಿಸಲು ಕಾನೂನು ಆಯೋಗ ಸಿದ್ಧತೆ ನಡೆಸಿದೆ. ಕಾನೂನು ಆಯೋಗವು ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ಅಧ್ಯಕ್ಷತೆಯಲ್ಲಿ ಒಂದು ದೇಶ, ಒಂದು ಚುನಾವಣೆ ಕುರಿತ ತನ್ನ ವರದಿಯನ್ನು ತಿಂಗಳ ಆರಂಭದಲ್ಲಿಯೇ […]

ಅಭಿಮಾನಿಗಳಲ್ಲಿ ಕಾತರ : ಮೂರು ದಶಕದ ಬಳಿಕ ಅಮಿತಾಬ್ ಬಚ್ಚನ್‌ ಜೊತೆಗೆ ರಜಿನಿಕಾಂತ್​ ಸಿನಿಮಾ

ಬೆಂಗಳೂರು: ತಮಿಳು ಸೂಪರ್‌ಸ್ಟಾರ್​ ರಜಿನಿಕಾಂತ್​​ 33 ವರ್ಷಗಳ ಬಳಿಕ ತಮ್ಮ ಸ್ನೇಹಿತನೊಂದಿಗೆ ಹೊಸ ಸಿನಿಮಾ ಮಾಡುತ್ತಿದ್ದಾರೆ.’ತಲೈವರ್​ 170′ ಸಿನಿಮಾದಲ್ಲಿ ಇಬ್ಬರು ಅಭಿನಯಿಸಲಿದ್ದಾರೆ. ಈ ಸಿನಿಮಾ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ನೀಡಲಿದೆ ಅಂತಿದ್ದಾರೆ ಸಿನಿಮಾ ಪಂಡಿತರು. ಈ ಕುರಿತು ರಜಿನಿಕಾಂತ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮಾಹಿತಿ ನೀಡಿದ್ದಾರೆ. ಅಮಿತ್​ ಬಚ್ಚನ್​ ಜೊತೆಗಿರುವ ಫೋಟೋ ಹಂಚಿಕೊಂಡು, ’33 ವರ್ಷಗಳ ಬಳಿಕ ನನ್ನ ಸ್ನೇಹಿತನೊಂದಿಗೆ ಮತ್ತೆ ಕೆಲಸ ಮಾಡುತ್ತಿದ್ದೇನೆ. ಅಮಿತಾಬ್​​ ಬಚ್ಚನ್​ ತಮ್ಮ ಮುಂದಿನ ಚಿತ್ರ ಲೈಕಾ ನಿರ್ಮಾಣದ ‘ತಲೈವರ್​ 170’ರಲ್ಲಿ […]