ಉಡುಪಿ ಜಿಲ್ಲಾಸ್ಪತ್ರೆಯ ಸರ್ಜನ್ ಆಗಿ ಡಾ.ಅಶೋಕ್ ಹೆಚ್. ಅಧಿಕಾರ ಸ್ವೀಕಾರ.

ಉಡುಪಿ: ಡಾ. ಅಶೋಕ್ ಹೆಚ್, ಎಂ.ಬಿ.ಬಿ.ಎಸ್, ಡಿ.ಪಿ.ಎಚ್ ಇವರು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಸರ್ಜನ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು ಅನುಭವಿ ವೈದ್ಯರಾಗಿ ಸೇವೆ ಸಲ್ಲಿಸಿದವರು. ಅಲ್ಲದೆ 2012ರ ಅತ್ಯುತ್ತಮ DAPCO ಅಧಿಕಾರಿಯಾಗಿ, 2013ರಲ್ಲಿ ಉಡುಪಿ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ, 2021ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿ, ಜನ ಮೆಚ್ಚುಗೆ ಪಡೆದವರು. ಉಡುಪಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಜವಾಬ್ದಾರಿ ಸ್ವೀಕರಿಸಿದ ಅಲ್ಪಾವಧಿಯಲ್ಲಿಯೇ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ […]

2024 – ಲೋಕಸಭಾ ಚುನಾವಣೆಗೆ ದಿನ ನಿಗದಿ: ಏ.19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ ಚುನಾವಣೆ; ಜೂನ್ 4 ರಂದು ಮತಎಣಿಕೆ

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ದಿನಾಂಕಗಳನ್ನು ಘೋಷಿಸಿದರು. ಲೋಕಸಭೆ ಚುನಾವಣೆಯು ಏಳು ಹಂತಗಳಲ್ಲಿ ನಡೆಯಲಿದೆ. 1 ಹಂತ ಏ.19 ರಂದು, 2 ನೇ ಹಂತ ಏ.26 ರಂದು, 3ನೇ ಹಂತ ಮೇ 7 ರಂದು (ಕರ್ನಾಟಕ), 4ನೇ ಹಂತ ಮೇ 13ರಂದು, 5 ನೇ ಹಂತವು ಮೇ 20 ರಂದು, 6ನೇ ಹಂತ ಮೇ 25ರಂದು, 7ನೇ ಹಂತ ಜೂನ್ 1 ರಂದು ನಡೆಯಲಿದೆ. ಆಂಧ್ರ ಪ್ರದೇಶ […]

ಮಾತೃಪಕ್ಷಕ್ಕೆ ಮರಳಿದ ಅರುಣ್ ಕುಮಾರ್ ಪುತ್ತಿಲ? ಬಿಜೆಪಿ ಪಾಳಯದಲ್ಲಿ ಗೊಂದಲ!! ಮೋದಿ ಗೆಲ್ಲಿಸಲು ಸಜ್ಜಾದ ಪುತ್ತಿಲ ಪರಿವಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಬಲ ನಾಯಕ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಬಿಜೆಪಿ (BJP) ಸೇರ್ಪಡೆ ವಿಚಾರದಲ್ಲಿ ಗೊಂದಲ ಉಂಟಾಗಿದೆ. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭೇಟಿಯಾಗಿದ್ದು, ಪುತ್ತಿಲ ಬಿಜೆಪಿಗೆ ಮರಳಲಿದ್ದಾರೆ ಎನ್ನಲಾಗಿತ್ತು. ಆದರೆ ಶುಕ್ರವಾರ ಪುತ್ತೂರಿನಲ್ಲಿ ನಡೆದ ಸಭೆಯಲ್ಲಿ ಸ್ಥಳೀಯ ಬಿಜೆಪಿ ನಾಯಕರ ಬೆದರಿಕೆ ನಂತರ ಪುತ್ತಿಲ ಪಕ್ಷ ಸೇರ್ಪಡೆ ಮಾಧ್ಯಮದ ವರದಿಯಷ್ಟೇ ಎಂದು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿ ಉಲ್ಟಾ ಹೊಡೆದಿದ್ದರು. ಇದೀಗ ಪುತ್ತಿಲ ಅವರು […]

ಬ್ರಹ್ಮಾವರ: ಮಾ. 17 ರಂದು ಬ್ಲೂಬೆರಿ ಹಿಲ್ಸ್ ಅಪಾರ್ಟ್ ಮೆಂಟ್ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಬ್ರಹ್ಮಾವರ: ಎನ್.ಎನ್ ಇನ್ಫ್ರಾಸ್ಟ್ರಕ್ಚರ್ ಡೆವೆಲಪರ್ಸ್ ನವರ ರೇರಾ ಪ್ರಮಾಣೀಕೃತ ಬ್ಲೂಬೆರಿ ಹಿಲ್ಸ್ ಅಪಾರ್ಟ್ ಮೆಂಟ್ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಮಾ.17 ರಂದು ಬೆಳಿಗ್ಗೆ 9.15 ಕ್ಕೆ ವಾಲೆಂಟೈನ್ ರೆಸಿಡೆನ್ಸಿ ಬಳಿ ನಡೆಯಲಿದ್ದು, ಫಾ.ಜಾನ್ ಫೆರ್ನಾಂಡೀಸ್ ಆಶೀರ್ವಚನ ನೀಡಲಿದ್ದಾರೆ. 3,2 ಮತ್ತು 1 ಬಿ.ಎಚ್.ಕೆ ಅಪಾರ್ಟ್ ಮೆಂಟ್ ಗಳು ಸಕಲ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದ್ದು ಹೆಚ್ಚಿನ ಮಾಹಿತಿಗೆ ನೆಯೋನ್ಸ್ ಆಂಟನಿ ಡಿಸೋಜ:9741470799, ಪೀಟರ್ ಡಿಸೋಜ: 9448471127 ಇವರನ್ನು ಸಂಪರ್ಕಿಸಬಹುದು.

ಮಾ.17(ನಾಳೆ) ಪೆರ್ಣಂಕಿಲ ದೇವಸ್ಥಾನದ ಬ್ರಹ್ಮಕಲಶೋತ್ಸವ ನಿಮಿತ್ತ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ

ಉಡುಪಿ: ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾ.17 ರಂದು ಮಧ್ಯಾಹ್ನ 2.30 ರಿಂದ ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ಜರಗಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಾಲಯದ ಪ್ರಕಟಣೆ ತಿಳಿಸಿದೆ.