ಸಹಕಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ : ಕೇಂದ್ರ ಸರ್ಕಾರದ ವಿರುದ್ಧ ‘ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ’ ಅಭಿಯಾನ

ಬೆಂಗಳೂರು: ಇಂದಿನಿಂದ ಸಾಮಾಜಿಕ ಜಾಲತಾಣದಲ್ಲಿ ನಡೆಸಲಾಗುವ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂಬ ಅಭಿಯಾನದ ಯಶಸ್ಸಿಗೆ ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ನಮ್ಮ ನಾಡು ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಕರ್ನಾಟಕವು ಸಾಗಿಬಂದ ಹಾದಿಯನ್ನು ಸ್ಮರಿಸಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾಗಿರುವ ಅನುದಾನ, ತೆರಿಗೆಯಲ್ಲಿ ಪಾಲು, ಬರ ಮತ್ತು ಜಿಎಸ್‌ಟಿ ಪರಿಹಾರ ಪೂರ್ಣಪ್ರಮಾಣದಲ್ಲಿ ಬಂದಿಲ್ಲ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳು ಮತ್ತು ಐಬಿಪಿಎಸ್‌ ನೇಮಕಾತಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಎದುರಿಸಲು ಅವಕಾಶ ನೀಡದೆ […]

ಕರಡು ವರದಿಗೆ ಸಂಸದೀಯ ಸ್ಥಾಯಿ ಸಮಿತಿ ತಡೆ: ಹೊಸ ಕ್ರಿಮಿನಲ್​ ಕಾನೂನು ಮಸೂದೆ

ನವದೆಹಲಿ: ದೇಶದಲ್ಲಿ ಅಸ್ತಿತ್ವದಲ್ಲಿರುವ ಐಪಿಸಿ​, ಸಿಆರ್​ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆ ಸೇರಿ ಕ್ರಿಮಿನಲ್​ ಕಾನೂನುಗಳನ್ನು ಬದಲಿಸುವ ಮೂರು ಮಸೂದೆಗಳ ಕರಡು ವರದಿಯನ್ನು ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು  ಶುಕ್ರವಾರ ತಡೆಹಿಡಿದಿದೆ. ಭಾರತೀಯ ನ್ಯಾಯ ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಮತ್ತು ಭಾರತೀಯ ಸಾಕ್ಷ್ಯ-2023 ಮಸೂದೆಗಳ ಕರಡು ವರದಿಯನ್ನು ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ ತಡೆಹಿಡಿದಿದೆ. ಈ ಮೂರು ಮಸೂದೆಗಳ ಕರಡು ವರದಿಗಳನ್ನು ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಪರಿಶೀಲನೆಗೆ ವಹಿಸಲಾಗಿದೆ. […]

ಹುಲಿ ಉಗುರು ಮಾದರಿ ಪೆಂಡೆಂಟ್ ಧರಿಸಿದ್ದ ಅರಣ್ಯಾಧಿಕಾರಿ ಬಂಧನ : ಚಿಕ್ಕಮಗಳೂರು

ಚಿಕ್ಕಮಗಳೂರು: ಹುಲಿ ಉಗುರು ಮಾದರಿ ಪೆಂಡೆಂಟ್​ ಧರಿಸಿದ ಆರೋಪದ ಮೇಲೆ ಕಳಸ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.ದರ್ಶನ್ ಅವರು ಹುಲಿ ಉಗುರು ಮಾದರಿ ಪೆಂಡೆಂಟ್ ಇರುವ ಸರ ಹಾಕಿಕೊಂಡ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಅಪ್​ಲೋಡ್​ ಮಾಡಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು.ಚಿಕ್ಕಮಗಳೂರು ಜಿಲ್ಲೆಯಲ್ಲಿ ಹುಲಿ ಉಗುರು ಮಾದರಿಯ ಪೆಂಡೆಂಟ್​ ಧರಿಸಿರುವ ಆರೋಪದ ಮೇಲೆ ಅರಣ್ಯಾಧಿಕಾರಿಯನ್ನು ಬಂಧಿಸಲಾಗಿದೆ. ದರ್ಶನ್ ಈ ಹಿಂದೆ ತಮ್ಮ […]

ಇಂಜಿನಿಯರ್​ ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : KIOCL ನೇಮಕಾತಿ

ಬೆಂಗಳೂರಿನ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್​​ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಚೇರಿಯಲ್ಲಿ ನೇಮಕಾತಿ ನಡೆಯಲಿದೆ. ಒಟ್ಟು 14 ಹುದ್ದೆಗಳಿವೆ. ಆಸಕ್ತ, ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್​​ನಲ್ಲಿ ಖಾಲಿ ಇರುವ ಇಂಜಿನಿಯರ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಅಧಿಸೂಚನೆ ಹುದ್ದೆಗಳ ವಿವರ: ಎಕ್ಸಿಕ್ಯುಟಿವ್​ ಕಂಪನಿ ಸೆಕ್ರೆಟರಿ – ಪದವಿ ಆಫೀಸರ್​/ ಬ್ಯುಸಿನೆಸ್​ ಡೆವಲ್ಮೆಂಟ್​ ಆಫೀಸರ್​​ ಬಿಕಾಂ, ಬಿಬಿಎ, ಬಿಬಿಎಂ, ಬಿಸಿಎ, ಎಂಬಿಎ ಇಂಜಿನಿಯರ್​​ ಬಿಇ ಅಥವಾ […]

ಬಾಬರ್, ಶಕೀಲ್​ ಅರ್ಧಶತಕ; ಹರಿಣಗಳಿಗೆ 271 ರನ್​ಗಳ ಸ್ಪರ್ಧಾತ್ಮಕ ಗುರಿ ನೀಡಿದ ಪಾಕಿಸ್ತಾನ : ವಿಶ್ವಕಪ್​ ಕ್ರಿಕೆಟ್​​

ಚೆನ್ನೈ (ತಮಿಳುನಾಡು): ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ತಾನ ತಂಡವು ಬಾಬರ್ ಆಜಂ ಮತ್ತು ಸೌದ್​​ ಶಕೀಲ್​ ಅವರ ಅರ್ಧಶತಕದ ನೆರವಿನಿಂದ 46.3 ಓವರ್​ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 270 ರನ್​ ಗಳಿಸಿತು.ಚೆನ್ನೈನ ಚೆಪಾಕ್​ ಪಿಚ್​​ನಲ್ಲಿ ಇಂದು ತಬ್ರೈಜ್ ಶಮ್ಸಿ ಅವರ ಸ್ಪಿನ್​ ದಾಳಿಯ ನಡುವೆಯೂ ಪಾಕಿಸ್ತಾನ ಹರಿಣಗಳಿಗೆ 271 ರನ್​ ಗುರಿ ನೀಡಿತು. ಮೈದಾನಕ್ಕಿಳಿದ ಪಾಕ್​ ಆರಂಭಿಕರಿಗೆ ಮಾರ್ಕೊ ಜಾನ್ಸೆನ್ ಕಾಡಿದರು. ಕಳೆದೆರಡು ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್​ ಆಡಿದ್ದ ಅಬ್ದುಲ್ಲಾ ಶಫೀಕ್ ಕೇವಲ 9 ರನ್​ಗೆ […]