ಕಿದಿಯೂರು ಹೋಟೆಲ್ ಕಾರಣಿಕ ನಾಗ ಸನ್ನಿಧಿಯಲ್ಲಿ ಬ್ರಹ್ಮಕುಂಬಾಭಿಷೇಕ, ರಜತ ಕವಚ ಸಮರ್ಪಣೆ

ಉಡುಪಿ: ಕಿದಿಯೂರು ಹೋಟೆಲ್ ಕಾರಣಿಕ ನಾಗ ಸನ್ನಿಧಿಯಲ್ಲಿ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವ ಅಂಗವಾಗಿ ನಾಗದೇವರಿಗೆ ವಿಶೇಷ ಅಲಂಕಾರವು ವೇ. ಮೂ. ಕಬಿಯಾಡಿ ಜಯರಾಮ ಆಚಾರ್ಯ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಾಗ ದೇವರಿಗೆ ನೂತನವಾಗಿ ನಿರ್ಮಿಸಿದ ಭವ್ಯ ರಜತ ಮಂಟಪ, ರಜತ ಕವಚ ಮತ್ತು ಸ್ವರ್ಣ ಲೇಪಿತ ರಜತ ಪ್ರಭಾವಳಿ, ರಜತ ಬಲಿ ಮೂರ್ತಿಯನ್ನು ಸಮರ್ಪಿಸಲಾಯಿತು. ಬುಧವಾರ ಮೀನ ಲಗ್ನದ ಸುಮೂರ್ತಹದಲ್ಲಿ ಅಷ್ಟೋತ್ತರ ಶತ ಕಲಶಾಭಿಷೇಕದ ಧಾರ್ಮಿಕ ಪೂಜಾ ವಿಧಿ ವಿಧಾನಗಳೊಂದಿಗೆ ಬ್ರಹ್ಮಕುಂಬಾಭಿಷೇಕ, ಪ್ರಸನ್ನ ಪೂಜೆ ನಡೆಯಿತು. […]

ಮಂಗಳೂರು: ಫೆಬ್ರವರಿ 4 ರಂದು 16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ ಕಾರ್ಯಕ್ರಮ

ಮಂಗಳೂರು: ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಮತ್ತು ಅಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಇವರ ಸಹಯೋಗದೊಂದಿಗೆ 16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ ಫೆಬ್ರವರಿ 4 ರಂದು ಸಂಜೆ 4 ಗಂಟೆಗೆ ಬೋಂದೆಲ್ ಆಂಗ್ಲ ಮಾಧ್ಯಮ ಶಾಲಾ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಸರಾಂತ ಸಂಗೀತಗಾರರು, ನೃತ್ಯಗಾರರು, ಹಾಸ್ಯಗಾರರು ಪ್ರದರ್ಶನ ನೀಡಲಿರುವರು. ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಉಚಿತ ಪ್ರವೇಶದೊಂದಿಗೆ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.