2024ರ ಫೆಬ್ರವರಿಯಲ್ಲಿ ವಿಧಾನಮಂಡಲದ ‘ಬಜೆಟ್ ಅಧಿವೇಶನ’ ನಡೆಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿಯಲ್ಲಿ ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ರಾಜ್ಯದ ಹೊರಗೆ ಠೇವಣಿ ಇಟ್ಟಿರುವ ಹಣವನ್ನು ಮರಳಿ ತರುವ ಬಗ್ಗೆಯೂ ಸಚಿವ ಸಂಪುಟ ಚರ್ಚೆ ನಡೆಸಿದೆ. ಬೇರೆಡೆ ಠೇವಣಿ ಇಟ್ಟಿರುವ ಹಣವನ್ನು ಗುರುತಿಸಿ ರಾಜ್ಯ ಖಜಾನೆಗೆ ಮರಳಿ ತರಲು ಸಂಪುಟ ಉಪಸಮಿತಿ ರಚಿಸಲು ಸಿಎಂಗೆ ಅಧಿಕಾರ ನೀಡಿತು. ಈ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳು ಮಂಗಳೂರಿನ ಬ್ಯಾಂಕ್ ವೊಂದರಲ್ಲಿ 56 ಕೋಟಿ ರೂ.ಗಳನ್ನು ಠೇವಣಿ ಇಟ್ಟಿರುವುದು ಕಂಡುಬಂದ ನಂತರ […]

ಶೀಘ್ರದಲ್ಲೇ ಅಕ್ಕಿ, ಬೇಳೆಕಾಳುಗಳ ಬೆಲೆ ಇಳಿಕೆ : ಜನಸಾಮಾನ್ಯರಿಗೆ ಗುಡ್‌ ನ್ಯೂಸ್

ನವದೆಹಲಿ: ಅಕ್ಕಿ ಬೆಲೆಯೊಂದಿಗೆ ಬೇಳೆಕಾಳುಗಳ ಬೆಲೆಯೂ ಇಳಿಕೆಯಾಗಲಿದೆ. ಕಳೆದ ಎರಡು ವರ್ಷಗಳಲ್ಲಿ ಅಕ್ಕಿ ಬೆಲೆ ಶೇ 12ರಷ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಕಾರ್ಯದರ್ಶಿ ಸಂಜೀವ್ ಚೋಪ್ರಾ ಅವರು ಬಾಸ್ಮತಿ ಅಲ್ಲದ ಅಕ್ಕಿಯ ಸಂಸ್ಕರಣಾ ಉದ್ಯಮದ ಪ್ರಮುಖ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಬೆಲೆಗಳನ್ನು ಸಮಂಜಸವಾದ ಮಟ್ಟಕ್ಕೆ ತರಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಳಿಕೊಂಡರು. ಕೇಂದ್ರದ ಮೋದಿ ಸರ್ಕಾರವು ದೇಶೀಯ ಮಾರುಕಟ್ಟೆಯಲ್ಲಿ ಬಾಸ್ಮತಿಯೇತರ ಅಕ್ಕಿಯ ಬೆಲೆಯನ್ನು ತಡೆಯಲು ಅನೇಕ ಪ್ರಯತ್ನಗಳನ್ನು ಪ್ರಾರಂಭಿಸಿದೆ. ಬೆಲೆಯನ್ನು ಕನಿಷ್ಠ […]

ನಿತೀಶ್ ಕುಮಾರ್ ಗೆ ಕರೆ ಮಾಡಿದ ರಾಹುಲ್ ಗಾಂಧಿ : ಪ್ರಧಾನಿ ಹುದ್ದೆಗೆ ಖರ್ಗೆ ಹೆಸರು ಪ್ರಸ್ತಾವ

ಹೊಸದಿಲ್ಲಿ: ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳ INDIA ಮೈತ್ರಿಕೂಟದಲ್ಲಿ ಮತ್ತಷ್ಟು ಬಿಕ್ಕಟ್ಟುಗಳು ತಲೆದೂರಬಹುದು ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಿಗೇ ಗುರುವಾರ ಸಂಜೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಈ ಇಬ್ಬರು ಇಂದು ಸಂಜೆ ಮಾತುಕತೆ ನಡೆಸುವ ನಿರೀಕ್ಷೆ ಇದೆ. ರಾಹುಲ್ ಗಾಂಧಿ ಕರೆಯ ಕಾರ್ಯಸೂಚಿ ಏನು ಎಂಬುದು ಈವರೆಗೆ ತಿಳಿದು ಬಾರದಿದ್ದರೂ, ಬುಧವಾರ ನಡೆದ INDIA ಮೈತ್ರಿಕೂಟದ ಸಭೆಯಲ್ಲಿ […]

ಕೋವಿಡ್ ಆತಂಕದ ನಡುವೆ ‘ಬೆಂಗಳೂರಿನಲ್ಲಿ ಶೇ.30-35 ರಷ್ಟು ಮಂದಿಗೆ ‘ಕ್ರಾನಿಕ್ ಕಾಫ್’

ಬೆಂಗಳೂರು : ಬೆಂಗಳೂರಿನಲ್ಲಿ ಶೇ.30-35 ರಷ್ಟು ಮಂದಿಗೆ ಕ್ರಾನಿಕ್ ಕಾಫ್ ಹರಡಿದೆ ಎಂದು ಹೇಳಲಾಗಿದೆ. ಮಹಾಮಾರಿ ಕೋವಿಡ್ ಭೀತಿ ನಡುವೆ ಈ ‘ಕ್ರಾನಿಕ್ ಕಾಫ್’ ಎಂದು ಹೇಳಲಾಗಿರುವ ಈ ಕೆಮ್ಮು ವೇಗವಾಗಿ ಗಾಳಿಯಲ್ಲಿ ಹರಡುತ್ತಿದೆ . ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದು ಕಡೆ ಕೋವಿಡ್ ಆತಂಕ ಮನೆ ಮಾಡಿದರೆ, ಇನ್ನೊಂದು ಕಡೆ ಹಲವು ಜನರಲ್ಲಿ ಕೆಮ್ಮು ಕಾಣಿಸಿಕೊಂಡಿದೆ. ದೀರ್ಘಕಾಲದ ಕ್ರಾನಿಕ್ ಕಾಫ್ ಕೆಮ್ಮು ಇದು ಕನಿಷ್ಠ ಎಂಟು ವಾರಗಳವರೆಗೆ ಇರುತ್ತದೆ, ಮತ್ತು ಹೆಚ್ಚಾಗಿ ಹೆಚ್ಚು ಕಾಲ ಇರುತ್ತದೆ. […]

ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ವರ್ಷಾಂತ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್

ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 39.50 ರೂ. ಇಳಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಈ ನಡುವೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರಸ್ತುತ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್‌ಗೆ 1,757.50ರೂ. ದರವಿದೆ.ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಈ ಬಾರಿಯ ವರ್ಷಾಂತ್ಯದ ಕ್ರಿಸ್ಮಸ್, ಕ್ಯಾಲೆಂಡರ್ ಹೊಸ ವರ್ಷಾಚರಣೆ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದೆ.