ತೆಲಂಗಾಣದ ಮಾಜಿ ಸಿಎಂ ಆಸ್ಪತ್ರೆಗೆ ದಾಖಲು

ಹೈದರಾಬಾದ್: ಬಿಆರ್ಎಸ್ ನಾಯಕ ಹಾಗೂ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಕಲ್ವಕುಂಟ್ಲ ಚಂದ್ರಶೇಖರ್ ರಾವ್ ಅವರನ್ನು ಗುರುವಾರ ತಡರಾತ್ರಿ ಸೋಮಾಜಿಗುಡದಲ್ಲಿರುವ ಯಶೋದಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿದ್ದಿದ್ದರಿಂದ ಅವರ ಸೊಂಟದ ಮೂಳೆ ಮುರಿತವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡುವ ಸಾಧ್ಯತೆಗಳಿವೆ. ವೈದ್ಯಕೀಯ ಪರೀಕ್ಷೆಗಳ ಬಳಿಕ ವೈದ್ಯರು ಶಸ್ತ್ರಚಿಕಿತ್ಸೆ ಮಾಡಬೇಕಾ ಬೇಡವೇ ಎಂಬ ಬಗ್ಗೆ ಡಾಕ್ಟರ್ಗಳು ನಿರ್ಧರಿಸಲಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ಎರ್ರವೆಲ್ಲಿಯ ತಮ್ಮ […]
ರೆಪೊ ದರದಲ್ಲಿ ಯಥಾಸ್ಥಿತಿ, ಜಿಡಿಪಿ ಬೆಳವಣಿಗೆ ಶೇ 7, ಹಣದುಬ್ಬರ ಶೇ 5.4 ಹೆಚ್ಚಳ : ಆರ್ಬಿಐನಿಂದ ಹಣಕಾಸು ನೀತಿ ಪ್ರಕಟ

ನವದೆಹಲಿ: ಮೂರು ದಿನಗಳಿಂದ ಭಾರತೀಯ ರಿಸರ್ವ್ ಬ್ಯಾಂಕ್ನಿಂದ(ಆರ್ಬಿಐ) ನಡೆಯುತ್ತಿರುವ ಸುದೀರ್ಘ ಹಣಕಾಸು ನೀತಿ ಸಮಿತಿ ಸಭೆ ಇಂದು (ಶುಕ್ರವಾರ) ಕೊನೆಗೊಂಡಿದೆ. ಸಭೆಯ ನಂತರ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹಣಕಾಸು ನೀತಿಯನ್ನು ಬಿಡುಗಡೆಗೊಳಿಸಿದ್ದಾರೆ. ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದಕೊಳ್ಳಲಾಗಿದೆ. ರೆಪೊ ದರ ಶೇ 6.5 ಇದೆ. ಜಿಡಿಪಿ ಬೆಳವಣಿಗೆ ಶೇ 7ರಷ್ಟು ಆಗಲಿದೆ ಅಂದಾಜಿಸಿದ್ದಾರೆ. ಹಣದುಬ್ಬರ ಶೇ 5.4ರಷ್ಟಿದೆ ಎಂದು ಆರ್ಬಿಐ ಹೇಳಿದೆ. ಬಡ್ಡಿದರಗಳು ಹೆಚ್ಚಾಗುತ್ತವೆಯೋ ಅಥವಾ ಕಡಿಮೆಯಾಗುತ್ತವೆಯೋ ಎಂಬ ಪ್ರಶ್ನೆಗಳಿಗೆ ಇಂದು ಉತ್ತರ ಲಭಿಸಿದೆ.ಭಾರತೀಯ ರಿಸರ್ವ್ […]
ಪ್ರವಾಹ ಪರಿಸ್ಥಿತಿ ಸುಧಾರಿಸಿದ ಬೆನ್ನಲ್ಲೇ ತಮಿಳುನಾಡಿಗೆ ಭೂಕಂಪನದ ಬಿಸಿ : ಕರ್ನಾಟಕದಲ್ಲಿ ನಡುಗಿದ ಭೂಮಿ

ಚೆಂಗಲ್ಪಟ್ಟು (ತಮಿಳುನಾಡು): ಇತ್ತೀಚೆಗೆ ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಹಿನ್ನೆಲೆ ತಮಿಳುನಾಡಿನಲ್ಲಿ ಮಿಚೌಂಗ್ ಚಂಡಮಾರುತ ಅಬ್ಬರಿಸಿತ್ತು. ಹೌದು ಇಂದು ಬೆಳಗ್ಗೆ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಸುಮಾರು 10 ಕಿ.ಮೀ ಪ್ರದೇಶದಲ್ಲಿ ಇಂದು ಬೆಳಗ್ಗೆ 07: 39ರ ಸುಮಾರಿಗೆ 3.2 ತೀವ್ರತೆಯ ಭೂಕಂಪ ಸಂಭವಿಸಿದೆ.ತಮಿಳುನಾಡಿನ ಹಲವೆಡೆ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತವಾಗಿತ್ತು.ಕರ್ನಾಟಕ ಮತ್ತು ತಮಿಳುನಾಡಿನ ಕೆಲವೆಡೆ ಭೂಕಂಪನ ಸಂಭವಿಸಿದೆ. ಅದರಲ್ಲೂ, ಚೆನ್ನೈನಂತಹ ಮಹಾನಗರದಲ್ಲಿ ಪ್ರವಾಹ […]
ಆರ್ಬಿಐ ರೆಪೋದರ ಶೇಕಡಾ 6.5: ಜಿಡಿಪಿ ಶೇಕಡಾ 7ಕ್ಕೆ ಏರಿಕೆ, ಹಣದುಬ್ಬರ ಶೇಕಡಾ 5.4ರ ಯಥಾಸ್ಥಿತಿ

ನವದೆಹಲಿ: ಆರ್ಬಿಐನ ಹಣಕಾಸು ನೀತಿ ಸಮಿತಿಯು ಶುಕ್ರವಾರ ಸರ್ವಾನುಮತದಿಂದ ರೆಪೊ ದರವನ್ನು ಶೇಕಡಾ 6.5 ರ ಯಥಾಸ್ಥಿಯಲ್ಲಿ ಇರಿಸಲು ನಿರ್ಧರಿಸಿದೆ. ಕೇಂದ್ರ ಬ್ಯಾಂಕ್ ಪ್ರಮುಖ ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿರಿಸಿರುವುದು ಇದು ಸತತ ಐದನೇ ಬಾರಿಯಾಗಿದೆ. ಆರ್ಬಿಐ ಆರ್ಥಿಕ ವರ್ಷ 24 ಜಿಡಿಪಿ ಅನುಮಾನವನ್ನು ಶೇಕಡಾ 6.5 ರಿಂದ ಶೇಕಡಾ 7 ಕ್ಕೆ ಏರಿಸಿದೆ. 2023-24 ಕ್ಕೆ ಹಣದುಬ್ಬರ ಪ್ರಕ್ಷೇಪಣವನ್ನು 5.4 ಶೇಕಡಾದಲ್ಲಿ ಬದಲಾಯಿಸದೆ ಇರಿಸಿದೆ. ಆರು ಸದಸ್ಯರಲ್ಲಿ ಐವರು ಪರವಾಗಿ ಮತ ಚಲಾಯಿಸುವುದರೊಂದಿಗೆ, ಆರ್ಬಿಐ ಸಮಿತಿಯು “ವಸತಿ ಹಿಂತೆಗೆದುಕೊಳ್ಳುವಿಕೆ” […]
ನಟ ಜೂನಿಯರ್ ಮೆಹಮೂದ್ ಹೊಟ್ಟೆಯ ಕ್ಯಾನ್ಸರ್ನಿಂದ ನಿಧನ

ಮುಂಬೈ (ಮಹಾರಾಷ್ಟ್ರ): ಹೊಟ್ಟೆಯ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಜೂನಿಯರ್ ಮೆಹಮೂದ್ ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೊಟ್ಟೆಯ ಕ್ಯಾನ್ಸರ್ ನಾಲ್ಕನೇ ಹಂತದಲ್ಲಿದ್ದಾಗ ಅವರು ಟಾಟಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಜೂನಿಯರ್ ಮೆಹಮೂದ್ ಎಂದೇ ಖ್ಯಾತರಾಗಿದ್ದ ನಟ ನಯೀಮ್ ಸಯ್ಯದ್ ನಿನ್ನೆ (ಗುರುವಾರ) ರಾತ್ರಿ 2 ಗಂಟೆಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. ಹೊಟ್ಟೆಯ ಕ್ಯಾನ್ಸರ್ನಿಂದ ಜೂನಿಯರ್ ಮೆಹಮೂದ್ ಎಂದೇ ಖ್ಯಾತಿ ಗಳಿಸಿದ್ದ ನಟ ನಯೀಮ್ ಸಯ್ಯದ್ (67) […]