ಬೀದಿ ನಾಯಿಗೆ ಅನ್ನಹಾಕಿದ್ದಕ್ಕೆ ಮಹಿಳೆಗೆ ಹಲ್ಲೆ: ಆರೋಪಿ ಬಂಧನ

ಉಡುಪಿ: ಇಂದ್ರಾಳಿ ರೈಲು ನಿಲ್ದಾಣದ ಸಮೀಪ ನಾಯಿಗಳಿಗೆ ಅನ್ನ ಹಾಕಿದ ಕಾರಣಕ್ಕೆ ಚಂದ್ರಕಾಂತ್ ಎಂಬಾತ ಮಹಿಳೆಗೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ಮಹಿಳೆ ಬೇಬಿಗೆ (50) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ತಲೆಗೆ ಹೊಲಿಗೆ ಹಾಕಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಣಿಪಾಲ ಠಾಣೆ ಪೊಲೀಸರು ಆರೋಪಿ ಚಂದ್ರಕಾಂತನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪ್ರಕರಣದ ವಿವರ: ಹಲ್ಲೆಗೊಳಗಾದ ಬೇಬಿ ಪ್ರಾಣಿ ದಯಾ ಸಂಘಗಳು ನೀಡುವ ಆಹಾರವನ್ನು ನಗರದ ಹಲವು ಕಡೆಗಳಲ್ಲಿ […]

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಉಡುಪಿ-ಚಿಕ್ಕಮಗಳೂರಿಗೆ ಜಯಪ್ರಕಾಶ್‌ ಹೆಗ್ಡೆ; ದಕ್ಷಿಣ ಕನ್ನಡಕ್ಕೆ ಆರ್‌. ಪದ್ಮರಾಜ್‌ ಹೆಸರು ಅಂತಿಮ

ಬೆಂಗಳೂರು: ಕಾಂಗ್ರೆಸ್‌ ಉಡುಪಿ-ಚಿಕ್ಕಮಗಳೂರಿಗೆ ಜಯಪ್ರಕಾಶ್‌ ಹೆಗ್ಡೆ ಮತ್ತು ದಕ್ಷಿಣ ಕನ್ನಡಕ್ಕೆ ಆರ್‌. ಪದ್ಮರಾಜ್‌ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಎರಡು ಕ್ಷೇತ್ರ ಸೇರಿ 17 ಕ್ಷೇತ್ರಗಳ ಕೈ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದ್ದು, ಇಂದು ಪಟ್ಟಿ ಘೋಷಣೆಯಾಗಲಿದೆ. ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದಿಲ್ಲಿಯಲ್ಲಿ ನಡೆದ ಸಭೆಯಲ್ಲಿ ಚುನಾವಣಾ ಸಮಿತಿ ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ […]