ರಾಮ ಮಂದಿರದ ಗರ್ಭಗುಡಿಯೊಳಗೆ ಶ್ರೀರಾಮಚಂದ್ರನ ಮೊದಲ ನೋಟದ ಅನಾವರಣ

ಅಯೋಧ್ಯೆ: ರಾಮ ಮಂದಿರ ಗರ್ಭಗುಡಿಯಲ್ಲಿ ರಾಮನ ಮೂರ್ತಿಯನ್ನು ಸ್ಥಾಪನೆ ಮಾಡಲಾಗಿದ್ದು, ಅದರ ಮೊದಲನೆ ಫೋಟೋವನ್ನು ವಿಶ್ವ ಹಿಂದೂ ಪರಿಷತ್ತಿನ ಮಾಧ್ಯಮ ಉಸ್ತುವಾರಿ ಶರದ್ ಶರ್ಮಾ ಬಹಿರಂಗಪಡಿಸಿದ್ದಾರೆ. ಐದು ತಲೆಮಾರಿನ ಪ್ರಸಿದ್ಧ ಶಿಲ್ಪಿಗಳ ಕುಟುಂಬದ ಹಿನ್ನೆಲೆಯುಳ್ಳ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ 51 ಇಂಚಿನ ಕೃಷ್ಣಶಿಲೆಯ ಶ್ರೀರಾಮನ ವಿಗ್ರಹವನ್ನು ಗುರುವಾರದಂದು ಗರ್ಭಗೃಹದೊಳಗೆ ಇರಿಸಲಾಗಿದೆ. ದೇವಾಲಯದ ಪವಿತ್ರ ಆವರಣದಲ್ಲಿ ವೈದಿಕ ಬ್ರಾಹ್ಮಣರು ಮತ್ತು ಆಚಾರ್ಯರು ಪ್ರಮುಖ ಪೂಜಾ ವಿಧಿಗಳನ್ನು ಕೈಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎ.ಎನ್.ಐ ವರದಿ ಮಾಡಿದೆ. […]

ಮಲ್ಪೆ: ಶ್ರೀ ರಾಮ ಮಂದಿರ ಜಿ ಎಸ್ ಬಿ ಸಮಾಜದ ವತಿಯಿಂದ ರಾಮ ನಾಮ ಹವನ

ಮಲ್ಪೆ: ಶ್ರೀ ರಾಮ ಮಂದಿರ ಜಿ ಎಸ್ ಬಿ ಸಮಾಜದ ವತಿಯಿಂದ ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರ ದೇವರ ಪ್ರತಿಷ್ಠೆಯ ದಿನ ಬೆಳ್ಳಿಗೆ ಶ್ರೀ ರಾಮ ಮಂದಿರದಲ್ಲಿ ಸಾಮೂಹಿಕ ಪ್ರಾರ್ಥನೆ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ರಾಮ ನಾಮ ಹವನ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಧಾರ್ಮಿಕ ಸಭಾ ಕಾರ್ಯಕ್ರಮ ಶ್ರೀ ರಾಮ ಮಂದಿರ ಜಿ ಎಸ್ ಬಿ ಸಮಾಜ ಮಲ್ಪೆ ಇದರ ಕೆ. ಗೋಕುಲದಾಸ್ ಪೈ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಲಿದೆ. ಮುಖ್ಯ ಅತಿಥಿಗಳಾಗಿ ಶಾಸಕ ಯಶಪಾಲ್ […]