ವಿಶ್ವಕಪ್ ಕ್ರಿಕೆಟ್ ೨೦೨೩ : ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ೨೪೩ ರನ್ ಗಳ ಅಂತರದಿಂದ ಭರ್ಜರಿ ಗೆಲುವು

ಕೋಲ್ಕತ್ತಾ : ಕೋಲ್ಕತ್ತಾ ದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಕಪ್ ೨೦೨೩ ರ್ ೩೭ ಪಂದ್ಯದಲ್ಲಿ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ಹಣಾಹಣಿಯಲ್ಲಿದ್ದವು. ಭಾರತ ಟಾಸ್ ಗೆಲ್ಲುವುದರ ಮೂಲಕ ಬ್ಯಾಟಿಂಗ್ ಅನ್ನು ಆಯ್ಕೆ ಮಾಡಿ ೩೨೬ ರನ್ಗಳ ಗಳಿಸುವ ಮೂಲಕ ದಕ್ಷಿಣ ಆಫ್ರಿಕಾಗೆ ೩೨೭ ರನ್ ಗಳ ಗೆಲುವಿನ ಗುರಿಯನ್ನು ನೀಡಿತು. ಬ್ಯಾಟಿಂಗ್ ಆಯ್ದ ಭಾರತ ಮೊದಲಿಗೆ ಶುಭಮನ್ ಗಿಲ್ ಹಾಗೂ ರೋಹಿತ್ ಶರ್ಮ ಕ್ರಮವಾಗಿ ೨೩(೨೪), ೪೦(೨೪) ರನ್ ಗಳನ್ನು ಮಾಡಿ ನಂತರ […]

ಏಕದಿನ ವಿಶ್ವಕಪ್ 2023 : ಸಚಿನ್ ತೆಂಡೂಲ್ಕರ್ ದಾಖಲೆ ಮುರಿದು 49ನೇ ಶತಕ ಬಾರಿಸಿದ ಕಿಂಗ್ ಕೊಹ್ಲಿ , ದ.ಆ ಗೆ 327 ರನ್ ಗಳ ಟಾರ್ಗೆಟ್

2023ರ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ತಮ್ಮ ಏಕದಿನ ಮಾದರಿಯಲ್ಲಿ 49ನೇ ಶತಕ ಸಿಡಿಸುವ ಮೂಲಕ ಸಚಿನ್‌ ದಾಖಲೆ ಸರಿಗಟ್ಟುವುದಲ್ಲದೇ ತಂಡದ ಮೊತ್ತವನ್ನು ಹೆಚ್ಚಿಸುವಲ್ಲಿಯೂ ಸಹಾಯಕರಾದರು. ಅಂತಿಮವಾಗಿ ಭಾರತ ತಂಡ 50 ಓವರ್‌ಗೆ 5 ವಿಕೆಟ್ ನಷ್ಟಕ್ಕೆ 326 ರನ್‌ ಗಳಿಸುವ ಮೂಲಕ ಸೌತ್‌ ಆಫ್ರಿಕಾಗೆ 327 ರನ್‌ಗಳ ಬಿಗ್‌ ಟಾರ್ಗೆಟ್‌ ನೀಡಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಪಂದ್ಯ ನಡೆಯುತ್ತಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು […]

ಬಂಡೀಪುರ ಕಾಡಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು

ಚಾಮರಾಜನಗರ: ಮೃತರನ್ನು ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಯುವಕ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು, ಓರ್ವ ಬೇಟೆಗಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಚೆಕ್ ಪೋಸ್ಟ್ ಸಮೀಪ ನಡೆದಿದೆ.ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಬೇಟೆಗಾರ ಮೃತಪಟ್ಟಿದ್ದಾನೆ. ಈ ವೇಳೆ ಬೇಟೆಗೆ ಬಂದ ಓರ್ವ ಯುವಕ […]

ಬೆಂಗಳೂರಿನಿಂದ ವಿಜಯಪುರ, ಬೆಳಗಾವಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲು : ದೀಪಾವಳಿ ಸ್ಪೆಷಲ್

ಬೆಂಗಳೂರು: ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್​ನಿಂದ ವಿಜಯಪುರ ಮತ್ತು ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಪ್ರಯೋಜನ ಪಡೆದುಕೊಳ್ಳಬೇಕೆಂದು ನೈಋತ್ಯ ರೈಲ್ವೆ ಮನವಿ ಮಾಡಿದೆ‌.ದೀಪಾವಳಿ ಹಬ್ಬದ ವೇಳೆ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ವಿಜಯಪುರ ಮತ್ತು ಬೆಳಗಾವಿಗೆ ವಿಶೇಷ ರೈಲುಗಳ ವ್ಯವಸ್ಥೆಯನ್ನು ಕಲ್ಪಿಸುತ್ತಿದೆ. ರೈಲು ಸಂಖ್ಯೆ 06231/06232 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ (ಒಂದು ಟ್ರಿಪ್): ರೈಲು ಸಂಖ್ಯೆ 06231 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10ರಂದು ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್​​ನಿಂದ ಸಂಜೆ […]

ಯುವ ಮತದಾರರಲ್ಲಿ ಜಾಗೃತಿ ಮೂಡಿಸುವ ಕಿರುಚಿತ್ರ ನಿರ್ಮಾಣ ಸ್ಪರ್ಧೆ

ಉಡುಪಿ: ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024 ರ ಕುರಿತು ಸಾರ್ವಜನಿಕರಲ್ಲಿ ವಿಶೇಷವಾಗಿ ಯುವ ಮತದಾರರಲ್ಲಿ ಜಾಗೃತಿ ಮೂಡಿಸುವ ಕಿರುಚಿತ್ರ ನಿರ್ಮಿಸುವ ಸ್ಪರ್ಧೆಯನ್ನುಏರ್ಪಡಿಸಲಾಗಿದ್ದು, ಹೆಚ್ಚು ಆಕರ್ಷಕ ಮತ್ತು ವಿನೂತನವಾಗಿ ಚಿತ್ರಣಗೊಳ್ಳುವ 3 ಕಿರುಚಿತ್ರಗಳಿಗೆ ನಗದು ಬಹುಮಾನ ನೀಡಿ,ಗೌರವಿಸಲಾಗುವುದು. ಕಿರುಚಿತ್ರವು ಜಾಹಿರಾತು ಮಾದರಿಯಲ್ಲಿದ್ದು, 50 ಸೆಕೆಂಡ್ ಗಳಿಗಿಂತ ಕಡಿಮೆ ಇರಬೇಕು. ಕಾಪಿರೈಟ್ ಇರುವಂತಹ ಹಿನ್ನಲೆ ಸಂಗೀತಬಳಸಬಾರದು. ಚಿತ್ರದಲ್ಲಿ ಯಾವುದೇ ಹಿಂಸಾತ್ಮಕ ಚಿತ್ರಗಳಿರಬಾರದು ಮತ್ತು ಸಾಹಿತ್ಯವು ಸಕಾರಾತ್ಮಕವಾಗಿರಬೇಕು. ಕಿರು ಚಿತ್ರದಲ್ಲಿಶೀರ್ಷಿಕೆಗಾಗಿ ಹೆಚ್ಚು ಸಮಯ ವ್ಯರ್ಥ […]