ಸರಕಾರದ ಯೋಜನೆಗಳನ್ನು ನಾಗರಿಕರಿಗೆ ತಲುಪಿಸುವಲ್ಲಿ ಗ್ರಾಮ ಒನ್ ಕೇಂದ್ರಗಳ ಪಾತ್ರ ಮಹತ್ವ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸರಕಾರದಿಂದ ಅನುಷ್ಠಾನಗೊಳಿಸಲಾಗುವ ಹೊಸ ಯೋಜನೆಗಳನ್ನು ನಾಗರಿಕರಿಗೆ ಉತ್ತಮ ರೀತಿಯಲ್ಲಿ ತಲುಪಿಸುವಲ್ಲಿ ಗ್ರಾಮ ಒನ್ ಕೇಂದ್ರಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.   ಅವರು ಶನಿವಾರ ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಸೇವಾಸಿಂಧು / ಗ್ರಾಮ ಒನ್ ಜಿಲ್ಲಾಧಿಕಾರಿಗಳ ಕಚೇರಿ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ಜಿಲ್ಲೆಯ  ಗ್ರಾಮ ಒನ್ ಕೇಂದ್ರದ ನಿರ್ವಾಹಕರಿಗೆ ನಡೆದ ಜಿಲ್ಲಾಮಟ್ಟದ ಕ್ರೀಡೋತ್ಸವ “ಗ್ರಾಮ ಒನ್ ಕ್ರೀಡಾ ಹಬ್ಬ – 2023” ರ ಕಾರ್ಯಕ್ರಮ […]

ಕೋವಿಡ್ ಎದುರಿಸಲು ಸರಕಾರ ಸನ್ನದ್ಧ, ಆತಂಕ ಬೇಡ ಎಚ್ಚರಿಕೆ ಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್ ಹೊಸ ಉಪತಳಿಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಆದರೆ ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದು. ಈಗಿನ ಉಪತಳಿ JN.1 ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಜನರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಪತ್ತೆಯಾಗಿದ್ದು […]

ಸಂಸತ್ ರಕ್ಷಣೆ ಇನ್ನು ಮುಂದೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಹೆಗಲಿಗೆ; ಭದ್ರತಾ ಲೋಪ ಬಳಿಕ ಎಚ್ಚೆತ್ತ ಕೇಂದ್ರ ಗೃಹ ಸಚಿವಾಲಯ

ನವದೆಹಲಿ: ಡಿಸೆಂಬರ್ 13 ರಂದು ನಡೆದ ಭದ್ರತಾ ಉಲ್ಲಂಘನೆಯ ಘಟನೆಯ ಬಳಿಕ ಹೊಸ ಸಂಸತ್ತಿನ ಕಟ್ಟಡ ಸಂಕೀರ್ಣದ “ಸಮಗ್ರ ಭದ್ರತೆ” ಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ವಹಿಸಿಕೊಳ್ಳಲಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಕೇಂದ್ರ ಗೃಹ ಸಚಿವಾಲಯವು ಸಂಸತ್ತಿನ ಕಟ್ಟಡ ಸಂಕೀರ್ಣದ ಸಮೀಕ್ಷೆಗೆ ಬುಧವಾರ ನಿರ್ದೇಶನ ನೀಡಿದ್ದು, ಇದರಿಂದ “ಸಿಐಎಸ್‌ಎಫ್ ಭದ್ರತೆ ಮತ್ತು ಅಗ್ನಿಶಾಮಕ ವಿಭಾಗವನ್ನು ಸಮಗ್ರ ಮಾದರಿಯಲ್ಲಿ ನಿಯಮಿತವಾಗಿ ನಿಯೋಜನೆ” ಮಾಡಬಹುದಾಗಿದೆ ಎಂದು ಸುದ್ದಿ ಸಂಸ್ಥೆ ತಿಳಿಸಿದೆ. CISF ಒಂದು […]

ನಾಳೆ (ಡಿ.22) ಮಣಿಪಾಲದಲ್ಲಿ‌ “ಬೇಕ್ ಲೈನ್” ಕೇಕ್ ಶಾಪ್ ಶುಭಾರಂಭ; ಇನ್ಮುಂದೆ ಸ್ವಾದಿಷ್ಟಕರ ವೆರೈಟಿ ಫ್ರೆಶ್ ಕೇಕ್ ಗಳು‌ ನಿಮ್ಮ ಮನೆ ಬಾಗಿಲಿಗೆ ಬರಲಿವೆ.

ಮಣಿಪಾಲ: ಇಲ್ಲಿನ ಅನಂತ ನಗರದಲ್ಲಿರುವ ಉಡುಪಿ ಗ್ರೂಪ್ ಆಫ್ ಇನ್ಸ್ಟಿ ಟ್ಯೂಶನ್ಸ್ ನ ಬಳಿ ಇರುವ ಅವಂತಿ ಕಾರ್ನರಿನಲ್ಲಿ ಡಿ.22 ರಂದು ಹೊಸದಾದ ಕೇಕ್ ಶಾಪ್ ‘ಬೇಕ್ ಲೈನ್’ ಇದರ ಉದ್ಘಾಟನ ಸಮಾರಂಭವು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ನಿಮ್ಮ ಸಂತೋಷದ ಕ್ಷಣಗಳನ್ನು ಸಿಹಿಯೊಂದಿಗೆ ಆಚರಿಸಲು ಬೇಕ್ ಲೈನ್ ಫ್ರೆಶ್ ಕೇಕ್ ಹಾಗೂ ಕನ್ಫೆಕ್ಷನರಿಗಳನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದೆ. ಬೇಕ್ ಲೈನ್ ಶಾಖೆಗಳು ಕಟಪಾಡಿ, ತೆಂಕನಿಡಿಯೂರು, ಮುದರಂಗಡಿ, ಮೂಡುಬೆಳ್ಳೆ, ಕಾರ್ಕಳ, ಕೆಮ್ಮಣ್ಣು, ಶಿರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದೀಗ […]

ರಾಮಮಂದಿರದ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಭಾಗವಹಿಸಲು ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿಗೆ ಆಹ್ವಾನ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಂಗಳವಾರದಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪರವಾಗಿ ನಿಯೋಗದಿಂದ ಆಹ್ವಾನವನ್ನು ಕಳುಹಿಸಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೂ ಆಹ್ವಾನ ಕಳುಹಿಸಲಾಗಿದೆ. ಆದರೆ ಅನಾರೋಗ್ಯ ನಿಮಿತ್ತ ಅವರು ಪಾಲ್ಗೊಳ್ಳಲಾಗುವುದಿಲ್ಲ. ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ, ಟ್ರಸ್ಟ್‌ನ ಪದನಿಮಿತ್ತ ಸದಸ್ಯ, ಆರ್‌ಎಸ್‌ಎಸ್ ಅಖಿಲ […]