ರಾಜಯೋಗಿನಿ ಬ್ರಹ್ಮಕುಮಾರಿ ವಸಂತಿ ನಿಧನ

ಕಾರ್ಕಳ: ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಸಂತಿ (83) ಫೆ.25ರಂದು ಎಸ್.ವಿ.ಟಿ. ಶಾಲಾ ರಸ್ತೆಯ ಸೇವಾಕೇಂದ್ರದಲ್ಲಿ ನಿಧನರಾದರು. ಮೃತರು 35ವರ್ಷಗಳಿಂದ ಈಶ್ವರೀಯ ಸೇವೆಯಲ್ಲಿ ತತ್ಪರರಾಗಿದ್ದರು.

ಗಝಲ್ ಗಾಯಕ ಪಂಕಜ್ ಉದಾಸ್ ಇನ್ನಿಲ್ಲ

ಬಹುಭಾಷಾ ಹಿನ್ನೆಲೆ ಗಾಯಕ ಪಂಕಜ್ ಉದಾಸ್ ಇಂದು (26 ಫೆಬ್ರವರಿ 2024) ನಿಧನರಾಗಿದ್ದಾರೆ. ಇತ್ತೀಚೆಗೆ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಗಾಯಕ ಪಂಕಜ್ ಉದಾಸ್ ಇಹಲೋಕ ತ್ಯಜಿಸಿದ್ದಾರೆ. ಪಂಕಜ್ ಉದಾಸ್ ಅವರು ಮುಖ್ಯವಾಗಿ ಬಾಲಿವುಡ್ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಹಿಂದಿ ಚಿತ್ರಗಳ ಅಸಂಖ್ಯಾತ ಗೀತೆಗಳನ್ನು ಹಾಡಿದ್ದ ಗಾಯಕ ಪಂಕಜ್ ಉದಾಸ್ ಅವರು ಕನ್ನಡದಲ್ಲಿ ಕಿಚ್ಚ ಸುದೀಪ್ ನಟನೆಯ ‘ಸ್ಪರ್ಶ’ ಚಿತ್ರದ ‘ಚೆಂದಕ್ಕಿಂತ ಚೆಂದ ನೀನೇ ಸುಂದರ..,’ ಗೀತೆಯನ್ನು ಹಾಡಿ ಸ್ಯಾಂಡಲ್‌ವುಡ್ ಸಿನಿಪ್ರೇಕ್ಷಕರ ಮೆಚ್ಚುಗೆ ಕೂಡ ಗಳಿಸಿದ್ದರು. ವಿದೇಶಗಳಲ್ಲಿ ಕೂಡ ತಮ್ಮ […]

ರಾಷ್ಟ್ರದ ಪ್ರಪ್ರಥಮ ಚಾಟ್‌ಬಾಟ್ ‘Krutrim AI’ ಪ್ರಾರಂಭಿಸಿದ ಓಲಾ ಮುಖ್ಯಸ್ಥ: 10 ಕ್ಕೂ ಹೆಚ್ಚು ಭಾರತೀಯ ಭಾಷೆಗಳಲ್ಲಿ ಲಭ್ಯ

ಹೊಸದಿಲ್ಲಿ: ಓಲಾ ಸಂಸ್ಥಾಪಕ ಭವಿಶ್ ಅಗರ್ವಾಲ್ ಸೋಮವಾರದಂದು ಭಾರತದ ಕೃತಕ ಬುದ್ಧಿಮತ್ತೆ (AI) ಚಾಟ್‌ಬಾಟ್ ‘Krutrim AI’ ಅನ್ನು ಪ್ರಾರಂಭಿಸಿದ್ದಾರೆ. ಓಪನ್‌ಎಐನ ಚಾಟ್‌ಜಿಪಿಟಿ (ChatGpt) ಮತ್ತು ಗೂಗಲ್‌ನ ಜೆಮಿನಿ(Gemini)ಗೆ ಪೈಪೋಟಿಯನ್ನು ನೀಡಲು Krutrim AI ಅನ್ನು ಅಭಿವೃದ್ದಿ ಪಡಿಸಲಾಗಿದೆ. AI ಚಾಟ್‌ಬಾಟ್ ಈಗ ಸಾರ್ವಜನಿಕ ಬೀಟಾ ವರ್ಷನ್ ನಲ್ಲಿ ಹೊರಹೊಮ್ಮುತ್ತಿದೆ. “ಭರವಸೆ ನೀಡಿದಂತೆ, ಇಂದು Krutrim AI ಸಾರ್ವಜನಿಕ ಬೀಟಾ ರೋಲ್‌ಔಟ್ ಅನ್ನು ಪ್ರಾರಂಭಿಸುತ್ತಿದೆ” ಎಂದು ಅಗರ್ವಾಲ್ X ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ನಮಗೆ, ನಮ್ಮ […]

ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹತ್ತನೇ ತರಗತಿ, ಪಿಯುಸಿ, ಪದವಿ, ಎಂಜಿನಿಯರಿಂಗ್, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗಾಕಾಂಕ್ಷಿಗಳಿಗಾಗಿ ಏರ್ಪಡಿಸಲಾಗಿರುವ ಉದ್ಯೋಗ ಮೇಳದಲ್ಲಿ ಒಂದು ಲಕ್ಷ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸೋಮವಾರದಿಂದ ಆರಂಭವಾಗಿರುವ ಯುವ ಸಮೃದ್ಧಿ ಬೃಹತ್ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಯುವಕರಿಗೆ ಸ್ಥಳದಲ್ಲೇ ಉದ್ಯೋಗ ಕೊಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಲ್ಲೊಂದಾಗಿತ್ತು. ಉದ್ಯೋಗದ […]

ಮೂಡುಬಿದಿರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕೇರಳದಲ್ಲಿ ಪ್ರಿಯಕರನೊಂದಿಗೆ ಪತ್ತೆ.

ಮೂಡುಬಿದಿರೆ: ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಬಿಪಿಟಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶುಕ್ರವಾರ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ತನ್ನ ಪ್ರಿಯಕರನನ್ನು ಕೇರಳದಲ್ಲಿ ವಿವಾಹವಾಗಿ ಪತ್ತೆಯಾಗಿದ್ದಾಳೆ. ಬೈಂದೂರು ತಾಲೂಕಿನ ಕೊಲ್ಲೂರು ನಿವಾಸಿ 19ವರ್ಷದ ಆದಿರಾ ಎಂಬಾಕೆ ಶುಕ್ರವಾರ ಬೆಳಿಗ್ಗೆ ಕಾಣೆಯಾಗಿದ್ದಳು. ಅಂದು ತನ್ನ ಸಹಪಾಠಿಗಳೊಂದಿಗೆ ಕಾಲೇಜ್ ಬಸ್ ನಲ್ಲಿ ಬಂದು ಮೂಡುಬಿದಿರೆಯ ಕನ್ನಡ ಭವನದಲ್ಲಿ ಇಳಿದಿದ್ದಳು. ಆ ಬಳಿಕ ಅಲ್ಲಿಂದ ಕಾಲೇಜಿಗೆ ಹೋಗದೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಪೋಷಕರು ಮೂಡುಬಿದಿರೆ ಠಾಣೆಯಲ್ಲಿ […]