ಉಡುಪಿ: ನ.26 ರಂದು ವಾಯ್ಸ್ ಆಫ್ ಚಾಣಕ್ಯ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ

ಉಡುಪಿ: ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಪ್ ಮ್ಯೂಸಿಕ್ ಇವರ ನೇತೃತ್ವದಲ್ಲಿ ನಡೆಯುವ ವಾಯ್ಸ್ ಆಫ್ ಚಾಣಕ್ಯ 2023 ಉಭಯ ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆ ಸೀಸನ್ 6 ರ ಆಯ್ಕೆ ಪ್ರಕ್ರಿಯೆಯು ಉಡುಪಿ ಮೈಟೆಕ್ ತಾಂತ್ರಿಕ ವಿದ್ಯಾಲಯದ ಸಹಕಾರದೊಂದಿಗೆ ನ.26ರಂದು ಬೆಳಿಗ್ಗೆ10 ರಿಂದ 1 ರ ತನಕ ಉಡುಪಿ ಕಿನ್ನಿಮುಲ್ಕಿ ಜಂಕ್ಷನ್ ಸ್ವಾಗತ ಗೋಪುರ ಬಳಿ ಸಿಲ್ವರ್ ಮೈನ್ ಬಿಲ್ಡಿಂಗ್ ನ ಪ್ರಥಮ ಮಹಡಿಯಲ್ಲಿರುವ ಮೈ -ಟೆಕ್ ತಾಂತ್ರಿಕ […]

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಗೆ ರಾಷ್ಟ್ರ ಪ್ರಶಸ್ತಿಯ ಗರಿ

ಉಡುಪಿ: ಕೇಂದ್ರ ಸರ್ಕಾರದ ಮೀನುಗಾರಿಕೆ ಇಲಾಖೆ ಹಾಗೂ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ ವತಿಯಿಂದ ಮೀನುಗಾರಿಕಾ ಸಹಕಾರಿ ಸಂಘ ವಿಭಾಗದಲ್ಲಿ ನೀಡಲಾಗುವ ರಾಷ್ಟ್ರೀಯ ಅತ್ಯುತ್ತಮ ಮೀನುಗಾರಿಕಾ ಸಹಕಾರಿ ಸಂಸ್ಥೆ ಪ್ರಶಸ್ತಿಯು ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಗೆ ಲಭಿಸಿದೆ. ಅಹಮದಾಬಾದ್ ನಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಗ್ಲೋಬಲ್ ಫಿಷರೀಸ್ ಕಾನ್ಫರೆನ್ಸ್ ಇಂಡಿಯಾ ಸಮಾರಂಭದಲ್ಲಿ ದ.ಕ ಉಡುಪಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಹಾಗೂ ಉಡುಪಿ […]

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ “ವೆಲ್ ವುಮೆನ್” ಕಾರ್ಯಕ್ರಮಕ್ಕೆ ಚಾಲನೆ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಮುದಾಯದ ಮಹಿಳೆಯರಿಗಾಗಿ “ವೆಲ್ ವುಮೆನ್” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದರ ಮುಖಾಂತರ ಉಚಿತವಾಗಿ ಸ್ತನ ಕ್ಯಾನ್ಸರ್ ತಪಾಸಣೆ ಮತ್ತು ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಹಾಗೂ ಜಾಗೃತಿ ಮಾಹಿತಿ ಕಾರ್ಯಕ್ರಮ. ಇದು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲ ಹಾಗೂ ಮಣಿಪಾಲ್ ಫೌಂಡೇಶನ್ ಇದರ ಜಂಟಿ ಉಪಕ್ರಮವಾಗಿದೆ. ಇದರ ಅಂಗವಾಗಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಉಚಿತ ತಪಾಸಣೆ ಜೊತೆಗೆ ಸಮಗ್ರ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಕಸ್ತೂರ್ಬಾ […]