ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಗೆ ಕಿರಿಕ್ ಪಾರ್ಟಿ ‘ರಶ್ಮಿಕಾ ಮಂದಣ್ಣ’ ಹೆಸರು ಸೇರ್ಪಡೆ..!

ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಗೆ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೆಸರು ಸೇರ್ಪಡೆಗೊಂಡಿದೆ. ಮಂದಣ್ಣರ ವೃತ್ತಿಯ ಗ್ರಾಫು ವರ್ಷದಿಂದ ವರ್ಷಕ್ಕೆ ಏರುತ್ತಲೇ ಸಾಗುತ್ತಿದೆ. ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ನಟನೆ ಆರಂಭಿಸಿದ ರಶ್ಮಿಕಾ ಮಂದಣ್ಣ ಟಾಲಿವುಡ್​ನ ಟಾಪ್ ನಟಿ ಎನಿಸಿಕೊಂಡು ಈಗ ಬಾಲಿವುಡ್​ನಲ್ಲಿಯೂ ಹವಾ ಎಬ್ಬಿಸಿದ್ದಾರೆ. ಬಾಲಿವುಡ್​ನ ಸ್ಟಾರ್ ನಟರುಗಳೊಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದೆಲ್ಲದರ ನಡುವೆ ಗೌರವವೊಂದಕ್ಕೆ ರಶ್ಮಿಕಾ ಮಂದಣ್ಣ ಭಾಜನರಾಗಿದ್ದಾರೆ. ಇದೀಗ ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ ಹೆಸರು ಸೇರ್ಪಡೆಗೊಂಡಿದೆ. ಪ್ರತಿಷ್ಠಿತ ಫೋರ್ಬ್ಸ್ […]

ರಾಜ್ಯದಲ್ಲಿ ಬಜೆಟ್ ಮಂಡನೆ: ನನ್ನ ಜೀವಮಾನದಲ್ಲೇ ಇಂತಹ ಕಳಪೆ ಬಜೆಟ್ ನೋಡಿಲ್ಲ – ಬಿ.ಎಸ್ ಯಡಿಯೂರಪ್ಪ ಕಿಡಿ

ಬೆಂಗಳೂರು: ರಾಜ್ಯದಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಇಂದು ಸಿಎಂ ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಈ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ‘ಸಿದ್ದರಾಮಯ್ಯನವರು ಕಳಪೆ ಬಜೆಟ್ ಮಂಡಿಸಿದ್ದಾರೆ. ನನ್ನ ಜೀವಮಾನದಲ್ಲೇ ಇಂತಹ ಕಳಪೆ ಬಜೆಟ್ ನೋಡಿಲ್ಲ. ಹದಿನಾಲ್ಕು ಬಜೆಟ್ಗಳನ್ನು ಮಂಡಿಸಿರುವ ಸಿದ್ದರಾಮಯ್ಯರಿಂದ ಇಂತಹ ಕಳಪೆ ಬಜೆಟ್ ನಿರೀಕ್ಷಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ. ‘ಈ ಬಾರಿ ಬಜೆಟ್ನ ಬಹುತೇಕ ಅಂಶ ಕೇಂದ್ರ ಸರ್ಕಾರವನ್ನು ದೂರಲು ಮೀಸಲಿಡಲಾಗಿದೆ. ದೆಹಲಿ ಪ್ರತಿಭಟನೆಯ ಮುಂದುವರೆದ ಭಾಗವಾಗಿರುವ ಈ […]

ಕಾಪು: ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆ

ಉಡುಪಿ: ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್ (26)ಎಂದು ಗುರುತಿಸಲಾಗಿದೆ. ಈತ ಗುರುವಾರ ರಾತ್ರಿ 12 ಗಂಟೆ ವೇಳೆಗೆ ದೇವಸ್ಥಾನದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಪತ್ತೆಯಾಗಿದೆ. ಹೀಗಾಗಿ ಈತ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾಪು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಡುಪಿಗೆ ಕೊಂಡೊಯ್ದಿದ್ದಾರೆ. […]

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಪತ್ರಕರ್ತರ ಸಂಘದಿಂದ ಅಭಿನಂದನೆ

ಬೆಂಗಳೂರು: ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ವ್ಯವಸ್ಥೆಯನ್ನು ಸರಕಾರ ತಿಳಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಈ ಬಗ್ಗೆ ಭರವಸೆ ನೀಡಿದ್ದರು. ಈಗ ಇದನ್ನು ಕಾರ್ಯ ರೂಪಕ್ಕೆ ತಂದಿದ್ದಾರೆ. ಹೀಗಾಗಿ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಿಎಂ ಬಜೆಟ್ ಗೆ ವಿಶೇಷ ಅಭಿನಂದನೆ ವ್ಯಕ್ತಪಡಿಸಿದ್ದಾರೆ. ಈ ಮೂಲಕ ರಾಜ್ಯ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿ , ನುಡಿದಂತೆ ನಡೆದಿದ್ದೀರಿ, ಹಾಗಾಗಿ ದಶಕಗಳ ಕನಸ್ಸು […]

ಹಿರಿಯಡಕ: ಅಂಗನವಾಡಿ ಕೇಂದ್ರಗಳ ಆಹಾರ ಸರಬರಾಜಿನಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ

ಹಿರಿಯಡಕ :  ಹಿರಿಯಡಕ ಸಮೀಪದ ಅಂಗನವಾಡಿ ಕೇಂದ್ರಗಳಿಗೆ ಆಹಾರ ಸರಬರಾಜು ನಡೆಸುವ ಎಮ್.ಎಸ್.ಪಿ.ಸಿ. ಯ ಪ್ರಧಾನ ಕಚೇರಿಯಲ್ಲಿ ಕೋಟ್ಯಂತರ ರೂ. ಗೋಲ್ ಮಾಲ್ ನಡೆದಿದೆ ಎಂದು ಅದರ ಅಧ್ಯಕ್ಷರು ಮತ್ತು ಸದಸ್ಯರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ದೂರು‌ ನೀಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಎಮ್.ಎಸ್.ಪಿ.ಸಿ. ಯಲ್ಲಿ ಲೆಕ್ಕಪತ್ರ ನಿರ್ವಹಣೆ ಮಾಡುವ ಭವ್ಯ ಶೆಟ್ಟಿ ಎಂಬಾಕೆ ಅದರಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಎಮ್.ಎಸ್.ಪಿ.ಸಿ. ಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಖಜಾಂಚಿಯವರು ಉಡುಪಿ […]