ವಿಜೃಂಭಣೆಯ ಪೆರ್ಡೂರು ಜಾತ್ರಾ ಮಹೋತ್ಸವ: ಪ್ರಸನ್ನ ಪೆರ್ಡೂರು ಅವರು ಕ್ಲಿಕ್ಕಿಸಿದ ಸುಂದರವಾದ ಚಿತ್ರಗಳು..

ಪೆರ್ಡೂರು: ಶ್ರೀ ಕ್ಷೇತ್ರ ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ರಥೋತ್ಸವ ಮೆರವಣಿಗೆಯು ಮಾ.16 ರಂದು ಸಾಯಂಕಾಲ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಛಾಯಾಗ್ರಾಹಕ ಪ್ರಸನ್ನ ಪೆರ್ಡೂರು ಅವರು ಶ್ರೀಮನ್ಮಹಾರಥೋತ್ಸವ, ಹಚ್ಚಡ ಸೇವೆ, ಸುಡುಮದ್ದು ಪ್ರದರ್ಶನ, ಪಲ್ಲಕ್ಕಿ ಉತ್ಸವ, ತೆಪ್ಪೋತ್ಸವದ, ನಾಟಕ ಹಾಗೂ ಯಕ್ಷಗಾನದ ಸುಂದರವಾದ ಚಿತ್ರವನ್ನು ಕ್ಲಿಕ್ಕಿಸಿದ್ದಾರೆ.

ಬಾರಕೂರು: ಸ್ಕೂಟಿ ಢಿಕ್ಕಿ – ಸೈಕಲ್‌ ಸವಾರ ಮೃತ್ಯು.

ಬ್ರಹ್ಮಾವರ: ಸ್ಕೂಟಿ ಒಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್‌ ಸವಾರ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ಸಮೀಪದ ಬಾರಕೂರು ಹೇರಾಡಿ ಬಳಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ಶೀನ ಮರಕಾಲ (76) ಎಂದು ತಿಳಿದು ಬಂದಿದೆ. ಅವರು ಬಾರಕೂರು ಕಡೆ ಬರುತ್ತಿದ್ದಾಗ ಸ್ಕೂಟಿ ಹಿಂದಿನಿಂದ ಢಿಕ್ಕಿ ಹೊಡೆಯತು. ತಲೆ, ಮುಖಕ್ಕೆ ತೀವ್ರ ಗಾಯಗಳಾಗಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸ್ಕೂಟಿ ಸವಾರ ರಾಮಚಂದ್ರ ಸೋಮಯಾಜಿ ಅವರಿಗೂ ಗಾಯಗಳಾಗಿವೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೌಶಾಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ಹಾಗೂ ಎಲೆಕ್ಟಾçನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಅರ್ಹ ಪರಿಶಿಷ್ಟ ಪಂಗಡದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಡಳಿತ ಕಛೇರಿಗಳ ಸಂಕೀರ್ಣದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ […]